- 150 ಎಕರೆ ಜಾಗದಲ್ಲಿ ಕಾರ್ಯಕ್ರಮ: ಜಿಲ್ಲಾ ಸಚಿವ ಎಸ್.ಎಸ್. ಮಲ್ಲಿಕಾರ್ಜುನ, ಸಂಸದೆ ಡಾ.ಪ್ರಭಾ ಮಾಹಿತಿ
- ಸಿದ್ದು, ಡಿಕೆಶಿ, ಎಚ್ಡಿಡಿ, ಖರ್ಗೆ, ಬಿಎಸ್ವೈ, ಎಚ್ಡಿಕೆ, ಶೆಟ್ಟರ್, ಬೊಮ್ಮಾಯಿ ಭಾಗಿ
- ಕಲ್ಲೇಶ್ವರ ಮಿಲ್ ಹಿಂಭಾಗದ ವಿಶಾಲ ಜಾಗದಲ್ಲಿ ಬೃಹತ್ ವೇದಿಕೆಗಳ ನಿರ್ಮಾಣ- ಮೈಸೂರಿನ ಶಿಲ್ಪಿ ಅರುಣ್ ಯೋಗಿರಾಜ ನಿರ್ಮಿಸಿರುವ ಶಾಮನೂರು ಶಿವಶಂಕರಪ್ಪ ಪುತ್ಥಳಿ
ಕನ್ನಡಪ್ರಭ ವಾರ್ತೆ ದಾವಣಗೆರೆ
ನಗರದ ಆನೆಕೊಂಡದ ಶ್ರೀ ಕಲ್ಲೇಶ್ವರ ಮಿಲ್ ಹಿಂಭಾಗದ ವಿಶಾಲ ಪೆಂಡಾಲ್, ವೇದಿಕೆ ನಿರ್ಮಾಣ ಕಾಮಗಾರಿ ಪರಿಶೀಲನೆ ನಂತರ ಶಾಮನೂರು ಕಿರಿಯ ಪುತ್ರ, ಗಣಿ ಮತ್ತು ಭೂ ವಿಜ್ಞಾನ, ತೋಟಗಾರಿಕೆ ಸಚಿವ ಎಸ್.ಎಸ್. ಮಲ್ಲಿಕಾರ್ಜುನ, ಕಿರಿಯ ಸೊಸೆ, ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ ಕಾರ್ಯಕ್ರಮ ಕುರಿತು ಸುದ್ದಿಗಾರರಿಗೆ ಮಾಹಿತಿ ನೀಡಿದರು.
ಅಂದು ಬೆಳಗ್ಗೆ 10.15ಕ್ಕೆ ಶಿವಗಣಾರಾಧನೆ ಹಾಗೂ ನುಡಿನಮನ ಕಾರ್ಯಕ್ರಮ ಆರಂಭಗೊಳ್ಳಲಿದೆ. ರಂಭಾಪುರಿ ಪೀಠದ ಡಾ.ಪ್ರಸನ್ನ ರೇಣುಕ ವೀರ ಸೋಮೇಶ್ವರ ಶಿವಾಚಾರ್ಯ ಸ್ವಾಮೀಜಿ, ಉಜ್ಜಯಿನಿ ಪೀಠದ ಶ್ರೀ ಸಿದ್ಧಲಿಂಗ ರಾಜದೇಶಿ ಕೇಂದ್ರ ಸ್ವಾಮೀಜಿ, ಕೇದಾರ ಪೀಠದ ಶ್ರೀ ಭೀಮಾಶಂಕರ ಶಿವಾಚಾರ್ಯ ಸ್ವಾಮೀಜಿ, ಕಾಶಿ ಪೀಠದ ಡಾ.ಚಂದ್ರಶೇಖರ ಶಿವಾಚಾರ್ಯ ಸ್ವಾಮೀಜಿ, ಸಿರಿಗೆರೆ ಡಾ.ಶಿವಮೂರ್ತಿ ಶಿವಾಚಾರ್ಯ ಸ್ವಾಮೀಜಿ, ಸುತ್ತೂರು ಶ್ರೀ ವೀರ ಸಿಂಹಾಸನಾದೀಶ್ವರ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ, ಮುರುಘಾ ಮಠದ ಡಾ.