ಚರಂಡಿ ನೀರು ರಸ್ತೆಯಲ್ಲಿ ಸಂಗ್ರಹ

KannadaprabhaNewsNetwork |  
Published : Jun 14, 2025, 02:26 AM IST
12 ಬಿಜಿಪಿ-1 | Kannada Prabha

ಸಾರಾಂಶ

ಬಾಗೇಪಲ್ಲಿ ಪಟ್ಟಣದ ಡಾ.ಎಚ್.ಎನ್.ವೃತ್ತ (ಗೂಳೂರು ಸರ್ಕಲ್)ದಲ್ಲಿ ಮಳೆ ನೀರಿನ ಜೊತೆಗೆ ಚರಂಡಿ ಕೊಳಚೆ ಹಾಗೂ ತ್ಯಾಜ್ಯ ನೀರು ಸಂಗ್ರಹವಾಗಿ ಜಲಾವೃತಗೊಂಡ ಪರಿಣಾಮ ಈ ಮಾರ್ಗದಲ್ಲಿ ಸಂಚರಿಸುವ ವಾಹನ ಸವಾರರು ಹಾಗೂ ಸಾರ್ವಜನಿಕರು ಸಂಚರಿಸಲು ಸಾಧ್ಯವಾಗುತ್ತಿಲ್ಲ. ಕ್ರಮ ಕೈಗೊಳ್ಳಲು ಪುರಸಭೆಗೆ ಜನರ ಆಗ್ರಹ

ಕನ್ನಡಪ್ರಭ ವಾರ್ತೆ ಬಾಗೇಪಲ್ಲಿ

ಚರಂಡಿಗಳಲ್ಲಿ ತುಂಬಿರುವ ಹೂಳು ತೆರೆವುಗೊಳಿಸುವಲ್ಲಿ ಪುರಸಭೆ ಅಧಿಕಾರಿಗಳ ನಿರ್ಲಕ್ಷ್ಯ ಹಾಗೂ ಬೇಜವಾಬ್ದಾರಿತನದಿಂದ ಪಟ್ಟಣದ ಬಹುತೇಕ ಚರಂಡಿಗಳು ಸಣ್ಣ ಮಳೆ ಬಂದರೂ ತುಂಬಿ ರಸ್ತೆ, ತಗ್ಗುಪ್ರದೇಶಗಳಿಗೆ ಹರಿಯುತ್ತವೆ. ಇದರಿಂದಾಗಿ ತಗ್ಗು ಪ್ರದೇಶದ ಮನೆಗಳ ನಿವಾಸಿಗಳು, ಹಾಗೂ ವಾಹನ ಸವಾರರು ಪರದಾಡುವಂತಹ ಪರಿಸ್ಥಿತಿ ನಿರ್ಮಾಣವಾಗಿದೆ.

ಗುರುವಾರ ಸಂಜೆ ಬಿದ್ದ ಜೋರು ಮಳೆಯಿಂದ ಚರಂಡಿಯಲ್ಲಿ ಸರಾಗವಾಗಿ ಹರಿಯಬೇಕಾಗಿದ್ದ ಕೊಳಚೆ ನೀರು ಹಾಗೂ ಮಳೆ ನೀರು ರಸ್ತೆ ಮೇಲೆ ಹರಿಯುವುದರ ಜೊತೆಗೆ ಪಟ್ಟಣದ ಡಾ.ಎಚ್.ಎನ್.ವೃತ್ತ (ಗೂಳೂರು ಸರ್ಕಲ್)ದಲ್ಲಿ ಮಳೆ ನೀರಿನ ಜೊತೆಗೆ ಚರಂಡಿ ಕೊಳಚೆ ಹಾಗೂ ತ್ಯಾಜ್ಯ ನೀರು ಸಂಗ್ರಹವಾಗಿ ಜಲಾವೃತಗೊಂಡ ಪರಿಣಾಮ ಈ ಮಾರ್ಗದಲ್ಲಿ ಸಂಚರಿಸುವ ವಾಹನ ಸವಾರರು ಹಾಗೂ ಸಾರ್ವಜನಿಕರು ಸಂಚರಿಸಲು ಸಾಧ್ಯವಾಗುತ್ತಿಲ್ಲ.

