ಕೆಎಂಇಆರ್‌ಸಿ ಅಧ್ಯಕ್ಷ ಸ್ಥಾನದಿಂದ ಶಾಲಿನಿ ರಜನೀಶ್‌ ಬದಲಿಸಿ: ಹಿರೇಮಠ

KannadaprabhaNewsNetwork |  
Published : May 30, 2024, 12:47 AM IST
5456456 | Kannada Prabha

ಸಾರಾಂಶ

ಕೆಎಂಇಆರ್‌ಸಿಯ ಕಾರ್ಯ ವ್ಯಾಪ್ತಿಯನ್ನು ಸರ್ಕಾರದ ಶಾಸಕರು ಮತ್ತು ಸರ್ಕಾರದ ಇಲಾಖೆ ಅಧಿಕಾರಿಗಳು ಗೌರವಿಸಬೇಕು. ಅದರಂತೆ ಈ ಹಣದ ವಿಚಾರದಲ್ಲಿ ಯಾವುದೇ ಹಸ್ತಕ್ಷೇಪ ಮಾಡಬಾರದು.

ಹುಬ್ಬಳ್ಳಿ:

ಕರ್ನಾಟಕ ಗಣಿ ಪರಿಸರ ಪುನಶ್ಚೇತನ ನಿಗಮದ (ಕೆಎಂಇಆರ್‌ಸಿ) ಅಧ್ಯಕ್ಷೆ ಶಾಲಿನಿ ರಜನೀಶ್ ಅವರನ್ನು ಕೆಳಗಿಳಿಸಿ ನಿವೃತ್ತ ನ್ಯಾಯಾಧೀಶರನ್ನು ಆ ಸ್ಥಾನಕ್ಕೆ ನೇಮಿಸಬೇಕೆಂದು ಸಮಾಜ ಪರಿವರ್ತನ ಸಮುದಾಯದ ಸಂಸ್ಥಾಪಕ ಅಧ್ಯಕ್ಷ ಎಸ್‌.ಆರ್‌. ಹಿರೇಮಠ ಒತ್ತಾಯಿಸಿದರು.

ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಶಾಲಿನಿ ರಜನೀಶ ಅವರ ಹಸ್ತಕ್ಷೇಪ, ಸರ್ವಾಧಿಕಾರಿ ಆಡಳಿತ ಶೈಲಿಯಿಂದ ಅಲ್ಲಿನ ಸಿಬ್ಬಂದಿ ಬಿಟ್ಟು ಹೋಗುತ್ತಿದ್ದಾರೆ. ಇದರಿಂದಾಗಿ ಅಲ್ಲಿನ ಆಡಳಿತ ಸಂಪೂರ್ಣವಾಗಿ ಕುಸಿದಿದೆ. ಈ ಬಗ್ಗೆ ಸರ್ಕಾರ ಸೂಕ್ತ ಕ್ರಮಕೈಗೊಳ್ಳಬೇಕು ಎಂದು ಒತ್ತಾಯಿಸಿದರು.

ಕೆಎಂಇಆರ್‌ಸಿ ಅಧಿಕಾರಿಗಳು ಹಾಗೂ ಗಣಿ ಬಾಧಿತ ಜಿಲ್ಲೆಗಳ ಜಿಲ್ಲಾಧಿಕಾರಿಗಳು ಸಾಮರಸ್ಯದಿಂದ ಗಣಿ ಬಾಧಿತ ಜನರ ಆದ್ಯತೆ ಪೂರೈಸಬೇಕು. ಈ ಬಗ್ಗೆ ಮುಖ್ಯಮಂತ್ರಿ ಹಾಗೂ ಕಾನೂನು ಸಚಿವರಿಗೆ ಸುದೀರ್ಘ ಪತ್ರ ಬರೆಯುವುದಾಗಿ ತಿಳಿಸಿದರು.

