ಕನ್ನಡಪ್ರಭ ವಾರ್ತೆ ಕುಶಾಲನಗರ
ಕುಶಾಲನಗರದಲ್ಲಿ ಶ್ರೀ ವಾಸವಿ ಕನ್ನಿಕಾ ಪರಮೇಶ್ವರಿ ದೇವಾಲಯ ಆಶ್ರಯದಲ್ಲಿ ನಡೆದ ಶತ ಚಂಡಿಕಾಯಾಗ ಕಾರ್ಯದಲ್ಲಿ ಪಾಲ್ಗೊಂಡ ಶ್ರೀಗಳು ಮಾತನಾಡಿದರು.
ದಾನದಿಂದ ತೃಪ್ತಿ, ಮೋಕ್ಷ ಲಭಿಸುತ್ತದೆ ಎಂದ ಶ್ರೀಗಳು ಭಕ್ತಾದಿಗಳಿಗೆ ಮಂತ್ರಾಕ್ಷತೆ ನೀಡುವ ಮೂಲಕ ಶುಭ ಕೋರಿದರು.ಕುಶಾಲನಗರ ವಾಸವಿ ಕನ್ನಿಕಾ ಪರಮೇಶ್ವರಿ ಟ್ರಸ್ಟ್, ಆರ್ಯ ವೈಶ್ಯ ಮಂಡಳಿ ಆರ್ಯ ವೈಶ್ಯ ಮಹಿಳಾ ಮಂಡಳಿ, ವಾಸವಿ ಯುವಜನ ಸಂಘ, ಯುವತಿಯರ ಸಂಘ, ಬಾಲಕಿಯರ ಮಂಡಳಿ ಮತ್ತು ಕನ್ನಿಕಾ ವಿವಿಧೋದ್ದೇಶ ಸಹಕಾರಿ ಸಂಘ ಆಶ್ರಯದಲ್ಲಿ ನಡೆದ ಐದು ದಿನಗಳ ವಿಶೇಷ ಪೂಜಾ ಕಾರ್ಯಕ್ರಮಗಳು ಮತ್ತು ವೇದಿಕೆ ಕಾರ್ಯಕ್ರಮಗಳ ಮೂಲಕ ಭಾನುವಾರ ಯಾಗ ಕಾರ್ಯಕ್ರಮ ಮಹಾಪೂರ್ಣಾಹುತಿಯೊಂದಿಗೆ ಸಂಪನ್ನವಾಯಿತು.
ಭಾನುವಾರ ಸಂಜೆ ಕೇರಳದ ಪ್ರಸಿದ್ಧ ಚೆಂಡೆ ವಾದಕರಾದ ಚೇರುದಾರನ್ ಚಂದ್ರನ್ ಮಾರಾರ್ ಸಂಗಡಿಗರಿಂದ ಚೆಂಡೆ ಸೇವೆ ಮತ್ತು ನರ್ತನ ಸೇವೆ ನಡೆಯಿತು.
ದೇವಾಲಯದ ಪ್ರಧಾನ ಅರ್ಚಕರಾದ ಗಿರೀಶ್ ಭಟ್, ಯೋಗೇಶ್ ಭಟ್, ರಾಘವೇಂದ್ರ ಭಟ್ ನೇತೃತ್ವದಲ್ಲಿ ನಡೆದ ಎಲ್ಲ ಧಾರ್ಮಿಕ ಕಾರ್ಯಕ್ರಮದಲ್ಲಿ ಶೃಂಗೇರಿ, ದಕ್ಷಿಣ ಕನ್ನಡ ವ್ಯಾಪ್ತಿಯಿಂದ ಆಗಮಿಸಿದ 30ಕ್ಕೂ ಅಧಿಕ ಋತ್ವಿಜರು ಯಾಗ ಕಾರ್ಯಕ್ರಮದಲ್ಲಿ ಐದು ದಿನಗಳ ಕಾಲ ತೊಡಗಿಸಿಕೊಂಡಿದ್ದರು.ಆರ್ಯವೈಶ್ಯ ಮಂಡಳಿ ವಾಸವಿ ಯುವಜನ ಸಂಘ ಮತ್ತು ಸಮುದಾಯದ ಸಂಘಟನೆಗಳ ಪ್ರಮುಖರಾದ ಬಿ ಆರ್ ನಾಗೇಂದ್ರ ಪ್ರಸಾದ್, ಬಿ ಎಲ್ ಸತ್ಯನಾರಾಯಣ, ಬಿ ಎಲ್ ಉದಯಕುಮಾರ್, ಲಕ್ಷ್ಮಿ ಶ್ರೀನಿವಾಸ್, ಪ್ರವೀಣ್, ಕವಿತಾ ಪ್ರವೀಣ್, ಅಮೃತರಾಜ್, ಸ್ಪೂರ್ತಿ ಮತ್ತು ಪದಾಧಿಕಾರಿಗಳು, ಸಮುದಾಯ ಬಾಂಧವರು ಭಕ್ತಾದಿಗಳು ಪಾಲ್ಗೊಂಡಿದ್ದರು.