ಶಂಕರಾಚಾರ್ಯರ ಜಯಂತ್ಯುತ್ಸವ, ಶೋಭಾಯಾತ್ರೆ

KannadaprabhaNewsNetwork |  
Published : May 13, 2024, 12:04 AM IST
ಫೋಟೋ:12ಕೆಪಿಎಸ್ಎನ್ಡಿ2:  | Kannada Prabha

ಸಾರಾಂಶ

ಸಿಂಧನೂರಿನ ಬ್ರಾಹ್ಮಣರ ಓಣಿಯಲ್ಲಿ ಜಗದ್ಗುರು ಆದಿ ಶಂಕರಾಚಾರ್ಯರ ಜಯಂತ್ಯುತ್ಸವ ಹಾಗೂ ಶೋಭಾಯಾತ್ರೆ ಕಾರ್ಯಕ್ರಮ ಭಾನುವಾರ ಅದ್ಧೂರಿಯಾಗಿ ನಡೆಯಿತು

ಸಿಂಧನೂರು: ನಗರದ ಬ್ರಾಹ್ಮಣರ ಓಣಿಯಲ್ಲಿ ಜಗದ್ಗುರು ಆದಿ ಶಂಕರಾಚಾರ್ಯರ ಜಯಂತ್ಯುತ್ಸವ ಹಾಗೂ ಶೋಭಾಯಾತ್ರೆ ಕಾರ್ಯಕ್ರಮ ಭಾನುವಾರ ಅದ್ಧೂರಿಯಾಗಿ ನಡೆಯಿತು.

ದೇವಸ್ಥಾನದ ಅರ್ಚಕ ಸುಬ್ಬುಶಾಸ್ತ್ರಿ ಹಾಗೂ ರಾಮಚಂದ್ರ ಸೋಮಯಾಜಿ ನೇತೃತ್ವದಲ್ಲಿ ರುದ್ರಾಭಿಷೇಕ, ಫಲಪಂಚಾಮೃತ ಅಭಿಷೇಕ, ಅಲಂಕಾರ ನಡೆಯಿತು. ನಂತರ ಹಲವಾರು ಭಜನಾ ಮಂಡಳಿಗಳಿಂದ ಭಜನೆ ಮಾಡುತ್ತಾ, ಹಳೇಬಜಾರ್‌ನಿಂದ ಶ್ರೀರಾಮ ಮಂದಿರದವರಗೆ ಶಂಕರಾಚಾರ್ಯರ ಭಾವಚಿತ್ರದ ಜೊತೆಗೆ ಶೋಭಾಯಾತ್ರೆ ಜರುಗಿತು.

ನಂತರ ಅರ್ಚಕ ರಾಮಚಂದ್ರ ಸೋಮಾಯಾಜಿ ಮಾತನಾಡಿ, ಪ್ರಾಚೀನ ಕಾಲದಲ್ಲಿ ಸಂಚಾರ ಮಾಡುವದು ಕಷ್ಟದ ಸಮಯದಲ್ಲಿ ಕನ್ಯಾಕುಮಾರಿಯಿಂದ ಕಾಶ್ಮೀರದವರಗೆ ದೇಶಾದ್ಯಂತ ಸಂಚರಿಸಿ ಜನಮನ ಗೆದ್ದರು. ತಮ್ಮ ಅದ್ವೈತ ತತ್ವದ ಮೂಲಕ ಧರ್ಮ ಜಾಗೃತಿ ಮಾಡಿ ಹಿಂದೂ ಧರ್ಮವನ್ನು ಪುನುರುತ್ಥಾನಗೊಳಿಸಿದರು ಎಂದು ಹೇಳಿದರು.

ಈ ಸಂದರ್ಭದಲ್ಲಿ ರಾಮಕೃಷ್ಣಾಚಾರ್ ಗೋನ್ವಾರ, ನರಸಿಂಹಾಚಾರ್ ಮಠಾಧಿಕಾರ್, ಗೋವಿಂದರಾವ್ ಕುಲಕರ್ಣಿ, ಮನೋಹರರಾವ್ ಕುಲಕರ್ಣಿ, ರಾಜು ಬಂಡಿ ವಕೀಲ್, ಎಂ.ವಿ.ಮೋಹನ್, ಲಕ್ಷ್ಮಣರಾವ್ ಕುಲಕರ್ಣಿ, ಶೇಷಾದ್ರಿ, ವಿಶ್ವನಾಥ ಕಲ್ಲೂರು, ವೆಂಕಟೇಶ ಕೆಂಗಲ್, ಪ್ರಹ್ಲಾದ ಕುಲಕರ್ಣಿ, ಪ್ರಭು ದೇಶಪಾಂಡೆ, ಆನಂದ ಗೋರ್ಕರ್, ಪ್ರಭಾಕರ ಕುಲಕರ್ಣಿ, ಅವಿನಾಶ್ ಬಂಡಿ ವಕೀಲ್, ವಿನಾಯಕ ಕಲ್ಲೂರು, ಸುನೀಲ್ ಕುಲಕರ್ಣಿ, ಜಗನ್ನಾಥ ದೇಶಪಾಂಡೆ, ಪ್ರಾಣೇಶ ಸಿದ್ರಾಂಪುರ ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಬಜೆಟಲ್ಲಿ ಹೇಳಿದಂತೆ 15 ಸಾವಿರ ಶಿಕ್ಷಕರ ಹುದ್ದೆ ಭರ್ತಿ ಶೀಘ್ರ: ಮಧು
ಬೆಂಗಳೂರಿನ ಕೊಳಚೆ ನೀರಿಂದ ತರಕಾರಿಯೂ ವಿಷ : ಸಂಸತ್ತಲ್ಲಿ ಗೌಡ