ಶನಿದೇವರ ದೇವಸ್ಥಾನ ಲೋಕಾರ್ಪಣೆ

KannadaprabhaNewsNetwork |  
Published : May 02, 2025, 12:16 AM IST
1ಎಚ್ಎಸ್ಎನ್15 : ಕಾರ್ಯಕ್ರಮವಲ್ಲಿ ಭಾಗವಹಿಸಿದ್ದ ಶಾಸಕ ಎ.ಮಂಜು ಅವರನ್ನು ದೇವಸ್ಥಾನದ ಮಂಡಳಿ ಸದಸ್ಯರು ಸನ್ಮಾನಿಸಿದರು. | Kannada Prabha

ಸಾರಾಂಶ

ಕೇರಳಾಪುರ ಗ್ರಾಮದ ಕಾವೇರಿ ಎಡದಂಡೆಯ ಮೇಲೆ ನೂತನವಾಗಿ ನಿರ್ಮಾಣ ಮಾಡಿರುವ ಶ್ರೀ ಶನೇಶ್ವರದೇವರ ಶಿಲೆ ಹಾಗೂ ನೂತನ ದೇವಾಲಯ ಲೋಕಾರ್ಪಣೆ ಹಾಗೂ ವಿಗ್ರಹ ಪ್ರತಿಷ್ಠಾಪನಾ ಕಾರ್ಯಕ್ರಮವುಜರುಗಿತು. ದೇವಸ್ಥಾನ ಪ್ರವೇಶದ ನಂತರ ಪೂಜಾದಿ ಕೈಂಕರ್ಯ, ನೂತನ ವಿಗ್ರಹಕ್ಕೆ ಪ್ರಾಣ ಪ್ರತಿಷ್ಠಾಪನೆ ನಂತರ ರುದ್ರಬೀಷೆಕ, ಹೂವಿನ ಅಲಂಕಾರ, ಮಹಾಮಂಗಳಾರತಿ, ಹವನ, ಹೋಮ, ಅಷ್ಟದೇವರ ಪೂಜೆ ಇತ್ಯಾದಿಗಳನ್ನು ಅರ್ಚಕರಾದ ಅರುಣ್ ಕುಮರ್ ಶಾಸ್ತ್ರಿಗಳು ಮತ್ತು ತಂಡದವರು ನೇರವೇರಿಸಿದರು.

ಬಸವಾಪಟ್ಟಣ: ಸಮೀಪದ ಕೇರಳಾಪುರ ಗ್ರಾಮದ ಕಾವೇರಿ ಎಡದಂಡೆಯ ಮೇಲೆ ನೂತನವಾಗಿ ನಿರ್ಮಾಣ ಮಾಡಿರುವ ಶ್ರೀ ಶನೇಶ್ವರದೇವರ ಶಿಲೆ ಹಾಗೂ ನೂತನ ದೇವಾಲಯ ಲೋಕಾರ್ಪಣೆ ಹಾಗೂ ವಿಗ್ರಹ ಪ್ರತಿಷ್ಠಾಪನಾ ಕಾರ್ಯಕ್ರಮವುಜರುಗಿತು. ದೇವಸ್ಥಾನ ಪ್ರವೇಶದ ನಂತರ ಪೂಜಾದಿ ಕೈಂಕರ್ಯ, ನೂತನ ವಿಗ್ರಹಕ್ಕೆ ಪ್ರಾಣ ಪ್ರತಿಷ್ಠಾಪನೆ ನಂತರ ರುದ್ರಬೀಷೆಕ, ಹೂವಿನ ಅಲಂಕಾರ, ಮಹಾಮಂಗಳಾರತಿ, ಹವನ, ಹೋಮ, ಅಷ್ಟದೇವರ ಪೂಜೆ ಇತ್ಯಾದಿಗಳನ್ನು ಅರ್ಚಕರಾದ ಅರುಣ್ ಕುಮರ್ ಶಾಸ್ತ್ರಿಗಳು ಮತ್ತು ತಂಡದವರು ನೇರವೇರಿಸಿದರು. ಪೂಜಾದಿ ಕೈಂಕರ್ಯದಲ್ಲಿ ದೇವಸ್ಥಾನ ಮಂಡಳಿಯ ಸುರೇಶ್ ಅವರು ದೇವಸ್ಥಾನ ಮಂಡಳಿಯ ಸದಸ್ಯರು ಅಲ್ಲದೆ ಗ್ರಾಮ ಪಂಚಾಯ್ತಿ ಅಧ್ಯಕ್ಷರು, ಸದಸ್ಯರು, ಮಾಜಿ ಅದ್ಯಕ್ಷರು, ಗ್ರಾಮಸ್ಥರು, ಭಕ್ತಾದಿಗಳು ಭಾಗವಹಿಸಿದರು. ದೇವಸ್ಥಾನ ಲೋಕಾರ್ಪಣೆಯನ್ನು ಅರಕಲಗೂಡು ಕ್ಷೇತ್ರದ ವಿಧಾನಸಭಾ ಸದಸ್ಯರಾದ ಎ ಮಂಜುರವರು ನೆರವೆರಿಸಿದರು. ಇದೇ ವೇಳೆ ಕೇರಳಾಪುರ ಗ್ರಾಮ ಪಂಚಾಯ್ತಿ ಅಧ್ಯಕ್ಷರಾದ ಗಂಗಾಮಣಿ, ಸದಸ್ಯರಾದ ಶಿವಣ್ಣ, ರವಿ, ಮಾಜಿ ಅಧ್ಯಕ್ಷ ಕರೀಗೌಡ, ಸದಸ್ಯರಾದ ರತ್ನ ಭಾಗವಹಿಸಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಮಾನಸಿಕ ಖಿನ್ನತೆ ಸ್ವಯಂ ಮೌಲ್ಯಮಾಪನಕ್ಕೆ ನಿಮ್ಹಾನ್ಸ್‌ ಆ್ಯಪ್‌
ಒಂದೇ ದಿನ ಜಡ್ಜ್‌ ಮುಂದೆ 60 ಪರೋಲ್‌ ಅರ್ಜಿ!