ಕನ್ನಡಪ್ರಭ ವಾರ್ತೆ ತುರ್ವಿಹಾಳ
ನಂತರ ಖಾದಿ ಗ್ರಾಮದ್ಯೋಗ ನಿಗಮ ಮಂಡಳಿ ಅಧ್ಯಕ್ಷ ಹಾಗೂ ಮಸ್ಕಿ ಶಾಸಕ ಆರ್.ಬಸನಗೌಡ ತುರ್ವಿಹಾಳ ಮಾತನಾಡಿ, ಕಾಂಗ್ರೆಸ್ ಪಕ್ಷದ ಹಿರಿಯ, ಕೆ.ಶಾಮಿದ್ ಶಾಬ್ ಪ.ಪಂ.ಅಧ್ಯಕ್ಷರಾಗಿ ಅವಿರೋಧವಾಗಿ ಆಯ್ಕೆಯಾಗಿರುವುದು ಅಲ್ಪಸಂಖ್ಯಾತ ಸಮುದಾಯಕ್ಕೆ ಅವಕಾಶ ದೊರಕಿದಂತಾಗಿದ್ದು, ಮುಂದಿನ ದಿನಗಳಲ್ಲಿ ಪಟ್ಟಣದ ಅಭಿವೃದ್ಧಿಗೆ ಎಲ್ಲರು ಶ್ರಮಿಸಬೇಕು ಎಂದರು. ಹೊಸ ಅಧ್ಯಕ್ಷ ಕೆ.ಶಾಮಿದ ಸಾಬ ಚೌದ್ರಿ ಮಾತನಾಡಿ, ಪಟ್ಟಣದಲ್ಲಿ ಹಲವಾರು ಸಮಸ್ಯೆ ಕಂಡಿದ್ದು, ಕುಡಿಯುವ ನೀರು, ಚರಂಡಿ ಸೇರಿದಂತೆ ಅನೇಕ ಮೂಲಭೂತ ಸೌಕರ್ಯಗಳು ಈಡೇರಿಸಲು ಶಾಸಕರ ಹಾಗೂ ನಮ್ಮ ಸದಸ್ಯ ಸಲಹೆ ಸಹಕಾರದೊಂದಿಗೆ ಶ್ರಮಿಸುತ್ತೇನೆ ಎಂದರು.
ಪಪಂ ಮುಖ್ಯಾಧಿಕಾರಿ ಸಾಬಣ್ಣ ಕಟ್ಟೆಕಾರ್, ಮುಖಂಡರಾದ ಮಲ್ಲನಗೌಡ ದೇವರಮನಿ, ಫಾರೂಕ್ ಸಾಬ್ ಖಾಜಿ, ಶಿವನಗೌಡ ಗೊರೆಬಾಳ, ಹನುಮಂತಪ್ಪ ಮುದ್ದಾಪುರ, ಮೈಬುಸಾಬ್ ಮುದ್ದಾಪುರ, ಮೌಲಪ್ಪಯ್ಯ ಗುತ್ತೇದಾರ, ಉಮರ ಸಾಬ್, ಪಪಂ ಸರ್ವ ಸದಸ್ಯರು, ಮುಖಂಡರು ಭಾಗವಹಿಸಿದ್ದರು.