ಶಿವಮೂರ್ತಿ ಶಿವಾಚಾರ್ಯ ಸ್ವಾಮೀಜಿ, ಆದಿಚುಂಚನಗಿರಿ ಡಾ.ನಿರ್ಮಲಾನಂದ ಸ್ವಾಮೀಜಿ, ಹರಿಹರ ಶ್ರೀ ವಚನಾನಂದ ಸ್ವಾಮೀಜಿ, ಕೂಡಲ ಸಂಗಮದ ಶ್ರೀ ಜಯ ಮೃತ್ಯುಂಜಯ ಸ್ವಾಮೀಜಿ, ಹುಕ್ಕೇರಿ ಮಠದ ಶ್ರೀ ಸದಾಶಿವ ಸ್ವಾಮೀಜಿ, ಕನಕ ಪೀಠದ ಶ್ರೀ ನಿರಂಜನಾನಂದ ಪುರಿಸ್ವಾಮೀಜಿ, ಶ್ರೀ ಪಕ್ಕೀರ ದಿಂಗಾಲೇಶ್ವರ ಸ್ವಾಮೀಜಿ, ಶ್ರೀ ಮಾದಾರ ಚನ್ನಯ್ಯ ಸ್ವಾಮೀಜಿ, ಶ್ರೀ ಇಮ್ಮಡಿ ಸಿದ್ದರಾಮೇಶ್ವರ ಸ್ವಾಮೀಜಿ, ಮೂರು ಸಾವಿರ ಮಠದ ಶ್ರೀ ರಾಜಯೋಗೀಂದ್ರ ಸ್ವಾಮೀಜಿ ಸೇರಿದಂತೆ ಸರ್ವಜಾತಿ, ಧರ್ಮಗಳ ಗುರುಗಳ ಸಾನ್ನಿಧ್ಯದಲ್ಲಿ ಸಮಾರಂಭ ನಡೆಯಲಿದೆ ಎಂದು ತಿಳಿಸಿದರು.
ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ, ಮಹಾರಾಷ್ಟ್ರದ ಮಾಜಿ ಸಿಎಂ ಸುಶೀಲಕುಮಾರ ಶಿಂಧೆ, ಎಐಸಿಸಿ ಪ್ರಧಾನ ಕಾರ್ಯದರ್ಶಿ ವೇಣುಗೋಪಾಲ, ಮಾಜಿ ಸಿಎಂಗಳಾದ ಜಗದೀಶ ಶೆಟ್ಟರ್, ಎಚ್.ಡಿ. ಕುಮಾರಸ್ವಾಮಿ, ಬಸವರಾಜ ಬೊಮ್ಮಾಯಿ ನುಡಿನಮನ ಸಲ್ಲಿಸುವರು ಎಂದರು.
ಶಾಮನೂರು ಆಪ್ತರಾದ ಹಿರಿಯ ಹೋಟೆಲ್ ಉದ್ಯಮಿ, ಅಪೂರ್ವ ಹೋಟೆಲ್ ಸಮೂಹಗಳ ಮುಖ್ಯಸ್ಥ ಅಣಬೇರು ರಾಜಣ್ಣ, ಹಿರಿಯ ಲೆಕ್ಕ ಪರಿಶೋಧಕ ಅಥಣಿ ಎಸ್.ವೀರಣ್ಣ, ದೂಡಾ ಅಧ್ಯಕ್ಷ ದಿನೇಶ ಕೆ. ಶೆಟ್ಟಿ, ಮಾಜಿ ಸಚಿವ ಪಿ.ಟಿ. ಪರಮೇಶ್ವರ ನಾಯ್ಕ, ಬಯಲುಸೀಮೆ ಅಭಿವೃದ್ಧಿ ಮಂಡಳಿ ಅಧ್ಯಕ್ಷ ಎಚ್.ಬಿ. ಮಂಜಪ್ಪ, ಬಿ.ಎಚ್. ವೀರಭದ್ರಪ್ಪ, ಅಯೂಬ್ ಪೈಲ್ವಾನ್, ತ್ಯಾವಣಿಗೆ ಗೋವಿಂದ ಸ್ವಾಮಿ, ಬಿ.ಕೆ.ಪರಶುರಾಮ ಮಾಗಾನಹಳ್ಳಿ ಇತರರು ಇದ್ದರು.