ಬಳ್ಳಾರಿ ಮತ್ತು ಸುತ್ತಲಿನ ಜಿಲ್ಲೆಗಳಲ್ಲಿ ನಡೆದ ಅಕ್ರಮ ಗಣಿಗಾರಿಕೆ ಬಗ್ಗೆ ಸುಪ್ರೀಂಕೋರ್ಟ್ ಈ ವರೆಗೆ ₹ 25 ಸಾವಿರ ಕೋಟಿ ಪರಿಸರ ಪುನಶ್ಚೇತನಕ್ಕಾಗಿ ಮತ್ತು ಗಣಿ ಬಾಧಿತ ಜನರ ಮಾನವೀಯ ವಿಕಾಸಕ್ಕಾಗಿ ಮೀಸಲಿಟ್ಟಿದೆ. ಈ ಹಣಕ್ಕೆ ಸರ್ಕಾರ ಒಂದು ಕಂಪನಿ ಮಾಡಿ, ಅದರ ಮೇಲುಸ್ತುವಾರಿಯನ್ನು ಸುಪ್ರೀಂಕೋರ್ಟ್ ನಿವೃತ್ತ ನ್ಯಾಯಾಧೀಶರಾದಂತಹ ಜಸ್ಟಿಸ್ ಬಿ. ಸುದರ್ಶನ ರೆಡ್ಡಿ ಅವರನ್ನು ಪ್ರಾಧಿಕಾರವಾಗಿ ನೇಮಿಸಿದ್ದು ಸ್ವಾಗತಾರ್ಹವಾಗಿದೆ ಎಂದರು.

ಕೆಎಂಇಆರ್‌ಸಿಯ ಕಾರ್ಯ ವ್ಯಾಪ್ತಿಯನ್ನು ಸರ್ಕಾರದ ಶಾಸಕರು ಮತ್ತು ಸರ್ಕಾರದ ಇಲಾಖೆ ಅಧಿಕಾರಿಗಳು ಗೌರವಿಸಬೇಕು. ಅದರಂತೆ ಈ ಹಣದ ವಿಚಾರದಲ್ಲಿ ಯಾವುದೇ ಹಸ್ತಕ್ಷೇಪ ಮಾಡಬಾರದು. 283 ಹಳ್ಳಿಗಳನ್ನು ಗಣಿ ಬಾಧಿತ ಎಂದು ಘೋಷಿಸಲಾಗಿದೆ. ಇತ್ತೀಚಿನ ವರ್ಷಗಳಲ್ಲಿ ಅಲ್ಲಿನ ಜಿಲ್ಲಾಧಿಕಾರಿಗಳು 466 ಹಳ್ಳಿಗಳನ್ನು ಗಣಿ ಬಾಧಿತ ಹಳ್ಳಿಗಳು ಎಂದು ಘೋಷಿಸಿದ್ದಾರೆ. ಇದು ರಾಜಕೀಯ ಒತ್ತಡದಿಂದ ಗಣಿ ಬಾಧಿತವಲ್ಲದಿದ್ದರೂ ಸೇರಿಸಲಾಗಿದೆ. ಈ ಬಗ್ಗೆ ಕ್ರಮ ವಹಿಸಬೇಕು ಎಂದರು.

ಈ ಸಂದರ್ಭದಲ್ಲಿ ಲಕ್ಷ್ಮಣ ಬಕ್ಕಾಯಿ, ಶಮಿ ಮಹ್ಮದ್ ಮುಲ್ಲಾ ಸೇರಿದಂತೆ ಹಲವರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಸರ್ಕಾರಕ್ಕೆ ನಿಧಿ ನೀಡಿದ್ದ ಲಕ್ಕುಂಡಿ ಪ್ರಜ್ವಲ್‌ಗೆ ಸರ್ಕಾರದಿಂದ ಸಿಕ್ತು ಬಂಪರ್ ಗಿಫ್ಟ್
ಕಾಂಗ್ರೆಸ್‌ನಿಂದ ಗೆದ್ದಿದ್ದ ಸುಬ್ಬಾರೆಡ್ಡಿ ಶಾಸಕತ್ವಕ್ಕೆ ‘ಸುಪ್ರೀಂ’ ರಕ್ಷಣೆ