ನ್ಯಾಷನಲ್ ಸಬ್ ಜ್ಯೂನಿಯರ್ ಟೆಕ್ವಾಂಡೋದಲ್ಲಿ ಶಾನ್ವಿ ಸತೀಶ್ ಗೆ ಕಂಚಿನ ಪದಕ

KannadaprabhaNewsNetwork |  
Published : Jan 02, 2026, 02:15 AM IST
1ಕೆಆರ್ ಎಂಎನ್6.ಜೆಪಿಜಿರಾಷ್ಟ್ರಮಟ್ಟದ ಸಬ್ ಜೂನಿಯರ್ - ಜೂನಿಯರ್ ಟೆಕ್ವಾಂಡೋ ಸ್ಪರ್ಧೆಯಲ್ಲಿ ರಾಮನಗರ ಶಾನ್ವಿ ಸತೀಶ್ ಸ್ಪಾರಿಂಗ್ ನಲ್ಲಿ ಒಂದು ಕಂಚಿನ ಪದಕ ಪಡೆದಿರುವುದು. | Kannada Prabha

ಸಾರಾಂಶ

ಕರ್ನಾಟಕ, ತಮಿಳುನಾಡು , ತೆಲಂಗಾಣ , ದೆಹಲಿ, ಗುಜರಾತ್, ಒರಿಸ್ಸಾ, ಕೇರಳ ರಾಜ್ಯಗಳಿಂದ ಸುಮಾರು 450ಕ್ಕೂ ಹೆಚ್ಚಿನ ಕ್ರಿಡಾಪಟುಗಳು ಸ್ಪರ್ಧೆಯಲ್ಲಿ ಭಾಗವಹಿಸಿದ್ದರು. ಸ್ಪಾರಿಂಗ್ ವಿಭಾಗದಲ್ಲಿ ಆರಂಭದಿಂದಲೂ ಮುನ್ನಡೆ ಸಾಧಿಸಿದ ಶಾನ್ವಿ ಸೆಮಿಫೈನಲ್ ಪಂದ್ಯದಲ್ಲಿ ಉತ್ತಮ ಪೈಪೋಟಿ ನೀಡಿದ್ದಳು. ಅಂತಿಮವಾಗಿ ಶಾನ್ವಿ ಸತೀಶ್ ಕಂಚಿನ ಪದಕ ಪಡೆದುಕೊಂಡಳು.

ರಾಮನಗರ: ಗುಜರಾತ್ ನ ಗಾಂಧಿನಗರದ ಧ್ಯಾನ್ ಅಕಾಡೆಮಿಯಲ್ಲಿ ನಡೆದ 40ನೇ ರಾಷ್ಟ್ರಮಟ್ಟದ ಸಬ್ ಜ್ಯೂನಿಯರ್ - ಜ್ಯೂನಿಯರ್ ಟೆಕ್ವಾಂಡೋ ಸ್ಪರ್ಧೆಯಲ್ಲಿ 8 ರಿಂದ 10 ವಯೋಮಾನದ 25 ರಿಂದ 30 ಕೆಜಿ ತೂಕದ ವಿಭಾಗದಲ್ಲಿ ಕರ್ನಾಟಕ ತಂಡವನ್ನು ಪ್ರತಿನಿಧಿಸಿದ ರಾಮನಗರ ಶಾನ್ವಿ ಸತೀಶ್ ಸ್ಪಾರಿಂಗ್ ನಲ್ಲಿ ಒಂದು ಕಂಚಿನ ಪದಕ ಪಡೆದಿದ್ದಾಳೆ.

ಕರ್ನಾಟಕ, ತಮಿಳುನಾಡು , ತೆಲಂಗಾಣ , ದೆಹಲಿ, ಗುಜರಾತ್, ಒರಿಸ್ಸಾ, ಕೇರಳ ರಾಜ್ಯಗಳಿಂದ ಸುಮಾರು 450ಕ್ಕೂ ಹೆಚ್ಚಿನ ಕ್ರಿಡಾಪಟುಗಳು ಸ್ಪರ್ಧೆಯಲ್ಲಿ ಭಾಗವಹಿಸಿದ್ದರು. ಸ್ಪಾರಿಂಗ್ ವಿಭಾಗದಲ್ಲಿ ಆರಂಭದಿಂದಲೂ ಮುನ್ನಡೆ ಸಾಧಿಸಿದ ಶಾನ್ವಿ ಸೆಮಿಫೈನಲ್ ಪಂದ್ಯದಲ್ಲಿ ಉತ್ತಮ ಪೈಪೋಟಿ ನೀಡಿದ್ದಳು. ಅಂತಿಮವಾಗಿ ಶಾನ್ವಿ ಸತೀಶ್ ಕಂಚಿನ ಪದಕ ಪಡೆದುಕೊಂಡಳು.

ಶಾನ್ವಿ ಸತೀಶ ಈ ಹಿಂದೆ ದುಬೈ ಮತ್ತು ಉಜ್ಬೇಕಿಸ್ತಾನ್ ಮತ್ತು ಏಶಿಯನ್ ಚಾಂಪಿಯನ್ ಶಿಪ್ ಮತ್ತು ಮಲೇಷ್ಯಾ ನಲ್ಲೂ ಚಿನ್ನ ಮತ್ತು ಬೆಳ್ಳಿ ಪದಕಗಳನ್ನು ಪಡೆದಿದ್ದರು .

ಸರ್ಕಾರಿ ನೌಕರರ ಸಂಘದ ಜಿಲ್ಲಾಧ್ಯಕ್ಷ ಸತೀಶ್ ಹಾಗೂ ಚೈತ್ರಾ ದಂಪತಿ ಪುತ್ರಿಯಾದ ಶಾನ್ವಿ, ರಾಮನಗರದ ನೇಟಸ್ ಶಾಲೆಯಲ್ಲಿ 3ನೇ ತರಗತಿ ವ್ಯಾಸಂಗ ಮಾಡುತ್ತಿದ್ದಾಳೆ. ಭಾರತ ತಂಡದ ತರಬೇತುದಾರರಾದ ಪ್ರದೀಪ್ ಮತ್ತು ಬಾಲರಾಜನ್ ರವರು ಶಾನ್ವಿಗೆ ತರಬೇತಿ ನೀಡುತ್ತಿದ್ದಾರೆ.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ನಾಯಕತ್ವ ಬದಲಾವಣೆ ಗೊಂದಲದ ನಡುವೆಯೇ ಕಸರತ್ತು ಸಿದ್ದರಾಮಯ್ಯ ಬಜೆಟ್‌ ತಯಾರಿ
ಬಳ್ಳಾರಿ - ಗುಂಡೇಟಿಗೆ ಯುವಕ ಬಲಿ - ನಗರದಲ್ಲಿ 144 ಸೆಕ್ಷನ್ ಜಾರಿ