- ಆಗ್ನೇಯ ಶಿಕ್ಷಕರ ಕ್ಷೇತ್ರದ ಪ್ರಥಮ ಪ್ರಾಶಸ್ತ್ಯದ ಮತ ಕಾಂಗ್ರೆಸ್ಸಿಗೆ ನೀಡಲು ಡಾ.ಪ್ರಭಾ ಮತದಾರರಿಗೆ ಮನವಿಕನ್ನಡಪ್ರಭ ವಾರ್ತೆ, ದಾವಣಗೆರೆ ಚುನಾವಣೆ ಪೂರ್ವದಲ್ಲಿ ಕೊಟ್ಟ ಮಾತಿನಂತೆ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಐದೂ ಗ್ಯಾರಂಟಿ ಭರವಸೆ ಈಡೇರಿಸಿದ್ದು, ವಿಧಾನ ಪರಿಷತ್ ಆಗ್ನೇಯ ಶಿಕ್ಷಕರ ಕ್ಷೇತ್ರದ ಚುನಾವಣೆಯಲ್ಲೂ ನಮ್ಮ ಅಭ್ಯರ್ಥಿ ಡಿ.ಟಿ.ಶ್ರೀನಿವಾಸ್ಗೆ ಪ್ರಥಮ ಪ್ರಾಶಸ್ತ್ಯದ ಮತ ನೀಡುವ ಮೂಲಕ ಶಿಕ್ಷಕರ ಕ್ಷೇತ್ರದ ಮತದಾರರು ಗೆಲ್ಲಿಸಬೇಕು ಎಂದು ದಕ್ಷಿಣ ಶಾಸಕ ಡಾ.ಶಾಮನೂರು ಶಿವಶಂಕರಪ್ಪ ಮನವಿ ಮಾಡಿದರು.
ಆಗ್ನೇಯ ಶಿಕ್ಷಕರ ಕ್ಷೇತ್ರಕ್ಕೆ ಜೂ.3ಕ್ಕೆ ಚುನಾವಣೆ ನಡೆಯಲಿದೆ. ಬೇರೆ ಪಕ್ಷದವರಿಗೆ ಮತ ನೀಡಿದರೆ, ಅಂತಹ ಮತ ವ್ಯರ್ಥವಾಗುತ್ತದೆ. ಕಾಂಗ್ರೆಸ್ ಪಕ್ಷವು ಕೊಟ್ಟ ಮಾತಿನಂತೆ ನಡೆದಿದೆ. ಈ ಹಿನ್ನೆಲೆಯಲ್ಲಿ ನಮ್ಮ ಅಭ್ಯರ್ಥಿಯಾದ ಡಿ.ಟಿ.ಶ್ರೀನಿವಾಸ್ಗೆ ಪ್ರಥಮ ಪ್ರಾಶಸ್ತ್ಯದ ಮತ ನೀಡಿ, ಗೆಲ್ಲಿಸಬೇಕು. ಈ ಮೂಲಕ ಶಿಕ್ಷಣ ಕ್ಷೇತ್ರ ಮತ್ತು ಶಿಕ್ಷಕರ ಪರವಾಗಿ ನಮ್ಮ ಸರ್ಕಾರ ಹಾಗೂ ಡಿ.ಟಿ.ಶ್ರೀನಿವಾಸ ಕೆಲಸ ಮಾಡಲು ಅನುವು ಮಾಡಿಕೊಡಬೇಕು ಎಂದು ಅವರು ಹೇಳಿದರು.
ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಡಾ.ಪ್ರಭಾ ಮಲ್ಲಿಕಾರ್ಜುನ ಮಾತನಾಡಿ, ಆಗ್ನೇಯ ಶಿಕ್ಷಕರ ಕ್ಷೇತ್ರಕ್ಕೆ ಕಾಂಗ್ರೆಸ್ ಪಕ್ಷವು ಸೂಕ್ತ ಮತ್ತು ಒಳ್ಳೆಯ ಅಭ್ಯರ್ಥಿಯನ್ನೇ ಕಣಕ್ಕಿಳಿಸಿದೆ. ಡಿ.ಟಿ.ಶ್ರೀನಿವಾಸ ಸ್ವಂತ ಶಿಕ್ಷಣ ಸಂಸ್ಥೆಗಳನ್ನು ಹೊಂದಿದ್ದಾರೆ. ಶ್ರೀನಿವಾಸರ ಸಂಸ್ಥೆಯಲ್ಲಿ 8 ಸಾವಿರ ವಿದ್ಯಾರ್ಥಿಗಳು ಓದುತ್ತಿದ್ದು, ಸಾವಿರಾರು ಶಿಕ್ಷಕ-ಶಿಕ್ಷಕಿಯರಿದ್ದಾರೆ. ಶಿಕ್ಷಣ ಕ್ಷೇತ್ರದಲ್ಲಿ ಹೆಚ್ಚು ಒಡನಾಟವಿರುವ ಶ್ರೀನಿವಾಸ ಈ ಕ್ಷೇತ್ರಕ್ಕೆ ಸೂಕ್ತ ಅಭ್ಯರ್ಥಿಯೂ ಆಗಿದ್ದಾರೆ ಎಂದು ತಿಳಿಸಿದರು.ರಾಜ್ಯದಲ್ಲಿ ಇನ್ನೂ 4 ವರ್ಷ ಕಾಂಗ್ರೆಸ್ ಸರ್ಕಾರ ಇರಲಿದೆ. ಶಿಕ್ಷಣ ಕ್ಷೇತ್ರದಲ್ಲಿ ಹೆಚ್ಚು ಕೆಲಸ ಕಾರ್ಯಗಳು ನಡೆಯಬೇಕಿದೆ. ಆಗ್ನೇಯ ಶಿಕ್ಷಕರ ಕ್ಷೇತ್ರದ ಮತದಾರರು ಕಾಂಗ್ರೆಸ್ ಅಭ್ಯರ್ಥಿ ಡಿ.ಟಿ.ಶ್ರೀನಿವಾಸರಿಗೆ ಪ್ರಥಮ ಪ್ರಾಶಸ್ತ್ಯದ ಮತ ನೀಡಿ, ಗೆಲ್ಲಿಸಬೇಕು ಎಂದು ಅವರು ಮನವಿ ಮಾಡಿದರು.
ಹಿರಿಯ ಮುಖಂಡರು, ಕೈಗಾರಿಕೋದ್ಯಮಿಗಳಾದ ಅಥಣಿ ಎಸ್.ವೀರಣ್ಣ, ಅಣಬೇರು ರಾಜಣ್ಣ, ಪಕ್ಷದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ದಿನೇಶ.ಕೆ. ಶೆಟ್ಟಿ, ಪಾಲಿಕೆ ಸದಸ್ಯರಾದ ಜಿ.ಎಸ್. ಮಂಜುನಾಥ ಗಡಿಗುಡಾಳ, ಎ.ನಾಗರಾಜ ಇತರರು ಇದ್ದರು................ಕ್ಯಾಪ್ಷನ್: 29ಕೆಡಿವಿಜಿ8, 9:
ದಾವಣಗೆರೆಯಲ್ಲಿ ಆಗ್ನೇಯ ಶಿಕ್ಷಕರ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಡಿ.ಟಿ.ಶ್ರೀನಿವಾಸ ಪರ ಶಾಸಕ ಡಾ.ಶಾಮನೂರು ಶಿವಶಂಕರಪ್ಪ, ಲೋಕಸಭಾ ಅಭ್ಯರ್ಥಿ ಡಾ.ಪ್ರಭಾ ಮಲ್ಲಿಕಾರ್ಜುನ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು.