ಶಕ್ತಿ ಪೂರ್ವ ಪ್ರಾಥಮಿಕ ಶಾಲೆ ಕಟ್ಟಡ ಉದ್ಘಾಟನೆ, ಶಿಷ್ಯ ವೇತನ

KannadaprabhaNewsNetwork |  
Published : May 31, 2024, 02:15 AM IST
ಶಕ್ತಿ ಪೂರ್ವ ಪ್ರಾಥಮಿಕ ಶಾಲೆ ಕಟ್ಟಡ ಉದ್ಘಾಟನೆ, ಶಿಷ್ಯ ವೇತನ ಬಿಡುಗಡೆ ಕಾರ್ಯಕ್ರಮ ನಡೆಯಿತು. | Kannada Prabha

ಸಾರಾಂಶ

ಉದ್ಯಮಿ ಡಾ.ಶಶಿಕಿರಣ ಶೆಟ್ಟಿ ಅವರು 10 ಲಕ್ಷ ರು. ಶಿಷ್ಯ ವೇತನ ನೀಡಿದ್ದು, ಅದಕ್ಕೆಶಕ್ತಿ ಎಜ್ಯುಕೇಶನ್‌ ಟ್ರಸ್ಟ್‌ ವತಿಯಿಂದ 179 ವಿದ್ಯಾರ್ಥಿಗಳಿಗೆ 70,83,000 ರು. ಸೇರಿಸಿ ಒಟ್ಟು 80,83,000 ರು. ಶಿಷ್ಯ ವೇತನವನ್ನು ವಿದ್ಯಾರ್ಥಿಗಳಿಗೆ ವಿತರಣೆ ಮಾಡಲಾಗಿದೆ

ಮಂಗಳೂರು: ಪ್ರಸ್ತುತ ಸಮಾಜದಲ್ಲಿ ಹಣಕ್ಕಾಾಗಿ ಮನುಷ್ಯತ್ವ ಮರೆಯಾಗುತ್ತಿರುವುದು ಹೆಚ್ಚಾಗುತ್ತಿದೆ. ವಿದ್ಯಾರ್ಥಿಗಳಿಗೆ ಹಣಕ್ಕಿಂತ ಸದ್ಗುಣ ಮುಖ್ಯ ಎಂಬುದನ್ನು ಕಲಿಸಿ ರಾಷ್ಟ್ರದ ಆಸ್ತಿಗಳನ್ನಾಗಿಸುವ ಕೆಲಸ ಶಕ್ತಿ ಶಿಕ್ಷಣ ಸಂಸ್ಥೆಯಿಂದ ಆಗುತ್ತಿದೆ ಎಂದು ಮಂಗಳೂರು ವಿವಿ ಕುಲಪತಿ ಪ್ರೊ.ಪಿ.ಎಲ್. ಧರ್ಮ ಹೇಳಿದ್ದಾರೆ.

ಶಕ್ತಿನಗರದ ಶಕ್ತಿ ಪೂರ್ವ ಪ್ರಾಥಮಿಕ ಶಾಲಾ ಕಟ್ಟಡ ಉದ್ಘಾಟನೆ ಹಾಗೂ ಡಾ.ಶಶಿಕಿರಣ್ ಶೆಟ್ಟಿ ಶಿಷ್ಯ ವೇತನ ಬಿಡುಗಡೆ ಕಾರ್ಯಕ್ರಮದಲ್ಲಿ ಗುರುವಾರ ಆರ್ಥಿಕವಾಗಿ ಹಿಂದುಳಿದ, ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಶಿಷ್ಯ ವೇತನ ವಿತರಿಸಿ ಅವರು ಮಾತನಾಡಿದರು.ರಾಜರ ಕಾಲದಲ್ಲಿ ಒಳ್ಳೆಯ ಕೆಲಸ ಮಾಡಿದಾಗ ಮಾತಿನಿಂದ ಪುರಸ್ಕರಿಸುವ ಪದ್ಧತಿ ಇತ್ತು. ಈಗ ವ್ಯವಸ್ಥೆ ಬದಲಾಗಿದೆ. ಮಾತಿಗೆ ಮೌಲ್ಯ ಕಡಿಮೆಯಾಗಿ ಹಣಕ್ಕೆ ಆದ್ಯತೆ ಹೆಚ್ಚಾಗಿದೆ. ಹಣಕ್ಕಿಂತ ಉತ್ತಮ ಗುಣ ಮುಖ್ಯ ಎಂಬುದನ್ನು ಎಳವೆಯಿಂದಲೇ ಮಕ್ಕಳಿಗೆ ಮನದಟ್ಟು ಮಾಡಬೇಕು ಎಂದರು.

