ಕನ್ನಡಪ್ರಭ ವಾರ್ತೆ ಕಾಪು
ಈ ಸಂದರ್ಭ ಶಿಕ್ಷಣ, ಕೃಷಿ, ಸಾಹಿತ್ಯ, ರಂಗಭೂಮಿ, ಸಂಘಟನೆ, ಸಮಾಜಸೇವೆ ಸಹಿತ ವಿವಿಧ ಕ್ಷೇತ್ರಗಳಲ್ಲಿ ಸೇವೆ ಸಲ್ಲಿಸುತ್ತಿರುವವರಿಗಾಗಿ ನೀಡಲಾಗುತ್ತಿರುವ ಪಾಂಗಾಳ ವಿಠಲ ಶೆಣೈ ಸ್ಮರಣಾರ್ಥ ‘ಸಾಧನಾ-ಪ್ರೇರಣಾ ಪುರಸ್ಕಾರ’ವನ್ನು ನಿವೃತ್ತ ಶಿಕ್ಷಕ, ಕಲಾವಿದ ಕೃಷ್ಣಕುಮಾರ್ ರಾವ್ ಮಟ್ಟು ಅವರಿಗೆ ಪ್ರದಾನ ಮಾಡಲಾಯಿತು.ಸಮಾರಂಭದ ಅಧ್ಯಕ್ಷತೆಯನ್ನು ಶಿರ್ವ ರೋಟರಿ ಅಧ್ಯಕ್ಷ ಆಲ್ವಿನ್ ಅಮಿತ್ ಅರಾನ್ಹಾ ವಹಿಸಿದ್ದರು. ಅತಿಥಿಗಳಾಗಿ ಪಾಂಗಾಳ ಜಯರಾಮ ಶೆಣೈ, ೨೦೨೫-೨೬ನೇ ಸಾಲಿನ ನಿಯೋಜಿತ ಜಿಲ್ಲಾ ಗವರ್ನರ್ ಪಾಲಾಕ್ಷ ಹಾಸನ, ೨೦೨೬-೨೭ರ ಜಿಲ್ಲಾ ಗವರ್ನರ್ ಬಿ.ಎಂ.ಭಟ್ ಬ್ರಹ್ಮಾವರ, ವಲಯ ಸಹಾಯಕ ಗವರ್ನರ್ ಅನಿಲ್ ಡೇಸಾ, ಆರ್ಸಿಸಿ ಜಿಲ್ಲಾ ಪ್ರತಿನಿಧಿ ಪ್ರಸಾದ್ ಆಚಾರ್ಯ ಉಪಸ್ಥಿತರಿದ್ದರು.ಆರ್ಸಿಸಿ ಜಿಲ್ಲಾ ಚೇರ್ಮನ್ ಬಿ.ಪುಂಡಲೀಕ ಮರಾಠೆ ಪ್ರಾಸ್ತಾವಿಕವಾಗಿ ಮಾತನಾಡಿದರು. ಸಮ್ಮೇಳನ ಸಮಿತಿ ಅಧ್ಯಕ್ಷ ಡಾ.ವಿಠಲ್ ನಾಯಕ್ ಸ್ವಾಗತಿಸಿದರು. ಡಾ.ಅರುಣ್ ಕುಮಾರ್ ಹೆಗ್ಡೆ ನಿರೂಪಿಸಿದರು. ರೋಟರಿ ಕಾರ್ಯದರ್ಶಿ ಈವನ್ ಜ್ಯೂಡ್ ಡಿಸೋಜ ವಂದಿಸಿದರು.ಆರಂಭದಲ್ಲಿ ಹಿರಿಯ ಸಾಹಿತಿ ಪಾಂಗಾಳ ಬಾಬು ಕೊರಗ ನೇತೃತ್ವದ ನವೋದಯ ಕೊರಗರ ಸಾಂಸ್ಕೃತಿಕ ಕಲಾ ತಂಡದಿಂದ ಕಲಾ ಪ್ರಸ್ತುತಿ ನಡೆಯಿತು.