ಶಾಂತವೀರ ಪಟ್ಟಾಧ್ಯಕ್ಷರ ಬದುಕೇ ಒಂದು ಇತಿಹಾಸ

KannadaprabhaNewsNetwork |  
Published : Mar 19, 2024, 12:50 AM IST
ಸಿಂದಗಿ | Kannada Prabha

ಸಾರಾಂಶ

ಸಿಂದಗಿ: ಮಾನವೀಯತೆಗೆ ಹೊಸ ಭಾಷೆ ಬರೆದ ಸಿಂದಗಿಯ ಸಿರಿ ಶ್ರೀ ಶಾಂತವೀರ ಪಟ್ಟಾಧ್ಯಕ್ಷರ ಬದುಕೇ ಒಂದು ಇತಿಹಾಸ ಎಂದು ಯಂಕಂಚಿ ಹಿರೇಮಠದ ಶ್ರೀ ಅಭಿನವ ರುದ್ರಮನಿ ಶಿವಾಚಾರ್ಯರು ಹೇಳಿದರು.

ಕನ್ನಡಪ್ರಭ ವಾರ್ತೆ ಸಿಂದಗಿ

ಮಾನವೀಯತೆಗೆ ಹೊಸ ಭಾಷೆ ಬರೆದ ಸಿಂದಗಿಯ ಸಿರಿ ಶ್ರೀ ಶಾಂತವೀರ ಪಟ್ಟಾಧ್ಯಕ್ಷರ ಬದುಕೇ ಒಂದು ಇತಿಹಾಸ ಎಂದು ಯಂಕಂಚಿ ಹಿರೇಮಠದ ಶ್ರೀ ಅಭಿನವ ರುದ್ರಮನಿ ಶಿವಾಚಾರ್ಯರು ಹೇಳಿದರು.

ಪಟ್ಟಣದ ಊರಿನ ಹಿರಿಯಮಠದಲ್ಲಿ ಈಚೆಗೆ ನಡೆದ ಶ್ರೀ ಶಾಂತವೀರ ಪಟ್ಟಾಧ್ಯಕ್ಷರ 44ನೇ ಪುಣ್ಯ ಸ್ಮರಣೋತ್ಸವ ಮತ್ತು ಗದುಗಿನ ತೋಂಟದಾರ್ಯ ಮಠದ ಲಿಂ ಡಾ.ಸಿದ್ದಲಿಂಗ ಮಹಾಸ್ವಾಮಿಗಳ 6ನೇ ಗುರುಸ್ಮರಣೆ ಕಾರ್ಯಕ್ರಮದಲ್ಲಿ ಯುವ ಸಾಹಿತಿ ರೇಣುಕಾಚಾರ್ಯ ಹಿರೇಮಠ ಅವರ ಸಾಹಿತ್ಯದಲ್ಲಿ ಅಂತಾರಾಷ್ಟ್ರೀಯ ಹಿಂದೂಸ್ತಾನಿ ಸಂಗೀತ ಕಲಾವಿದ ಪಂ.ಶರಣ ಚೌಧರಿ ಅವರ ಸಂಗೀತ ನಿರ್ದೇಶನದ ಹಾಗೂ ಪಂಡಿತ ರಾಘವೇಂದ್ರ ಜೋಷಿ ಅವರ ಸಂಗೀತ ಸಂಯೋಜನೆಯಲ್ಲಿ ಮೂಡಿ ಬಂದ ಸಿಂದಗಿಯ ಶ್ರೀರಕ್ಷೆ ಭಕ್ತಿಗೀತೆ ಲೋಕಾರ್ಪಣೆ ಮಾಡಿ ಅವರು ಮಾತನಾಡಿದರು.

ಈ ವೇಳೆ ಬೆಂಗಳೂರಿನ ಅಂತಾರಾಷ್ಟ್ರೀಯ ಹಿಂದೂಸ್ತಾನಿ ಕಲಾವಿದ ಪಂ.ಶರಣ್ ಚೌಧರಿ, ತಬಲಾವಾದಕ ಪಂ.ರಾಘವೇಂದ್ರ ಜೋಷಿ, ಯುವ ಸಾಹಿತಿ ರೇಣುಕಾಚಾರ್ಯ ಹಿರೇಮಠ, ಹಾಸ್ಯ ಕಲಾವಿದ ಪ್ರಶಾಂತ ಚೌಧರಿ, ಡಾ.ಪ್ರಕಾಶ ರಾಗರಂಜನಿ, ಪೂಜಾ ಹಿರೇಮಠ ಅವರಿಗೆ ಶ್ರೀಮಠದಿಂದ ಗೌರವಿಸಲಾಯಿತು. ನಂತರ ರಾಗರಂಜಿನಿ ಸಂಗೀತ ಕೇಂದ್ರದ ತಂಡದವರಿಂದ ಸಂಗೀತ ಕಾರ್ಯಕ್ರಮ ನೆರವೇರಿತು. ವೇದಿಕೆ ಮೇಲೆ ಊರಿನ ಹಿರೇಮಠದ ಶ್ರೀ ಶಿವಾನಂದ ಶಿವಾಚಾರ್ಯರು, ಸಂಶಿಯ ವಿರಕ್ತಮಠದ ಶ್ರೀ ಚೆನ್ನಬಸವ ದೇವರು ಉಪಸ್ಥಿತರಿದ್ದರು.

ಸಂಗೀತಗಾರ ರೇಣುಕಗವಾಯಿಗಳು ಪ್ರಾರ್ಥಿಸಿದರು. ಉಪನ್ಯಾಸಕರಾದ ಸಿದ್ದಲಿಂಗ ಕಿಣಗಿ ಸ್ವಾಗತಿಸಿದರು. ಗದಿಗಯ್ಯ ನಂದಿಮಠ ನಿರೂಪಿಸಿದರು. ಕಾರ್ಯಕ್ರಮದಲ್ಲಿ ಶ್ರೀಮಠದ ಭಕ್ತ ಸಮೂಹ ಪಾಲ್ಗೊಂಡಿದ್ದರು.ಸಿಂದಗಿ

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಮಗು ಸಾವಿನ ಶಾಕ್‌ನಿಂದ ತಾಯಿಯೂ ಆತ್ಮ*ತ್ಯೆ
ಗ್ಯಾಸ್‌ಗಾಗಿ ಆಟೋ ಚಾಲಕರ ಯುದ್ಧ! - ಬಂಕ್‌ಗಳ ಮುಂದೆ ರಾತ್ರಿ ಇಡೀ ಜಾಗರಣೆ