ಬಲ್ಲಮಾವಟಿ ಭಗವತಿ ದೇವಸ್ಥಾನದಲ್ಲಿ ಶಡಾಧರ ಪೂಜಾ ಸಂಪನ್ನ

KannadaprabhaNewsNetwork |  
Published : Dec 14, 2025, 04:00 AM IST
11-ಎನ್ ಪಿ ಕೆ-5 ಬಲ್ಲಮಾವಟಿ ಶ್ರೀ ಭಗವತಿ ದೇವಸ್ಥಾನದ ಗರ್ಭಗುಡಿ ಹಾಗೂ ಮುಖ ಮಂಟಪ ಪುನರ್ ನಿರ್ಮಾಣ ಕಾರ್ಯದ  ಶಡಾಧರ ಪೂಜಾ ವಿಧಿ ವಿಧಾನಗಳು  ಶ್ರದ್ಧಾ ಭಕ್ತಿಯಿಂದ ಜರುಗಿತು. 11-ಎನ್ ಪಿ ಕೆ-6. ಬಲ್ಲಮಾವಟಿ ಶ್ರೀ ಭಗವತಿ ದೇವಸ್ಥಾನದ ಗರ್ಭಗುಡಿ ಹಾಗೂ ಮುಖ ಮಂಟಪ ಪುನರ್ ನಿರ್ಮಾಣ ಕಾರ್ಯದ  ಶಡಾಧರ. | Kannada Prabha

ಸಾರಾಂಶ

ಬಲ್ಲಮಾವಟಿ ಭಗವತಿ ದೇವಸ್ಥಾನದ ಗರ್ಭಗುಡಿ ಹಾಗೂ ಮುಖಮಂಟಪ ಪುನರ್‌ ನಿರ್ಮಾಣ ಕಾರ್ಯ ಭರದಿಂದ ಸಾಗುತ್ತಿದೆ.

ಕನ್ನಡಪ್ರಭ ವಾರ್ತೆ ನಾಪೋಕ್ಲು

ಬಲ್ಲಮಾವಟಿ ಶ್ರೀ ಭಗವತಿ ದೇವಸ್ಥಾನದ ಗರ್ಭಗುಡಿ ಹಾಗೂ ಮುಖ ಮಂಟಪ ಪುನರ್ ನಿರ್ಮಾಣ ಕಾರ್ಯ ಭರದಿಂದ ಸಾಗುತ್ತಿದ್ದು ಗುರುವಾರ ಶಡಾಧರ ಪೂಜಾ ವಿಧಿ ವಿಧಾನಗಳು ಶ್ರದ್ಧಾ ಭಕ್ತಿಯಿಂದ ಸಂಪನ್ನಗೊಂಡಿತು.

ದೇವಸ್ಥಾನದ ಹೃದಯ ಭಾಗದ ಗರ್ಭಗುಡಿಯ ನಿರ್ಮಾಣಕ್ಕೆ ನೆಲ ಮಟ್ಟದಿಂದ 7.25 ಅಡಿ ಭೂಮಿಯ ಒಳಗಿನಿಂದ ಅಡಿಪಾಯ ಹಾಕಿದ್ದು ಶಡಾಧರ ಪೂಜೆ ಗುರುವಾರ ನಡೆಯಿತು. ಗರ್ಭಗುಡಿ ಹಾಗೂ ಮುಖ ಮಂಟಪ ಅಡಿಪಾಯಕ್ಕೆ ಉಪ್ಪು ಮಿಶ್ರಿತ ಮರಳು ತುಂಬಿಸುವ ಕಾರ್ಯವನ್ನು ಊರಿನವರು ನೆರವೇರಿಸಿದರು. ಪೂಜೆ ಅಂಗವಾಗಿ ಭಕ್ತರಿಗೆ ಅನ್ನ ಸಂತರ್ಪಣೆ ಏರ್ಪಡಿಸಲಾಗಿತ್ತು.

ಈ ಸಂದರ್ಭ ದೇವಸ್ಥಾನದ ತಕ್ಕ ಮುಖ್ಯಸ್ಥರು ಕೋಟೆರ ಸುಬ್ಬಯ್ಯ, ನೆರವಂಡ ಭೀಮಯ್ಯ, ಅಧ್ಯಕ್ಷರು ಕೋಟೆರ ಸುಬ್ಬಯ್ಯ, ಉಪ ಅಧ್ಯಕ್ಷರು ಬೈರುಡ ಮಾಚಯ್ಯ, ಕಾರ್ಯ ಅಧ್ಯಕ್ಷರು ಮತ್ತು ಖಜಾಂಚಿ ಬೊಟ್ಟೋಳಂಡ ತಿಮ್ಮಯ್ಯ, ಚಂಗೇಟಿರ ಅಪ್ಪಯ್ಯ, ಕಾರ್ಯದರ್ಶಿ ಕೋಟೆರ ಧನುಷ್ ಬೋಪಣ್ಣ, ಮಾಜಿ ಕಾರ್ಯದರ್ಶಿಯವರಾದ ಅಪ್ಪ

ಚೆಟ್ಟೊಳಂಡ ರಾಜಭೀಮಯ್ಯ, ತಕ್ಕ ಮುಖ್ಯಸ್ಥರು, ಸಮಿತಿ ಸದಸ್ಯರು ಹಾಗೂ ಭಕ್ತಾದಿಗಳು ಉಪಸ್ಥಿತರಿದ್ದರು. ತಂತ್ರಿ ದಿವಾಕರ್ ಭಟ್, ಮುಖ್ಯ ಅರ್ಚಕ ಪುಟ್ಟ ಅವರ ಮುಂದಾಳತ್ವದಲ್ಲಿ ಪೂಜಾ ವಿಧಿ ವಿಧಾನಗಳು ಜರುಗಿದವು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಮಾನಸಿಕ ಖಿನ್ನತೆ ಸ್ವಯಂ ಮೌಲ್ಯಮಾಪನಕ್ಕೆ ನಿಮ್ಹಾನ್ಸ್‌ ಆ್ಯಪ್‌
ಒಂದೇ ದಿನ ಜಡ್ಜ್‌ ಮುಂದೆ 60 ಪರೋಲ್‌ ಅರ್ಜಿ!