ಕಾರ್ಕಳ ಜ್ಞಾನಸುಧಾ ವಿದ್ಯಾಸಂಸ್ಥೆಯ ಅಧ್ಯಕ್ಷ ಡಾ.ಸುಧಾಕರ ಶೆಟ್ಟಿ ಅವರು ಶಕ್ತಿ ಪೂರ್ವ ಪ್ರಾಥಮಿಕ ಶಾಲಾ ಕಟ್ಟಡವನ್ನು ಉದ್ಘಾಟಿಸಿದರು. ಶಾಲೆಯ ಸಂಸ್ಥಾಪಕ ಡಾ.ಕೆ.ಸಿ. ನಾಯ್ಕ್‌ ಅವರು ಸಮಾಜದ ಉನ್ನತಿಗಾಗಿ ಶಿಕ್ಷಣ ಸಂಸ್ಥೆಯನ್ನು ಆರಂಭಿಸಿ ಸಾವಿರಾರು ವಿದ್ಯಾರ್ಥಿಗಳ ಭವಿಷ್ಯ ಪ್ರಜ್ವಲಿಸಲು ಕಾರಣರಾಗಿದ್ದಾರೆ ಎಂದು ಹೇಳಿದರು.

ಶಕ್ತಿ ಎಜುಕೇಶನ್‌ ಟ್ರಸ್ಟ್‌ ಕಾರ್ಯದರ್ಶಿ ಸಂಜಿತ್‌ ನಾಯ್ಕ್‌ ಅಧ್ಯಕ್ಷತೆ ವಹಿಸಿದ್ದರು. ಪ್ರಧಾನ ಸಲಹೆಗಾರ ರಮೇಶ್ ಕೆ. ಸ್ವಾಗತಿಸಿ, ಪ್ರಸ್ತಾವನೆಗೈದರು. ಉದ್ಯಮಿ ಡಾ.ಶಶಿಕಿರಣ ಶೆಟ್ಟಿ ಅವರು 10 ಲಕ್ಷ ರು. ಶಿಷ್ಯ ವೇತನ ನೀಡಿದ್ದು, ಅದಕ್ಕೆಶಕ್ತಿ ಎಜ್ಯುಕೇಶನ್‌ ಟ್ರಸ್ಟ್‌ ವತಿಯಿಂದ 179 ವಿದ್ಯಾರ್ಥಿಗಳಿಗೆ 70,83,000 ರು. ಸೇರಿಸಿ ಒಟ್ಟು 80,83,000 ರು. ಶಿಷ್ಯ ವೇತನವನ್ನು ವಿದ್ಯಾರ್ಥಿಗಳಿಗೆ ವಿತರಣೆ ಮಾಡಲಾಗಿದೆ ಎಂದರು.

ಶಕ್ತಿ ಎಜುಕೇಶನ್‌ ಟ್ರಸ್ಟ್‌ ಸಂಸ್ಥಾಪಕ ಡಾ.ಕೆ.ಸಿ. ನಾಯ್ಕ್‌, ಟ್ರಸ್ಟಿ ಸಗುಣ ಸಿ. ನಾಯ್ಕ್‌, ಉದ್ಯಮಿ ಡಾ.ಶಶಿಕಿರಣ ಶೆಟ್ಟಿ ಅವರ ತಾಯಿ ಸುಶೀಲ ಜನಾರ್ದನ ಶೆಟ್ಟಿ, ಟ್ರಸ್ಟಿ ಡಾ.ಮುರಳೀಧರ ನಾಯ್ಕ್‌, ಶಕ್ತಿ ಪ.ಪೂ. ಕಾಲೇಜು ಪ್ರಾಂಶುಪಾಲ ವೆಂಕಟೇಶ ಮೂರ್ತಿ ಎಚ್. ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಹಲವು ಜಿಲ್ಲೆಗಳಲ್ಲಿ ಶೀತಗಾಳಿ ತಾಪಮಾನ 5-7 ಡಿಗ್ರಿ ಇಳಿಕೆ
‘ಬಾಡಿಗೆ ತಾಯ್ತನ’ದಿಂದ ಮಗು : ವೃದ್ಧ ದಂಪತಿಯಿಂದ ಕೋರ್ಟ್‌ ಮೊರೆ