(ಬಾಕ್ಸ್)
* ಶಾಮನೂರು ನುಡಿನಮನಕ್ಕೆ ಅಂತಿಮ ಸಿದ್ಧತೆ - ಸುಮಾರು 200ಕ್ಕೂ ಹೆಚ್ಚು ಮಠಾಧೀಶರು, ವಿವಿಐಪಿಗೆ ವಿಶಾಲ ವೇದಿಕೆಗಳು- 3 ವೇದಿಕೆಗಳು ನಿರ್ಮಿಸಲಾಗಿದ್ದು, ಮುಖ್ಯ ವೇದಿಕೆಯಲ್ಲಿ ಪೂಜ್ಯರು, ಗಣ್ಯರು
- ಬಲ ಭಾಗದ ವೇದಿಕೆಯಲ್ಲಿ ಹರ-ಗುರು-ಚರಮೂರ್ತಿಗಳಿಗೆ ವ್ಯವಸ್ಥೆ - ವೇದಿಕೆ ಎಡ ಭಾಗದಲ್ಲಿ ಕುಟುಂಬ ಸದಸ್ಯರಿಗೆ ಆಸೀನರಾಗಲು ವ್ಯವಸ್ಥೆ ಇದೆ- ಕಲ್ಲೇಶ್ವರ ಮಿಲ್ನ ಹಿಂಭಾಗದ ಸುಮಾರು ಸುಮಾರು 150 ಎಕರೆ ಜಾಗದಲ್ಲಿ ಸಿದ್ಧತೆ
- 50 ಸಾವಿರಕ್ಕೂ ಅಧಿಕ ಜನ ಸೇರುವ ಸಾಧ್ಯತೆ, 25 ಸಾವಿರ ಆಸನಗಳ ವ್ಯವಸ್ಥೆ- 90 ಊಟದ ಕೌಂಟರ್ ಸ್ಥಾಪನೆ, ಗಣ್ಯಾತಿಗಣ್ಯರು, ಗಣ್ಯರಿಗೆ ಪ್ರತ್ಯೇಕ ಕಡೆ ಕೌಂಟರ್
- ಸಮಾರಂಭದ ಸಮಸ್ತರಿಗೂ ಒಂದೇ ರೀತಿಯ ಊಟದ ವ್ಯವಸ್ಥೆ ಮಾಡಲಾಗಿದೆ - ಪೂಜ್ಯರಿಗೆ ಬಾಪೂಜಿ ಬ್ಯಾಂಕ್ ಸಮುದಾಯ ಭವನ, ಶ್ರೀ ಗುರು ಬಕ್ಕೇಶ್ವರ ಕಲ್ಯಾಣ ಮಂಟಪ, ಶ್ರೀ ರೇಣುಕಾ ಮಂದಿರದಲ್ಲಿ ಪ್ರಸಾದ ವ್ಯವಸ್ಥೆ- ಸಮಾರಂಭ ಸ್ಥಳದಲ್ಲಿ ಕುಡಿಯುವ ನೀರಿಗೆ ವ್ಯವಸ್ಥೆ, ಆ್ಯಂಬುಲೆನ್ಸ್, ಅಗ್ನಿಶಾಮಕ ಸಿಬ್ಬಂದಿ ನಿಯೋಜನೆ
- ಬೇತೂರು ರಸ್ತೆ, ರಿಂಗ್ ರಸ್ತೆ, ಬಸಾಪುರ ರಿಂಗ್ ರಸ್ತೆ ಮೂಲಕ ಸಮಾರಂಭ ಸ್ಥಳಕ್ಕೆ ಮಾರ್ಗ- - -
-22ಕೆಡಿವಿಜಿ5: ದಾವಣಗೆರೆ ಶ್ರೀ ಕಲ್ಲೇಶ್ವರ ಮಿಲ್ ಹಿಂಭಾಗದಲ್ಲಿ ಲಿಂಗೈಕ್ಯ ಶಾಮನೂರು ಶಿವಶಂಕರಪ್ಪ ಅವರ ಶಿವಗಣಾರಾಧನೆ ಮತ್ತು ನುಡಿನಮನ ಕಾರ್ಯಕ್ರಮದ ಕುರಿತು ಪುತ್ರ ಸಚಿವ ಎಸ್.ಎಸ್. ಮಲ್ಲಿಕಾರ್ಜುನ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದರು. ಸೊಸೆ, ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ ಇದ್ದರು. -22ಕೆಡಿವಿಜಿ11.ಜೆಪಿಜ: ಶ್ರೀ ಕಲ್ಲೇಶ್ವರ ಮಿಲ್ನಲ್ಲಿ ಶಾಮನೂರು ಶಿವಶಂಕರಪ್ಪ ಅವರ ಶಿವಗಣಾರಾಧನೆ ಹಾಗೂ ನುಡಿನಮನ ಕಾರ್ಯಕ್ರಮಕ್ಕೆ 200 ಜನರು ಆಸೀನರಾಗುವಂಥ ವಿಶಾಲ ವೇದಿಕೆ ಹಾಗೂ ದೊಡ್ಡ ಪೆಂಡಾಲ್ ನಿರ್ಮಾಣ ಕಾಮಗಾರಿ ನಡೆಯುತ್ತಿದ್ದು, ಎಸ್ಎಸ್ಎಂ, ಡಾ.ಪ್ರಭಾ ಪರಿಶೀಲಿಸಿದರು.