ಶರಣರ ವಚನ ಸಾಹಿತ್ಯದಿಂದ ಮನುಕುಲಕ್ಕೆ ಒಳಿತು

KannadaprabhaNewsNetwork |  
Published : Aug 25, 2024, 01:54 AM IST
ಕಾರ್ಯಕ್ರಮದಲ್ಲಿ ಶಾಂತಲಿಂಗ ಶ್ರೀಗಳು ಮಾತನಾಡಿದರು. | Kannada Prabha

ಸಾರಾಂಶ

ಎಲ್ಲರನ್ನೂ ಸನ್ಮಾರ್ಗದೆಡೆ ಮುನ್ನಡೆಸುವ ವಚನ ಸಾಹಿತ್ಯವನ್ನು ನಾವಿಂದು ಓದಬೇಕು, ಅರಿತುಕೊಳ್ಳಬೇಕು ಅದರಂತೆ ನಡೆದುಕೊಳ್ಳಬೇಕು

ಗದಗ: ಬಸವಾದಿ ಶರಣರ ವಚನ ಸಾಹಿತ್ಯದಿಂದ ಮನುಕುಲಕ್ಕೆಒಳಿತಾಗಿದೆ. ಧರ್ಮ, ಸಂಸ್ಕಾರ ಮತ್ತು ಸಂಸ್ಕೃತಿಯೊಂದಿಗೆ ಮಾನವೀಯತೆ ಪ್ರತಿಪಾದಿಸುವ ಧರ್ಮ ಬಸವ ಧರ್ಮವಾಗಿದೆ ಎಂದು ಭೈರನಹಟ್ಟಿ ದೊರೆಸ್ವಾಮಿ ವಿರಕ್ತಮಠ, ಶಿರೋಳದ ತೋಂಟದಾರ್ಯ ಮಠದ ಶಾಂತಲಿಂಗ ಸ್ವಾಮಿಗಳು ಹೇಳಿದರು.

ಅವರು ಒಕ್ಕಲಗೇರಿಯ ಶಿವಕುಮಾರ ಎಚ್. ಪಾಟೀಲ ಕಟ್ಟಡದಲ್ಲಿ ಬಸವದಳ, ಬಸವ ಕೇಂದ್ರ, ಲಿಂಗಾಯತ ಪ್ರಗತಿಶೀಲ ಸಂಘದ ಆಶ್ರಯದಲ್ಲಿ ಶ್ರಾವಣ ಮಾಸದ ಅಂಗವಾಗಿ ನಡೆದ ವಚನ ಚಿಂತನ ಕಾರ್ಯಕ್ರಮದ ಸಾನ್ನಿಧ್ಯ ವಹಿಸಿ ಮಾತನಾಡಿದರು.

ಶರಣರ ವಚನಗಳು ಆದರ್ಶಮಯ ಬದುಕಿಗೆ ಬೆಳಕಾಗಿವೆ, ಎಲ್ಲರನ್ನೂ ಸನ್ಮಾರ್ಗದೆಡೆ ಮುನ್ನಡೆಸುವ ವಚನ ಸಾಹಿತ್ಯವನ್ನು ನಾವಿಂದು ಓದಬೇಕು, ಅರಿತುಕೊಳ್ಳಬೇಕು ಅದರಂತೆ ನಡೆದುಕೊಳ್ಳಬೇಕು ಅಂದಾಗ ಜೀವನ ಪಾವನಗೊಳ್ಳುವದು ಎಂದರು.

ಈ ವೇಳೆ ಶರಣ ಅಲ್ಲಮಪ್ರಭು ದೇವರ ವಚನ ಚಿಂತನೆ ಮಂಗಳಾ ಕಾಮಣ್ಣವರ ಮಾಡಿದರು. ಎಸ್.ಪಿ.ಹೊಂಬಳ ಸಂಗೀತ ನೀಡಿದರು. ಬಸವ ದಳದ ಅಧ್ಯಕ್ಷ ವಿ.ಕೆ. ಕರಿಗೌಡ್ರ ಮಾತನಾಡಿದರು. ಭಾರತಿ ಶಿವಕುಮಾರ ಪಾಟೀಲ ದಂಪತಿಗಳನ್ನು ಹಾಗೂ ವಚನ ಚಿಂತನೆಗೈದ ಮಂಗಳಾ ಕಾಮಣ್ಣವರ ಅವರನ್ನು ಪೂಜ್ಯರು ಸನ್ಮಾನಿಸಿದರು.

ಕಾರ್ಯಕ್ರಮದಲ್ಲಿ ಬಸವದಳ, ಬಸವಕೇಂದ್ರ, ಲಿಂಗಾಯತ ಪ್ರಗತಿಶೀಲ ಸಂಘದ ಪದಾಧಿಕಾರಿಗಳು, ಬಸವಾಭಿಮಾನಿಗಳು, ಒಕ್ಕಲಗೇರಿಯ ಗುರುಹಿರಿಯರು ಇದ್ದರು. ಶಿವಕುಮಾರ ಪಾಟೀಲ ಸ್ವಾಗತಿಸಿದರು, ಕಿರಣ ತಿಪ್ಪಣ್ಣವರ ನಿರೂಪಿಸಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಬ್ಯಾಲೆಟ್‌ ಪೇಪರಲ್ಲೇ ಪಂಚಾಯ್ತಿ ಚುನಾವಣೆಗೆ ಸರ್ಕಾರ ಮಸೂದೆ
ಅಕ್ರಮ ಬಾಂಗ್ಲಾದೇಶಿಯರ ಪತ್ತೆಗೆ ರಾಜ್ಯಾದ್ಯಂತ ಬೇಟೆ