ಕನ್ನಡಪ್ರಭ ವಾರ್ತೆ, ಚಿಕ್ಕಬಳ್ಳಾಪುರ:
ಕೆಲವು ದಿನದ ಹಿಂದೆ ಈ ಬಗ್ಗೆ ನಗರಸಭೆ ಅಧಿಕಾರಿಗಳಿಗೆ ಮನವಿ ಸಲ್ಲಿಸಲಾಗಿತ್ತು. ಅವರು ಚೇಂಬರ್ಗೆ ಸಕ್ಕಿಂಗ್ ಮಿಷನ್ ಹಾಕಿ ನೀರು ಹರಿಯಿತೆಂದು ಕೈ ತೊಳೆದುಕೊಂಡರು. ಆದರೆ ಈಚೆಗೆ ಸುರಿದ ಮಳೆಯಿಂದಾಗಿ ಚೇಂಬರ್ ಕಟ್ಟಿಕೊಂಡು ಕಲುಷಿತ ನೀರು ರಸ್ತೆ ಮಧ್ಯದಲ್ಲಿ ಹರಿಯುತ್ತಿದೆ. ಇದರ ದುರ್ವಾಸನೆ ತಾಳಲು ಆಗದು ಎಂದು ಸ್ಥಳೀಯ ನಿವಾಸಿಗಳು ಮತ್ತು ರಸ್ತೆಯಲ್ಲಿ ಓಡಾಡುವ ಸಾರ್ವಜನಿಕರು, ವಾಹನ ಸವಾರರು ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಪ್ರಸ್ತುತ ಮಳೆಗಾಲ ಆರಂಭವಾಗುತ್ತಿದ್ದು ಮಳೆ ಸುರಿದರೆ ಚರಂಡಿಗಳ ಬದಲಿಗೆ ರಸ್ತೆಯ ಮೇಲೆ ನೀರು ಹರಿಯುತ್ತದೆ. ದೊಡ್ಡ ದೊಡ್ಡ ಚರಂಡಿಗಳು ನಿಂತಿರುವ ಕೊಳಚೆ ನೀರಿನಿಂದ ತುಂಬಿವೆ. ಇದರಿಂದ ನಗರಸಭೆಯವರು ಯುದ್ಧ ಕಾಲೇ ಶಸ್ತ್ರಭ್ಯಾಸ ಎನ್ನುವಂತೆ ಮಳೆಗಾಲದಲ್ಲಿ ತೆರವು ಕಾರ್ಯಾಚರಣೆ ಕೈಗೊಳ್ಳಬೇಕಾಗಿದೆ ಎನ್ನುತ್ತಾರೆ ಸ್ಥಳೀಯರು.ಅವೈಜ್ಞಾನಿಕ ಚರಂಡಿ:
ಜಿಲ್ಲಾ ಕೇಂದ್ರ ಅಭಿವೃದ್ಧಿ ಹೊಂದುತ್ತಿರುವುದರ ನಡುವೆ ಹಲವು ವರ್ಷಗಳಿಂದ ಬಾಧಿಸುತ್ತಿರುವ ಯುಜಿಡಿ ಕಿರಿಕಿರಿ ಮಾತ್ರ ತಪ್ಪಿಲ್ಲ. ನಗರದ ಬಹುತೇಕ ಕಡೆ ಯುಜಿಡಿ ಬ್ಲಾಕ್ ಆಗಿದೆ. ದಿನಗಟ್ಟಲೇ ನೀರು ಹರಿದು ಹೋಗುತ್ತಿರುತ್ತದೆ.
ಇನ್ನಾದರೂ ಸಂಬಂಧಿಸಿದ ಅಧಿಕಾರಿಗಳು ಮತ್ತು ಜನಪ್ರತಿನಿಧಿಗಳು ಇತ್ತ ಗಮನ ಹರಿಸಿ ಯುಜಿಡಿಯ ಕೊಳಚೆ ನೀರಿನಿಂದ ಸಾರ್ವಜನಿಕರಿಗೆ ಮುಕ್ತಿ ನೀಡುತ್ತಾರೋ ಕಾದು ನೋಡಬೇಕಾಗಿದೆ.
ಕಾಯಿಲೆ ವಾಸಿ ಮಾಡಿ ಕೊಳ್ಳಲು ಹಳ್ಳಿಯಿಂದ ನಗರದ ಆಸ್ಪತ್ರೆಗೆ ಬರುತ್ತೇವೆ. ಆದರೆ ಆಸ್ಪತ್ರೆ ದಾರಿಯಲ್ಲಿ ಯುಜಿಡಿಯ ಕೊಳಚೆ ನೀರಿನಲ್ಲಿ ನಡೆದು ಕೊಂಡು ಬಂದು ಕಾಯಿಲೆ ವಾಸಿ ಮಾಡಿಕೊಂಡು ಮತ್ತೆ ಮನೆಗೆ ಹೋಗುವಾಗ ಅದೇ ಯುಜಿಡಿಯ ಕೊಳಚೆ ನೀರಿನಲ್ಲಿ ವಾಪಸು ಹೋಗುವಾಗ ಮತ್ತೆ ಕಾಯಿಲೆ ಹೊತ್ತು ಮನೆ ಸೇರದೆ ಪುನಃ ಆಸ್ಪತ್ರೆಗೆ ಬರುವಂತಾಗಿದೆ.
- ಜಿಲ್ಲಾಸ್ಪತ್ರೆಗೆ ಬಂದಿದ್ದ ರೋಗಿ
ಗಂಗಮ್ಮ ಗುಡಿ (ಒಪಿಓ) ರಸ್ತೆಯಲ್ಲಿ ಒಳಚರಂಡಿ ಮ್ಯಾನ್ಹೋಲ್ ಗಳು ಉಕ್ಕಿದ್ದು ರಸ್ತೆ ಮೇಲೆ ಹರಿಯುತ್ತಿರುವ ಕೊಳಚೆ ನೀರು.