ಪುರಸಭೆ ಅಧಿಕಾರಿಗಳ ನಿರ್ಲಕ್ಷ್ಯ

ಪ್ರತಿ ಮಳೆಗಾಲದಲ್ಲೂ ಪಟ್ಟಣದ ಗೂಳೂರು ಸರ್ಕಲ್‍ನಲ್ಲಿ ಮಳೆ ಮತ್ತು ಚರಂಡಿ ಕೊಳಚೆ ನೀರು ಸಂಗ್ರಹವಾಗಿ ಜಲಾವೃತಗೊಳ್ಳುವುದರಿಂದ ವಾಹನ ಸವಾರರು ಸೇರಿದಂತೆ ಸಾರ್ವಜನಿಕರು ಕಳೆದ ಹಲವಾರು ವರ್ಷಗಳಿಂದ ಪದೇ ಪದೇ ಕಿರಿಕಿರಿ ಅನುಭವಿಸುತ್ತಿದ್ದಾರೆ. ಆದರೆ ನಮಗೂ ಈ ಸಮಸ್ಯೆಗೂ ಯಾವುದೇ ಸಂಬಂದವೇ ಇಲ್ಲ ಎನ್ನುವಂತೆ ಪುರಸಭೆ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳು ವರ್ತಿಸುತ್ತಿದ್ದಾರೆ.

ಮಳೆ ಬಂದ ಸಂದರ್ಭದಲ್ಲಿ ಗೂಳೂರು ಸರ್ಕಲ್‍ನಲ್ಲಿ ಚರಂಡಿ ಮತ್ತು ಮಳೆ ನೀರು ಸಂಗ್ರಹವಾಗಿ ಜಲಾವೃತಗೊಂಡಿರುವುದರ ಜೊತೆಗೆ ಇಲ್ಲಿನ ಸರ್ಕಲ್‍ನಲ್ಲಿನ ಮುಖ್ಯ ರಸ್ತೆಯಲ್ಲಿ ಮೊಣಕಾಲುದ್ದ ಗುಣಿಗಳು ಬಿದ್ದಿರುವ ಪರಿಣಾಮ ವಾಹನ ಸವಾರರು ತಮ್ಮ ವಾಹನ ಸಮೇತವಾಗಿ ಗುಂಡಿಯಲ್ಲಿ ಬೀಳುವುದು ಸಾಮಾನ್ಯವಾಗಿದೆ.

ಚರಂಡಿ ಸ್ವಚ್ಛಗೊಳಿಸಲು ಆಗ್ರಹ

ಜನಪ್ರತಿನಿಧಿಗಳು, ಪುರಸಭೆ ಅಧಿಕಾರಿಗಳು ಸೇರಿದಂತೆ ಸಂಬಂಧಪಟ್ಟ ಇಲಾಖೆ ಅಧಿಕಾರಿಗಳು ಇತ್ತ ಗಮನಹರಿಸಿ ಗೂಳೂರು ಸರ್ಕಲ್ ಸೇರಿದಂತೆ ಪಟ್ಟಣದ ಬಹುತೇಕ ಚರಂಡಿಗಳಲ್ಲಿ ತುಂಬಿರುವ ತ್ಯಾಜ್ಯ ಮತ್ತು ಹೂಳು ತೆರವುಗೊಳಿಸುವ ಮೂಲಕ ಚರಂಡಿಗಳಲ್ಲಿ ಕೊಳಚೆ ಮತ್ತು ಮಳೆ ನೀರು ಸರಾಗವಾಗಿ ಹರಿಯುವಂತೆ ಮಾಡಿ ಶಾಶ್ವತ ಪರಿಹಾರ ಕಲ್ಪಿಸುವಂತೆ ಸಾರ್ವಜನಿಕರು ಒತ್ತಾಯಿಸಿದ್ದಾರೆ.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

''ತಾಕತ್ತು ಇದ್ದರೆ ನೋಟಿನಲ್ಲಿರುವ ಗಾಂಧೀಜಿಯವರ ಭಾವಚಿತ್ರವನ್ನು ತೆಗೆಯಲಿ''
ಪಲ್ಸ್‌ ಪೋಲಿಯೋ ಹಾಕಿಸಿ, ಅಂಗವಿಕತೆ ತಪ್ಪಿಸಿ