ಸರ್ವರಲ್ಲೂ ಸಮಾನ ಮನೋಭಾವ ಹೊಂದಿದ್ದ ಶಾಂತವೀರ ಪಟ್ಟಾಧ್ಯಕ್ಷರು: ಡಾ. ತೋಂಟದ ಸಿದ್ದರಾಮ ಸ್ವಾಮೀಜಿ

KannadaprabhaNewsNetwork |  
Published : Feb 19, 2026, 02:30 AM IST
18ಎಚ್‌ವಿಆರ್‌3 | Kannada Prabha

ಸಾರಾಂಶ

ಲಿಂ. ಶಾಂತವೀರ ಪಟ್ಟಾಧ್ಯಕ್ಷರು ಸದಾಚಾರಿ ಆಗಿದ್ದರು. ಅವರು ನುಡಿದಂತೆ ನಡೆದರು ಎಂದು ಗದಗ ತೋಂಟದಾರ್ಯ ಮಠದ ಜಗದ್ಗುರು ಡಾ. ತೋಂಟದ ಸಿದ್ದರಾಮ ಸ್ವಾಮೀಜಿ ಹೇಳಿದರು.

ಹಾವೇರಿ: ಸರ್ವರಲ್ಲೂ ಸಮಾನ ಮನೋಭಾವ ಹೊಂದಿದ್ದ ಲಿಂ. ಶಾಂತವೀರ ಪಟ್ಟಾಧ್ಯಕ್ಷರು ಸದಾಚಾರಿ ಆಗಿದ್ದರು. ಅವರು ನುಡಿದಂತೆ ನಡೆದರು. ಭಕ್ತರ ಕಷ್ಟಗಳಿಗೆ ಸ್ಪಂದಿಸುತ್ತಿದ್ದ ಮಾತೃ ಹೃದಯಿಯಾಗಿದ್ದರು ಎಂದು ಗದಗ ತೋಂಟದಾರ್ಯ ಮಠದ ಜಗದ್ಗುರು ಡಾ. ತೋಂಟದ ಸಿದ್ದರಾಮ ಸ್ವಾಮೀಜಿ ಹೇಳಿದರು.

ಇಲ್ಲಿಯ ಸಿಂದಗಿ ಮಠದ ಲಿಂಗೈಕ್ಯ ಶಾಂತವೀರ ಪಟ್ಟಾಧ್ಯಕ್ಷರ 46ನೇ ಪುಣ್ಯ ಸ್ಮರಣೋತ್ಸವದ ಕೊನೆಯ ದಿನದ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಆಶೀರ್ವಚನ ನೀಡಿದರು.

ಮಹಾತ್ಮರ ಜೀವನ ದರ್ಶನವೇ ಒಂದು ಆದರ್ಶ. ತಮ್ಮ ನಡೆ ಮತ್ತು ನುಡಿಗಳನ್ನು ಒಂದೇ ಎನ್ನುವಂತೆ ಬದುಕಿ, ಅರಿವು, ಆಚಾರ, ಅನುಭಾವದಿಂದ ಮಾನವ ಬದುಕಿಗೆ ದಾರಿದೀಪವಾದ ಜಂಗಮ ಪುಂಗವರಲ್ಲಿ ಲಿಂ. ಶಾಂತವೀರ ಪಟ್ಟಾಧ್ಯಕ್ಷರು ಅಗ್ರಗಣ್ಯರು. ಶಾಂತವೀರ ಪಟ್ಟಾಧ್ಯಕ್ಷರು ಯಾವುದೇ ಜಾತಿ-ಪಂಥ, ಮತಕ್ಕೆ ಸೀಮಿತಗೊಳಿಸದೇ ಅವರು ಎಲ್ಲ ಸಮಾಜಕ್ಕೆ ಸೇರಿದವರಾಗಿದ್ದಾರೆ. ಮನುಕುಲಗಳ ಒಳಿತಿಗಾಗಿ ಶ್ರಮಿಸಿದವರು ಎಂದು ಹೇಳಿದರು.

ಹಾವೇರಿ ಹುಕ್ಕೇರಿ ಮಠದ ಸದಾಶಿವ ಸ್ವಾಮೀಜಿ ಮಾತನಾಡಿ, ಯೋಗ ಮತ್ತು ಶಿವಯೋಗದ ಮೂಲಕ ಪಂಚ ಪುರುಷ ಸಿದ್ಧಿಯನ್ನು ಸಾಧಿಸಿದ ಲಿಂ.ಸಿಂದಗಿ ಶಾಂತವೀರ ಪಟ್ಟಾಧ್ಯಕ್ಷರು ತಮ್ಮ ತಪಃಶಕ್ತಿಯ ಮೂಲಕ ಭಕ್ತರ ನೋವುಗಳನ್ನು ಪರಿಹರಿಸಿ, ಜನಮುಖಿ ಕಾರ್ಯಗಳಿಂದ ಜಗದೀಶ್ವರರಾಗಿದ್ದಾರೆ ಎಂದು ಹೇಳಿದರು.

ಬೈರನಹಟ್ಟಿ ದೊರೆ ಸ್ವಾಮಿ ವಿರಕ್ತಮಠದ ಶಾಂತಲಿಂಗ ಸ್ವಾಮೀಜಿ, ಪ್ರವಚನಕಾರ ಮುಧೋಳ ಸಿದ್ದಾರೂಢ ಶಿವಯೋಗಾಶ್ರಮದ ಸಿದ್ದರಾಮ ಸ್ವಾಮೀಜಿ, ಹೋತನಹಳ್ಳಿ ಸಿಂದಗಿ ಮಠದ ಶಂಭುಲಿಂಗ ಪಟ್ಟಾಧ್ಯಕ್ಷರು ಉಪಸ್ಥಿತರಿದ್ದರು.

ಸಮಾರಂಭಕ್ಕೂ ಮೊದಲು ಸಿಂಧಗಿ ಮಠದಲ್ಲಿ ನಿರ್ಮಿಸಲಾದ ಸಂಸ್ಕೃತ ಪಾಠ ಶಾಲೆಯ ನವೀಕೃತ ಕೊಠಡಿಗಳ ಉದ್ಘಾಟನೆ ಜರುಗಿತು.

ವೇದಿಕೆ ಸಮಾರಂಭದಲ್ಲಿ ಸಾಧನೆಗೈದ ಸಂಸ್ಕೃತ ಪಾಠ ಶಾಲೆಯ ಹಳೆಯ ವಿದ್ಯಾರ್ಥಿಗಳಾದ ಶಿವಮೊಗ್ಗದ ಮಹಾಲಿಂಗಯ್ಯ ಶಾಸ್ತ್ರಿಗಳು ಹಾಗೂ ಬೈಲಹೊಂಗಲದ ಮಹಾಂತೇಶ್ ಶಾಸ್ತ್ರಿಗಳು ಆರಾದ್ರಿಮಠ್ ಅವರನ್ನು ಸನ್ಮಾನಿಸಲಾಯಿತು.

ಕೂಡ್ಲಿಗಿಯ ಅಂತಾರಾಷ್ಟ್ರೀಯ ಹಾಸ್ಯ ಕಲಾವಿದ ಕೋಗಳಿ ಕೊಟ್ರೇಶ್ ಅವರಿಂದ ವಿಶೇಷ ಹಾಸ್ಯ ಕಾರ್ಯಕ್ರಮ ಜರುಗಿತು. ಜಿ.ಎಸ್. ಭಟ್ ಹಾಗೂ ಜಗದೀಶ್ ಶಾಸ್ತ್ರಿಗಳು ಹಾವಣಗಿ ಕಾರ್ಯಕ್ರಮ ನಿರ್ವಹಿಸಿದರು. ಶಿವಯೋಗಿ ಹಿರೇಮಠ ವಂದಿಸಿದರು. ಸಿಂಧಗಿ ಮಠದ ಸಂಚಾಲಕ ಶಿವಬಸಯ್ಯ ಆರಾಧ್ಯಮಠ, ಶಿವಣ್ಣ ಶಿರೂರ, ಡಾ ಬಾಲೆಹೊಸೂರ್, ತಮ್ಮಣ್ಣ ಮುದ್ದಿ, ಚನ್ನಬಸಯ್ಯ ಹಿರೇಮಠ, ಮಹಾಂತೇಶ ಹಿರೇಮಠ, ರಾಮಾಪುರ ಶಾಸ್ತ್ರಿಗಳು, ವೀರಣ್ಣ ಮಹಾರಾಜಪೇಟೆ ಇತರರು ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಕನಕಗಿರಿ ಕ್ಷೇತ್ರದಲ್ಲಿ ಸಚಿವರಿಂದ ಅಟ್ರಾಸಿಟಿ ಕೇಸ್ ಭಾಗ್ಯ
ಭೌತಿಕ ಸಿರಿ ಶಾಶ್ವತವಲ್ಲ, ಅಧ್ಯಾತ್ಮ ನಿಜವಾದ ಸಂಪತ್ತು: ಡಾ. ವೀರಸೋಮೇಶ್ವರ ಸ್ವಾಮೀಜಿ