ವಿದ್ಯುತ್ ಶಾರ್ಟ್ ಸರ್ಕ್ಯೂಟ್‌ಗೆ ಶಾಮಿಯಾನ ಅಂಗಡಿ ಭಸ್ಮ

KannadaprabhaNewsNetwork |  
Published : Nov 11, 2025, 01:45 AM IST
ಪೊಟೋ೧೦ಸಿಪಿಟಿ೨: ವಿದ್ಯುತ್ ಶಾಕ್ ಸರ್ಕ್ಯೂಟ್‌ಗೆ ಶಾಮಿಯಾನ ಅಂಗಡಿ ಭಸ್ಮವಾಗಿರುವುದು. | Kannada Prabha

ಸಾರಾಂಶ

ಅರುಣ್ ರಾತ್ರಿ 9ರ ಸುಮಾರಿಗೆ ತಮ್ಮ ದೈನಂದಿನ ವ್ಯವಹಾರ ಮುಗಿಸಿ ಮನೆಗೆ ತೆರಳಿದ್ದ. ಮಧ್ಯರಾತ್ರಿ 2ರ ಸುಮಾರಿಗೆ ಅಂಗಡಿಯಿಂದ ದಟ್ಟ ಹೊಗೆ ಬರುವುದನ್ನು ಕಂಡ ಸ್ಥಳೀಯರು ಅಂಗಡಿ ಮಾಲೀಕರಿಗೆ ಕರೆ ಮಾಡಿದ್ದಾರೆ.

ಚನ್ನಪಟ್ಟಣ: ವಿದ್ಯುತ್ ಶಾರ್ಟ್ ಸರ್ಕ್ಯೂಟ್‌ನಿಂದಾಗಿ ಶಾಮಿಯಾನ ಅಂಗಡಿ ಸಂಪೂರ್ಣ ಭಸ್ಮವಾದ ಘಟನೆ ತಾಲೂಕಿನ ಸೋಗಾಲ ಗ್ರಾಮದಲ್ಲಿ ನಡೆದಿದೆ.ಸೋಗಾಲ ಗ್ರಾಮದ ಅರುಣಕುಮಾರ್ ಎಂಬುವರಿಗೆ ಸೇರಿದ ಶಾಮಿಯಾನ ಅಂಗಡಿಗೆ ಬೆಂಕಿ ಬಿದ್ದಿದೆ. ಬೆಂಕಿಯ ಕೆನ್ನಾಲಿಗೆಗೆ ಅಂಗಡಿಯಲ್ಲಿದ್ದ ಲಕ್ಷಾಂತರ ಮೌಲ್ಯದ ಶಾಮಿಯಾನ ಸಾಮಗ್ರಿಗಳಾದ ಚೇರುಗಳು, ಪಾತ್ರೆಗಳು, ಡಯಾಸ್, ಸೋಫಾ, ಟೇಬಲ್-ಚೇರ್ ಕವರ್, ಶಾಮಿಯಾನ ಬಟ್ಟೆಗಳು, ಮ್ಯಾಟುಗಳು, ಫ್ಯಾನುಗಳು ಹಾಗೂ ಅಂಗಡಿಯ ಶೇಡ್ ಸಂಪೂರ್ಣ ಸುಟ್ಟು ಭಸ್ಮವಾಗಿದ್ದು, ಆರ್ಥಿಕ ನಷ್ಟ ಉಂಟಾಗಿದೆ.ಪಕ್ಕದಲ್ಲಿದ್ದ ಕ್ಲಿನಿಕ್ ಮತ್ತು ಮೆಡಿಕಲ್ ಸ್ಟೋರ್ ಮತ್ತು ಪಾತ್ರೆ ಅಂಗಡಿಗೂ ಬೆಂಕಿ ತಾಗಿದ್ದು, ಬೆಂಕಿ ಅನಾಹುತದಲ್ಲಿ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ.

ಅರುಣ್ ರಾತ್ರಿ 9ರ ಸುಮಾರಿಗೆ ತಮ್ಮ ದೈನಂದಿನ ವ್ಯವಹಾರ ಮುಗಿಸಿ ಮನೆಗೆ ತೆರಳಿದ್ದ. ಮಧ್ಯರಾತ್ರಿ 2ರ ಸುಮಾರಿಗೆ ಅಂಗಡಿಯಿಂದ ದಟ್ಟ ಹೊಗೆ ಬರುವುದನ್ನು ಕಂಡ ಸ್ಥಳೀಯರು ಅಂಗಡಿ ಮಾಲೀಕರಿಗೆ ಕರೆ ಮಾಡಿದ್ದಾರೆ.

ಅಂಗಡಿ ಬಾಗಿಲು ತೆಗೆಸಿ ಖಾಸಗಿ ನೀರಿನ ಟ್ಯಾಂಕರ್ ಮೂಲಕ ಬೆಂಕಿ ನಂದಿಸಲು ಹರಸಾಹಸಪಟ್ಟರು. ಸ್ಥಳಕ್ಕೆ ಅಗ್ನಿಶಾಮಕ ದಳ ಆಗಮಿಸಿ ಬೆಂಕಿ ನಂದಿಸುವಲ್ಲಿ ಯಶಸ್ವಿಯಾಯಿತು. ಸ್ಥಳಕ್ಕೆ ಅಕ್ಕೂರು ಪೊಲೀಸ್ ಠಾಣೆ ಪಿಎಸ್‌ಐ ಆಕಾಶ್ ಭೇಟಿ ನೀಡಿ ಪರಿಶೀಲಿಸಿದರು.ಪೊಟೋ೧೦ಸಿಪಿಟಿ೨: ವಿದ್ಯುತ್ ಶಾಕ್ ಸರ್ಕ್ಯೂಟ್‌ಗೆ ಶಾಮಿಯಾನ ಅಂಗಡಿ ಭಸ್ಮವಾಗಿರುವುದು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

‘ಕನ್ನಡಪ್ರಭ, ಏಷ್ಯಾನೆಟ್‌ ಸುವರ್ಣ ನ್ಯೂಸ್‌’ನ ಸಹಯೋಗದಲ್ಲಿ ಆಯೋಜಿಸಿದ್ದ ‘ಕೆಂಗೇರಿ ಸಂಭ್ರಮ’ಕ್ಕೆ ವಿದ್ಯುಕ್ತ ತೆರೆ
ಸರ್ವಾಧ್ಯಕ್ಷರಾಗಿ ಸೋಮಲಿಂಗ ಗೆಣ್ಣೂರ ಆಯ್ಕೆ