ಶನಿವಾರಸಂತೆ: ಧರ್ಮಸ್ಥಳ ವಿರುದ್ಧ ಅಪಪ್ರಚಾರ ವಿರೋಧಿಸಿ ಪ್ರತಿಭಟನೆ

KannadaprabhaNewsNetwork |  
Published : Aug 19, 2025, 01:00 AM IST
ಪೋಟೋ:- 1.ಧರ್ಮಸ್ಥಳ ಮಂಜುನಾಥ ಸ್ವಾಮಿಗೆ ಅಪಪ್ರಚಾರ ವಿರೋಧಿಸಿ ಪಾದಯಾತ್ರೆ ಸಮಿತಿ ಮತ್ತು ಹಿಂದುಪರ ಕಾರ್ಯಕರ್ತರು ಮೌನ ಮೆರವಣಿಗೆ ನಡೆಸಿದರು ನಂತರ ಪಟ್ಟಣದ ಬನ್ನಿ ಮಂಟಪ ಎದುರು ಪ್ರತಿಭಟನೆಗಾರರನ್ನು ಉದ್ದೇಶಿಸಿ ಹಿಂದು ಮುಖಂಡ ರಘು ಮಾತನಾಡುತ್ತಿರುವುದು | Kannada Prabha

ಸಾರಾಂಶ

ಧರ್ಮಸ್ಥಳದ ಶ್ರೀ ಮಂಜುನಾಥಸ್ವಾಮಿ ಮೇಲೆ ಅಪಪ್ರಚಾರ ಮತ್ತು ಕ್ಷೇತ್ರಕ್ಕೆ ಕಳಂಕ ತರಲು ನಡೆಸುತ್ತಿರುವ ಹುನ್ನಾರವನ್ನು ವಿರೋಧಿಸಿ ಸೋಮವಾರ ಶನಿವಾರಸಂತೆ ಶ್ರೀ ಮಂಜುನಾಥ ಸ್ವಾಮಿ ಪಾದಯಾತ್ರೆ ಸಮಿತಿ ವತಿಯಿಂದ ಮೌನ ಮೆರವಣಿಗೆ ಮೂಲಕ ಪ್ರತಿಭಟನೆ ನಡೆಯಿತು.

ಕನ್ನಡಪ್ರಭ ವಾರ್ತೆ ಶನಿವಾರಸಂತೆ

ಧರ್ಮಸ್ಥಳದ ಶ್ರೀ ಮಂಜುನಾಥಸ್ವಾಮಿ ಮೇಲೆ ಅಪಪ್ರಚಾರ ಮತ್ತು ಕ್ಷೇತ್ರಕ್ಕೆ ಕಳಂಕ ತರಲು ನಡೆಸುತ್ತಿರುವ ಹುನ್ನಾರವನ್ನು ವಿರೋಧಿಸಿ ಸೋಮವಾರ ಶನಿವಾರಸಂತೆ ಶ್ರೀ ಮಂಜುನಾಥ ಸ್ವಾಮಿ ಪಾದಯಾತ್ರೆ ಸಮಿತಿ ವತಿಯಿಂದ ಮೌನ ಮೆರವಣಿಗೆ ಮೂಲಕ ಪ್ರತಿಭಟನೆ ನಡೆಯಿತು.

ಸೋಮವಾರ ಬೆಳಗ್ಗೆ ಗುಡುಗಳಲೆ ಜಂಕ್ಷನ್‍ನಿಂದ ಮುಖ್ಯ ರಸ್ತೆ ಮೂಲಕ ಪಟ್ಟಣದ ಕೆಆರ್‌ಸಿ ವೃತ್ತದಲ್ಲಿರುವ ಬನ್ನಿ ಮಂಟಪದ ವರೆಗೆ ಹೊರಟ ಮೌನ ಮೆರವಣಿಗೆಯಲ್ಲಿ ಪಾದಯಾತ್ರೆ ಸಮಿತಿ ಪದಾಧಿಕಾರಿಗಳು, ಸದಸ್ಯರು ಹಾಗೂ ಹಿಂದೂಪರ ಕಾರ್ಯಕರ್ತರು ಪಾಲ್ಗೊಂಡಿದ್ದರು.

ಪ್ರತಿಭಟನಾಗಾರರನ್ನು ಉದ್ದೇಶಿಸಿ ಮಾತನಾಡಿದ ಹಿಂದು ಮುಖಂಡ ಎಸ್.ಎನ್.ರಘು, ಈ ಹಿಂದೆಯೂ ಹಲವು ಭಯೋತ್ಪಾಧಕ ಚಟುವಟಿಕೆಯಲ್ಲಿ ತೊಡಗಿದ್ದ ಮಟ್ಟಣ್ಣನವರ್‌ ಮತ್ತು ತಿಮರೋಡಿ ಸೇರಿದಂತೆ ಇತರರು ನಿರಂತರವಾಗಿ ಹಿಂದೂ ದೇವಾಲಯ ಹಾಗೂ ಹಿಂದೂಪರ ಹೋರಾಟಗಾರರನ್ನು ತುಳಿಯಲು ಪ್ರಯತ್ನ ಪಡುತ್ತಿದ್ದಾರೆ. ಇವರಿಗೆ ಯಾರು ಹಣ ನೀಡುತ್ತಿದ್ದಾರೆ ಮತ್ತು ಇವರನ್ನು ಯಾರು ಬೆಂಬಲಿಸುತ್ತಿದ್ದಾರೆ ಎಂದು ತನಿಖೆ ಆಗಬೇಕು ಎಂದು ಆಗ್ರಹಿಸಿದರು.

ಹಿಂದು ಮುಖಂಡ ಬಿ.ಎಸ್.ಅನಂತ್‍ ಕುಮಾರ್, ರಕ್ಷಿತ್ ಮಾತನಾಡಿದರು.

ಪ್ರತಿಭಟನೆಯಲ್ಲಿ ಮಂಜುನಾಥಸ್ವಾಮಿ ಪಾದಯಾತ್ರೆ ಸಮಿತಿಯ ಪ್ರಮುಖರಾದ ಮಂಜುನಾಥ್ ಅಪ್ಪಶೆಟ್ಟಳ್ಳಿ, ಪಿ.ಎನ್.ಸುಮಂತ್, ಆರ್.ಸಿ.ಪಾಲಾಕ್ಷ, ಮಹೇಶ್, ಅಭಿಷೇಕ್ ಹಾಲ್ಕೆನೆ, ಹಿಂದೂಪರ ಪ್ರಮುಖರಾದ ಪುನಿತ್ ತಾಳೂರು, ಯತೀಶ್, ಬಿ.ಜಿ.ಪೃಥ್ವಿ, ಅಶ್ವಥ್ ಬೆಂಬಳೂರು, ಕಿರಣ್ ಅಪ್ಪಶೆಟ್ಟಳ್ಳಿ, ಪ್ರವೀಣ್, ಪ್ರಭಾಕರ್, ದಿನೇಶ್, ಹೇಮಂತ್ ಮುಂತಾದವರು ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಗಾಳಿಪಟ ದಾರ ಕುತ್ತಿಗೆ ಸೀಳಿ ಮಗಳನ್ನು ಹಾಸ್ಟೆಲ್‌ನಿಂದ ಕರೆತರಲು ಹೊರಟಿದ್ದ ಅಪ್ಪ ದಾರುಣ ಸಾವು
ಪೌರಾಯುಕ್ತೆಗೆ ಬೆಂಕಿ: ಕಾಂಗ್ರೆಸ್ಸಿಗನಿಂದ ಧಮ್ಕಿ