ಅವಿಭಜಿತ ಬಳ್ಳಾರಿ ಜಿಲ್ಲೆಯಲ್ಲಿ ಘೋರ ಬರಗಾಲ: ಆರ್‌.ಅಶೋಕ್‌

KannadaprabhaNewsNetwork |  
Published : Jul 31, 2026, 02:30 AM IST
ಫೋಟೋವಿವರ- (30ಎಚ್‌ಪಿಟಿ4) ಹೊಸಪೇಟೆ ತಾಲ್ಲೂಕಿನ ಭುವನಹಳ್ಳಿಯಲ್ಲಿ ರಾಜ್ಯದ ಪ್ರತಿಪಕ್ಷದ ನಾಯಕ ಆರ್‌. ಅಶೋಕ ಗುರುವಾರ ಬರ ಅಧ್ಯಯನ ನಡೆಸಿದ ರೈತರೊಂದಿಗೆ ಮಾತನಾಡಿದರು | Kannada Prabha

ಸಾರಾಂಶ

ವಿಜಯನಗರ, ಬಳ್ಳಾರಿ ಜಿಲ್ಲೆಗಳು ತೀವ್ರವಾಗಿ ಬರಗಾಲದಿಂದ ತತ್ತರಿಸಿವೆ.

ಹೊಸಪೇಟೆ: ಅವಿಭಜಿತ ಬಳ್ಳಾರಿ ಜಿಲ್ಲೆ ದೇಶದಲ್ಲೇ ಅತ್ಯಂತ ಘೋರ ಬರಗಾಲ ಸ್ಥಿತಿಯಿಂದ ತತ್ತರಿಸಿದೆ. ಈ ಎರಡೂ ಜಿಲ್ಲೆಗಳನ್ನು ತಕ್ಷಣ ಬರಪೀಡಿತ ಜಿಲ್ಲೆಗಳೆಂದು ಸರ್ಕಾರ ಘೋಷಿಸಬೇಕು ಎಂದು ರಾಜ್ಯದ ಪ್ರತಿಪಕ್ಷದ ನಾಯಕ ಅಶೋಕ ಆಗ್ರಹಿಸಿದರು.

ತಾಲೂಕಿನ ಭುವನಹಳ್ಳಿಯಲ್ಲಿ ಗುರುವಾರ ಬರ ಅಧ್ಯಯನ ನಡೆಸಿದ ಅವರು, ವಿಜಯನಗರ, ಬಳ್ಳಾರಿ ಜಿಲ್ಲೆಗಳು ತೀವ್ರವಾಗಿ ಬರಗಾಲದಿಂದ ತತ್ತರಿಸಿವೆ. ಸರ್ಕಾರ ಸಂಪುಟ ವಿಸ್ತರಣೆಯಲ್ಲೇ ಮುಳುಗಿದೆ. ರೈತರನ್ನು ಸಂಪೂರ್ಣ ಮರೆತುಬಿಟ್ಟಿದೆ. ಬರ ನಿರ್ವಹಣೆಯಲ್ಲಿ ಅದು ಸಂಪೂರ್ಣ ವಿಫಲವಾಗಿದೆ ಎಂದರು.ಮುಖ್ಯಮಂತ್ರಿಗೆ ರೈತರ ಬಗ್ಗೆ ಯಾವುದೇ ಕಾಳಜಿ ಇಲ್ಲ. ದಿನಕ್ಕೆ 3-4 ಜಿಲ್ಲೆಗಳಿಗೆ ಭೇಟಿ ನೀಡಿ ಅಧಿಕಾರಿಗಳೊಂದಿಗೆ ಸಭೆ ನಡೆಸಿ ರೈತರ ಬಗ್ಗೆ ಕಾಳಜಿ ವಹಿಸಬೇಕಾಗಿತ್ತು. ಆದರೆ ತಮ್ಮ ಸಚಿವ ಸಂಪುಟ ರಚನೆಯಲ್ಲಿ ಬಿಸಿಯಾಗಿದ್ದಾರೆ ಎಂದು ಅವರು ಅಸಮಾಧಾನ ವ್ಯಕ್ತಪಡಿಸಿದರು.

ಬರ ಘೋಷಣೆ ಮಾಡಿದ ಬಳಿಕವೇ ಕೇಂದ್ರ ಸರ್ಕಾರದ ಅಧ್ಯಯನ ತಂಡ ರಾಜ್ಯಕ್ಕೆ ಭೇಟಿ ನೀಡಿ ಪರಿಸ್ಥಿತಿ ಪರಿಶೀಲಿಸಲು ಸಾಧ್ಯವಾಗುತ್ತದೆ. ಆಗಸ್ಟ್ 15ರ ನಂತರ ಬರ ಘೋಷಣೆ ಮಾಡಿದರೆ ರೈತರಿಗೆ ಯಾವುದೇ ಪ್ರಯೋಜನವಿಲ್ಲ. ಬೆಳೆ ಸಂಪೂರ್ಣ ಹಾಳಾದ ನಂತರ ಪರಿಹಾರ ಘೋಷಿಸುವುದರಿಂದ ಸಂಕಷ್ಟ ನಿವಾರಣೆಯಾಗುವುದಿಲ್ಲ ಎಂದರು.

ಶಾಸಕರಾದ ಕೃಷ್ಣ ನಾಯ್ಕ್‌, ಬಿ.ಪಿ.ಹರೀಶ್‌, ಪಕ್ಷದ ಜಿಲ್ಲಾ ಘಟಕದ ಅಧ್ಯಕ್ಷ ಎಸ್‌.ಸಂಜೀವ ರೆಡ್ಡಿ, ಜಿಲ್ಲಾ ಉಪಾಧ್ಯಕ್ಷ ಬಲಹುಣಿಸಿ ರಾಮಣ್ಣ, ಎಸ್‌ಟಿ ಮೋರ್ಚಾ ಅಧ್ಯಕ್ಷ ಬಂಗಾರು ಹನುಮಂತು, ಒಬಿಸಿ ಮೋರ್ಚಾ ಉಪಾಧ್ಯಕ್ಷ ಅಯ್ಯಾಳಿ ತಿಮ್ಮಪ್ಪ, ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ಕೆ. ಎಸ್. ರಾಘವೇಂದ್ರ, ಎಸ್‌. ಕೃಷ್ಣನಾಯ್ಕ, ಗುಳಿಗಿ ವೀರೇಂದ್ರ, ಜಿಲ್ಲಾ ಯುವ ಮೋರ್ಚಾ ಅಧ್ಯಕ್ಷ ಕಿಚಡಿ ಕೊಟ್ರೇಶ್‌, ಮುಖಂಡರಾದ ಬಲಹು ಶಂಕರ್ ಮೇಟಿ ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಡಾ. ವೆಂಕಟರಾಮ್ ಕಟ್ಟಿಗೆ ರಾಷ್ಟ್ರೀಯ ಸಮುದಾಯ ಸೇವಾ ಪ್ರಶಸ್ತಿ
ಸಮಾಜಕ್ಕೆ ಅರ್ಪಿತವಾದ ಜೀವನವೇ ಪಾವನ: ಡಾ. ತೋಂಟದ ಸಿದ್ಧರಾಮ ಮಹಾಸ್ವಾಮಿಗಳು