ಸ್ತ್ರೀ ಸಬಲೀಕರಣಕ್ಕೆ ಶಕ್ತಿ ಯೋಜನೆ ಸಹಕಾರಿ

KannadaprabhaNewsNetwork |  
Published : Jul 15, 2025, 11:45 PM IST
ಕಾರಟಗಿಯಲ್ಲಿ ಕಾಂಗ್ರೆಸ್‌ ಕಾರ್ಯಕರ್ತರು ಗ್ಯಾರೆಂಟಿ ಶಕ್ತಿ ಯೋಜನೆ ಸಂಬ್ರಮಾಚಾರಣೆ ವೇಳೆ ಸಾರಿಗೆ ಸಂಸ್ಥೆಯ ನೌಕರರನ್ನು ಸನ್ಮಾನಿಸಿದರು.==0== | Kannada Prabha

ಸಾರಾಂಶ

ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಶಕ್ತಿ ಯೋಜನೆ ಎರಡು ವರ್ಷ ಪೂರೈಸಿದ್ದು, ಕೋಟ್ಯಂತರ ಮಹಿಳೆಯರು ಇದರ ಸದುಪಯೋಗ ಪಡೆದುಕೊಂಡಿದ್ದಾರೆ. ಯೋಜನೆಯಿಂದ ಮಹಿಳೆಯರು ಉಚಿತವಾಗಿ ಪ್ರವಾಸಿ ತಾಣ, ಧಾರ್ಮಿಕ ಸ್ಥಳ ಮತ್ತು ವ್ಯಾಪಾರ-ವಹಿವಾಟುಗಳಿಗೆ ಪ್ರಯಾಣಿಸಿದ್ದಾರೆ.

ಕಾರಟಗಿ:

ಸ್ತ್ರೀಯರ ಸಬಲೀಕರಣಕ್ಕೆ ಶಕ್ತಿ ಯೋಜನೆ ಸಹಕಾರಿಯಾಗಿದೆ ಎಂದು ತಾಲೂಕು ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ದೇವಪ್ಪ ಬಾವಿಕಟ್ಟಿ ಹೇಳಿದರು.

ಶಕ್ತಿ ಯೋಜನೆಯಡಿ 500 ಕೋಟಿ ಮಹಿಳೆಯರು ಉಚಿತ ಬಸ್ ಪ್ರಯಾಣ ಮಾಡಿದ ಹಿನ್ನೆಲೆ ಪಟ್ಟಣದ ಕೇಂದ್ರ ಬಸ್ ನಿಲ್ದಾಣದಲ್ಲಿ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಬಸ್‌ಗಳಿಗೆ ಪೂಜೆ ಸಲ್ಲಿಸಿ, ಸಿಹಿ ಹಂಚಿ ಮಾತನಾಡಿದರು.

ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಶಕ್ತಿ ಯೋಜನೆ ಎರಡು ವರ್ಷ ಪೂರೈಸಿದ್ದು, ಕೋಟ್ಯಂತರ ಮಹಿಳೆಯರು ಇದರ ಸದುಪಯೋಗ ಪಡೆದುಕೊಂಡಿದ್ದಾರೆ. ಯೋಜನೆಯಿಂದ ಮಹಿಳೆಯರು ಉಚಿತವಾಗಿ ಪ್ರವಾಸಿ ತಾಣ, ಧಾರ್ಮಿಕ ಸ್ಥಳ ಮತ್ತು ವ್ಯಾಪಾರ-ವಹಿವಾಟುಗಳಿಗೆ ಪ್ರಯಾಣಿಸಿದ್ದಾರೆ. ಪ್ರಯಾಣದಿಂದ ಉಳಿದ ಹಣ ದೈನಂದಿನ ಜೀವನಕ್ಕೆ ಬಳಸಬಹುದಾಗಿದೆ. ಇದರಿಂದ ಮಹಿಳೆಯರು ಪುರುಷರ ಮೇಲೆ ಎಲ್ಲದಕ್ಕೂ ಅವಲಂಬಿತವಾಗಿರುವುದನ್ನು ತಪ್ಪಿಸಲಾಗಿದೆ ಎಂದರು. ಬಳಿಕ ಜಿಲ್ಲಾ ಗ್ಯಾರಂಟಿ ಅನುಷ್ಠಾನ ಸಮಿತಿ ಉಪಾಧ್ಯಕ್ಷ ನಾಗರಾಜ್ ಅರಳಿ ಹಾಗೂ ಸಮಿತಿ ಸದಸ್ಯ ಸೋಮನಾಥ್ ದೊಡ್ಡಮನಿ ಮಾತನಾಡಿದರು.

