ಯುವ ಸಂಭ್ರಮ: ಮೊಳಗಿದ ದೇಶಪ್ರೇಮ

KannadaprabhaNewsNetwork |  
Published : Sep 16, 2025, 01:00 AM IST
14 | Kannada Prabha

ಸಾರಾಂಶ

ನೃತ್ಯ ಪ್ರಕಾರ, ಸಾಂಸ್ಕೃತಿಕ ಪರಂಪರೆ, ದೇಶಭಕ್ತಿ, ಅಂಬಾರಿ ಆನೆ ಕೃಷ್ಣ, ದಸರಾ ವೈಭವ, ಆರೋಗ್ಯಕ್ಕೆ ಸಂಬಂಧಿಸಿದ, ