ಹುಬ್ಬಳ್ಳಿ:
ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಶಾಲಿನಿ ರಜನೀಶ ಅವರ ಹಸ್ತಕ್ಷೇಪ, ಸರ್ವಾಧಿಕಾರಿ ಆಡಳಿತ ಶೈಲಿಯಿಂದ ಅಲ್ಲಿನ ಸಿಬ್ಬಂದಿ ಬಿಟ್ಟು ಹೋಗುತ್ತಿದ್ದಾರೆ. ಇದರಿಂದಾಗಿ ಅಲ್ಲಿನ ಆಡಳಿತ ಸಂಪೂರ್ಣವಾಗಿ ಕುಸಿದಿದೆ. ಈ ಬಗ್ಗೆ ಸರ್ಕಾರ ಸೂಕ್ತ ಕ್ರಮಕೈಗೊಳ್ಳಬೇಕು ಎಂದು ಒತ್ತಾಯಿಸಿದರು.
ಕೆಎಂಇಆರ್ಸಿ ಅಧಿಕಾರಿಗಳು ಹಾಗೂ ಗಣಿ ಬಾಧಿತ ಜಿಲ್ಲೆಗಳ ಜಿಲ್ಲಾಧಿಕಾರಿಗಳು ಸಾಮರಸ್ಯದಿಂದ ಗಣಿ ಬಾಧಿತ ಜನರ ಆದ್ಯತೆ ಪೂರೈಸಬೇಕು. ಈ ಬಗ್ಗೆ ಮುಖ್ಯಮಂತ್ರಿ ಹಾಗೂ ಕಾನೂನು ಸಚಿವರಿಗೆ ಸುದೀರ್ಘ ಪತ್ರ ಬರೆಯುವುದಾಗಿ ತಿಳಿಸಿದರು.ಬಳ್ಳಾರಿ ಮತ್ತು ಸುತ್ತಲಿನ ಜಿಲ್ಲೆಗಳಲ್ಲಿ ನಡೆದ ಅಕ್ರಮ ಗಣಿಗಾರಿಕೆ ಬಗ್ಗೆ ಸುಪ್ರೀಂಕೋರ್ಟ್ ಈ ವರೆಗೆ ₹ 25 ಸಾವಿರ ಕೋಟಿ ಪರಿಸರ ಪುನಶ್ಚೇತನಕ್ಕಾಗಿ ಮತ್ತು ಗಣಿ ಬಾಧಿತ ಜನರ ಮಾನವೀಯ ವಿಕಾಸಕ್ಕಾಗಿ ಮೀಸಲಿಟ್ಟಿದೆ. ಈ ಹಣಕ್ಕೆ ಸರ್ಕಾರ ಒಂದು ಕಂಪನಿ ಮಾಡಿ, ಅದರ ಮೇಲುಸ್ತುವಾರಿಯನ್ನು ಸುಪ್ರೀಂಕೋರ್ಟ್ ನಿವೃತ್ತ ನ್ಯಾಯಾಧೀಶರಾದಂತಹ ಜಸ್ಟಿಸ್ ಬಿ. ಸುದರ್ಶನ ರೆಡ್ಡಿ ಅವರನ್ನು ಪ್ರಾಧಿಕಾರವಾಗಿ ನೇಮಿಸಿದ್ದು ಸ್ವಾಗತಾರ್ಹವಾಗಿದೆ ಎಂದರು.
ಈ ಸಂದರ್ಭದಲ್ಲಿ ಲಕ್ಷ್ಮಣ ಬಕ್ಕಾಯಿ, ಶಮಿ ಮಹ್ಮದ್ ಮುಲ್ಲಾ ಸೇರಿದಂತೆ ಹಲವರಿದ್ದರು.