ಈ ವೇಳೆ ಗ್ಯಾರಂಟಿ ಸಮಿತಿ ತಾಲೂಕು ಹಾಗೂ ಜಿಲ್ಲಾ ಪದಾಧಿಕಾರಿಗಳು, ಬ್ಲಾಕ್ ಕಾಂಗ್ರೆಸ್ ನೇತೃತ್ವದಲ್ಲಿ ಶಕ್ತಿ ಯೋಜನೆ ಫಲಾನುಭವಿಗಳಿಗೆ ಸಿಹಿ ಹಂಚಿ ಸಂಭ್ರಮಿಸಿದರು. ಬಳಿಕ ಸಂಚಾರ ನಿಯಂತ್ರಕ ಪರಶುರಾಮ ಬಣ್ಣದ, ಹುಸೇನಸಾಬ್ ಹಾಗೂ ಚಾಲಕ ಚನ್ನಬಸಯ್ಯ ತೋಟದ, ನಿರ್ವಾಹಕ ಹನುಮಂತಪ್ಪ ಮುಳ್ಳೂರು ಅವರನ್ನು ಸನ್ಮಾನಿಸಲಾಯಿತು.

ಮುಖಂಡರಾದ ಶಶಿಧರಗೌಡ, ಚೆನ್ನಬಸಪ್ಪ ಸುಂಕದ, ಶಿವರೆಡ್ಡಿ ನಾಯಕ, ಕೆಪಿಸಿಸಿ ಸದಸ್ಯ ಬಸವರಾಜ ನೀರಗಂಟಿ, ಬಸವರಾಜ ಪಗಡದಿನ್ನಿ, ಮಹಮ್ಮದ್ ರಫೀ, ಅಯ್ಯಪ್ಪ ಉಪ್ಪಾರ, ಮಲ್ಲಿಕಾರ್ಜುನ ತೊಂಡಿಹಾಳ, ಉದಯ ಈಡಿಗೇರ, ರಮೇಶ ಕುಂಟೋಜಿ, ಪುರಸಭೆ ಸದಸ್ಯರಾದ ಹಿರೇಬಸಪ್ಪ ಸಜ್ಜನ, ದೊಡ್ಡ ಬಸವರಾಜ ಬೂದಿ, ಮಂಜುನಾಥ ಮೇಗೂರು, ವೀರೇಶ ಗದ್ದಿ, ಖಾಜಾ ಹುಸೇನ್ ಮುಲ್ಲಾ, ಗದ್ದೆಪ್ಪ ನಾಯಕ, ಅಬ್ದುಲ್ ರೌಫ್, ಮಹಿಬುಲಿ, ಗ್ಯಾರಂಟಿ ಸಮಿತಿ ಜಿಲ್ಲಾ ಸದಸ್ಯೆ ಶಕುಂತಲಮ್ಮ, ತಾಲೂಕು ಸದಸ್ಯೆ ದೀಪಾ ಕೆ. ರಾಥೋಡ, ಶಾಂತಾ ಹಿರೇಮಠ, ಗ್ರಾಪಂ ಉಪಾಧ್ಯಕ್ಷೆ ಹುಲಿಗೆಮ್ಮ ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

‘ಮುಂದಿನ ಸಿಎಂ ಯಾರು?’ ಎನ್ನುವ ಬಗ್ಗೆಯೂ ರಾಜ್ಯದಲ್ಲಿ ಬೆಟ್ಟಿಂಗ್‌ - ನಿಯಂತ್ರಿಸಿ'
ಕ್ರೈಂ ಹೆಚ್ಚಳಕ್ಕೆ ಸಿಬ್ಬಂದಿ ಕೊರತೆ ಕಾರಣ : ಡಾ.ಜಿ.ಪರಮೇಶ್ವರ್‌