ಧಾರವಾಡ:
ಈ ಮೂಲಕ ಮುಗದ ಮೂರನೇ ಬಾರಿಗೆ ಅಧ್ಯಕ್ಷ ಸ್ಥಾನ ಅಲಂಕರಿಸಿದ್ದಾರೆ. ಪ್ರತಿಸ್ಪರ್ಧಿ ಶಿವಲೀಲಾ ಕುಲಕರ್ಣಿ (ಶಾಸಕ ವಿನಯ ಕುಲಕರ್ಣಿ ಪತ್ನಿ) 2 ಮತಗಳ ಅಂತರದಿಂದ ಪರಾಭವಗೊಂಡಿದ್ದು, ಕೆಎಂಎಫ್ ಅಧಿಕಾರದ ಗದ್ದುಗೆ ಕಸಿದುಕೊಳ್ಳಲು ಮುಂದಾಗಿದ್ದ ಕಾಂಗ್ರೆಸ್ಗೆ ಮುಖಭಂಗವಾಗಿದೆ.
ಅಧ್ಯಕ್ಷ ಸ್ಥಾನಕ್ಕೆ ಬಿಜೆಪಿ ಬೆಂಬಲಿತ ನಿರ್ದೇಶಕರಾದ ಶಂಕರ ಮುಗದ, ಗೀತಾ ಮರಲಿಂಗಣ್ಣವರ ಹಾಗೂ ಸರ್ಕಾರದಿಂದ ನಾಮ ನಿರ್ದೇಶನಗೊಂಡ ಶಿವಲೀಲಾ ಕುಲಕರ್ಣಿ ನಾಮಪತ್ರ ಸಲ್ಲಿಸಿದ್ದರು. ಗೀತಾ ಮರಲಿಂಗಣ್ಣವರ ನಾಮಪತ್ರ ಹಿಂಪಡೆದಿದ್ದರು. ಹೀಗಾಗಿ ಶಂಕರ ಮುಗದ ಹಾಗೂ ಶಿವಲೀಲಾ ಕುಲಕರ್ಣಿ ಮಧ್ಯೆ ಸ್ಪರ್ಧೆ ಏರ್ಪಟ್ಟಿತ್ತು.ಒಕ್ಕೂಟದ 9 ಜನ ನಿರ್ದೇಶಕರು ಸೇರಿ ಒಟ್ಟು 14 ಮತಗಳು ಚಲಾವಣೆಯಾಗಿದ್ದವು. ಈ ಪೈಕಿ ಶಂಕರ ಮುಗದ 8 ಮತ ಪಡೆದು ಜಯಶಾಲಿಯಾದರೆ, ಶಿವಲೀಲಾ ಕುಲಕರ್ಣಿ 6 ಮತ ಪಡೆದು ಪರಾಭವಗೊಂಡರು. ಶಂಕರ ಮುಗದ 2 ಮತಗಳ ಅಂತರದಿಂದ ಜಯಗಳಿಸುವ ಮೂಲಕ 3ನೇ ಬಾರಿಗೆ ಅಧ್ಯಕ್ಷರಾಗಿ ಆಯ್ಕೆಯಾದರು. ಇನ್ನು ಉಪಾಧ್ಯಕ್ಷ ಸ್ಥಾನಕ್ಕೆ ಬಿಜೆಪಿ ಬೆಂಬಲಿತ ನಿರ್ದೇಶಕ ಸುರೇಶ್ಚಂದ್ರ ಹೆಗಡೆ ಮಾತ್ರ ನಾಮಪತ್ರ ಸಲ್ಲಿಸಿದ್ದರಿಂದ ಅವಿರೋಧವಾಗಿ ಆಯ್ಕೆಯಾದರು.
ಈ ನಡುವೆ ಎರಡು ದಿನಗಳ ಮುಂಚೆಯಷ್ಟೇ ಶಾಸಕ ವಿನಯ ಕುಲಕರ್ಣಿ ಪತ್ನಿ ಶಿವಲೀಲಾ ಕುಲಕರ್ಣಿ ಅವರನ್ನು ಸರ್ಕಾರ ನಾಮನಿರ್ದೇಶಿತ ಸದಸ್ಯರನ್ನಾಗಿ ನೇಮಿಸಿ ಆದೇಶಿಸಿತ್ತು. ಇದರಿಂದ ಕಾಂಗ್ರೆಸ್ ಬೆಂಬಲಿತ ನಿರ್ದೇಶಕರ ಸಂಖ್ಯೆ 3ಕ್ಕೆ ಏರಿತ್ತು. ಈ ನಡುವೆ ಚುನಾಯಿತ 9 ನಿರ್ದೇಶಕರಲ್ಲದೇ, ನಾಮನಿರ್ದೇಶಿತ ಒಬ್ಬ ನಿರ್ದೇಶಕರು, ನಾಲ್ವರು ಅಧಿಕಾರಿಗಳು ಸೇರಿದಂತೆ 14 ಜನ ಮತ ಹಾಕಬೇಕಿತ್ತು.
ಒಟ್ಟಿನಲ್ಲಿ ಕೆಎಂಎಫ್ ಅಧ್ಯಕ್ಷಗಾದಿ ಏರಬೇಕೆಂದು ಶತ ಪ್ರಯತ್ನ ನಡೆಸಿದ್ದ ಕಾಂಗ್ರೆಸ್ ವಿಫಲವಾದಂತಾಗಿದೆ. 2 ಮತಗಳ ಅಂತರದಿಂದ ಶಿವಲೀಲಾ ಕುಲಕರ್ಣಿ ಪರಾಭವಗೊಂಡರು.ಬೆಂಬಲಿಗರ ವಿಜಯೋತ್ಸವ:
ನೂತನ ಅಧ್ಯಕ್ಷ ಶಂಕರ ಮುಗದ ಪ್ರತಿನಿಧಿಸುವ ಶಿವಳ್ಳಿ ಹಾಲು ಉತ್ಪಾದಕರ ಸಹಕಾರ ಸಂಘವನ್ನು ಕರ್ನಾಟಕ ಸಹಕಾರ ಸಂಘಗಳ ಕಾಯ್ದೆ 1959ರ ಕಲಂ 30(1)ರ ಅನ್ವಯ ರದ್ದುಗೊಳಿಸಲಾಗಿದೆ. ಹೀಗಾಗಿ ಶಂಕರ ಮುಗದ ಸ್ಪರ್ಧೆ ಹಾಗೂ ಚುನಾವಣೆ ಫಲಿತಾಂಶ ಘೋಷಣೆ ರದ್ದು ಮಾಡುವಂತೆ ಚುನಾವಣಾಧಿಕಾರಿಗೆ ಶಿವಲೀಲಾ ಕುಲಕರ್ಣಿ ಅರ್ಜಿ ಸಲ್ಲಿಸಿದ್ದರು. ಆದರೆ ನಾಮಪತ್ರಗಳ ಪರಿಶೀಲನೆ ಅವಧಿ ಮುಗಿದ ಬಳಿಕ ಅರ್ಜಿ ಸಲ್ಲಿಸಿದ್ದರಿಂದ ಅದನ್ನು ಪರಿಗಣನೆಗೆ ತೆಗೆದುಕೊಂಡಿಲ್ಲ ಎಂದು ಚುನಾವಣಾಧಿಕಾರಿಯೂ ಆಗಿರುವ ಹುಡಾ ಆಯುಕ್ತ ಡಾ. ಸಂತೋಷ ಬಿರಾದಾರ ತಿಳಿಸಿದರು.