ಶನಿವಾರಸಂತೆ: ಸುಪ್ರಜ ಶಾಲೆಯಲ್ಲಿ ಮಕ್ಕಳ ಸಂತೆ, ಅಂಕಪಟ್ಟಿ ವಿತರಣೆ

KannadaprabhaNewsNetwork |  
Published : Mar 05, 2024, 01:33 AM IST
 ಸುಪ್ರಜ ಗುರುಕುಲ ಶಾಲಾ ಮಕ್ಕಳು ಹಮ್ಮಿಕೊಂಡ ಮಕ್ಕಳ ಸಂತೆ | Kannada Prabha

ಸಾರಾಂಶ

ಶಾಲಾ ಆವರಣದಲ್ಲಿ ಮೂರು ಮತ್ತು ನಾಲ್ಕನೇ ತರಗತಿ ಪುಟಾಣಿಗಳು ಮಕ್ಕಳ ಸಂತೆ ಹಮ್ಮಿಕೊಂಡಿದ್ದರು. ಶಾಲಾ ಮಕ್ಕಳು ತಮ್ಮ ಮನೆಯ ಹೊಲ ಗದ್ದೆ, ಹಿತ್ತಲು ತೋಟಗಳಲ್ಲಿ ವಿವಿಧ ಬೆಳೆದ ತರಕಾರಿ, ಸೊಪ್ಪು, ಹಣ್ಣು ಹಂಪಲು ಹಾಗೂ ಮನೆಯಲ್ಲಿ ತಯಾರಿಸಿದ ತಿಂಡಿ ತಿನಿಸುಗಳನ್ನು ತಂದು ಮಾರಾಟ ಮಾಡಿದರು.

ಕನ್ನಡಪ್ರಭ ವಾರ್ತೆ ಶನಿವಾರಸಂತೆ

ಇಲ್ಲಿನ ಸುಪ್ರಜ ಗುರುಕುಲ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಶನಿವಾರ ಮಕ್ಕಳ ಸಂತೆ ಮತ್ತು ವಿದ್ಯಾರ್ಥಿಗಳಿಗೆ ಅಂಕಪಟ್ಟಿ ವಿತರಣೆ ಹಾಗೂ ಪೋಷಕರ ಸಭೆ ನಡೆಯಿತು.

ಶಾಲಾ ಆವರಣದಲ್ಲಿ ಮೂರು ಮತ್ತು ನಾಲ್ಕನೇ ತರಗತಿ ಪುಟಾಣಿಗಳು ಮಕ್ಕಳ ಸಂತೆ ಹಮ್ಮಿಕೊಂಡಿದ್ದರು. ಶಾಲಾ ಮಕ್ಕಳು ತಮ್ಮ ಮನೆಯ ಹೊಲ ಗದ್ದೆ, ಹಿತ್ತಲು ತೋಟಗಳಲ್ಲಿ ವಿವಿಧ ಬೆಳೆದ ತರಕಾರಿ, ಸೊಪ್ಪು, ಹಣ್ಣು ಹಂಪಲು ಹಾಗೂ ಮನೆಯಲ್ಲಿ ತಯಾರಿಸಿದ ತಿಂಡಿ ತಿನಿಸುಗಳನ್ನು ತಂದು ಮಾರಾಟ ಮಾಡಿದರು.

ಶಾಲೆಯಲ್ಲಿ ಮಕ್ಕಳ ವ್ಯವಹಾರಿಕ ಜ್ಞಾನ, ಸುಲಭ ಗಣಿತ ಕಲಿಕೆಯ ಆಶಯದಿಂದ ವರ್ಷವಿಡೀ ಬೇರೆ ಬೇರೆ ತರಗತಿಯ ವಿದ್ಯಾರ್ಥಿಗಳಿಗೂ ತಿಂಗಳಿಗೊಮ್ಮೆ ಮಾಸಿಕ ಮಕ್ಕಳ ಸಂತೆಯನ್ನು ಆಯೋಜನೆ ಮಾಡಲಾಗುತ್ತಿದೆ. ಪೋಷಕರು ಮಕ್ಕಳ ಸಂತೆಯಲ್ಲಿ ತರಕಾರಿ, ಹಣ್ಣು ಹಂಪಲುಗಳನ್ನು ಕೊಂಡು ಶಾಲೆಯ ಅಭಿವೃದ್ದಿಗೆ ಸಹಕಾರ ನೀಡುತ್ತಿದ್ದಾರೆ ಎಂದು ಶಾಲೆಯ ಪ್ರಾಂಶುಪಾಲೆ ಡಿ.ಸುಜಲಾದೇವಿ ತಿಳಿಸಿದರು.ಇದೇ ಸಂದರ್ಭ ಶಾಲೆಯ ಪೋಷಕರ ಸಭೆಯನ್ನು ನಡೆಸಿ ವಿದ್ಯಾಸಂಸ್ಥೆಯ ಅಭಿವೃದ್ಧಿ, ಶೈಕ್ಷಣಿಕ ಪ್ರಗತಿ ಮತ್ತಿತ್ತರ ವಿಷಯಗಳ ಬಗ್ಗೆ ಸಭೆಯಲ್ಲಿ ಚರ್ಚಿಸಿದರು. ಸಭೆಯಲ್ಲಿ ವಿದ್ಯಾರ್ಥಿಗಳಿಗೆ ಅಂಕಪಟ್ಟಿ ವಿತರಣೆ ಮಾಡಲಾಯಿತು. ಶಾಲೆಯ ಶಿಕ್ಷಕರು, ಪೋಷಕರು ಸಭೆಯಲ್ಲಿ ಪಾಲ್ಗೊಂಡಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಮಾನಸಿಕ ಖಿನ್ನತೆ ಸ್ವಯಂ ಮೌಲ್ಯಮಾಪನಕ್ಕೆ ನಿಮ್ಹಾನ್ಸ್‌ ಆ್ಯಪ್‌
ಒಂದೇ ದಿನ ಜಡ್ಜ್‌ ಮುಂದೆ 60 ಪರೋಲ್‌ ಅರ್ಜಿ!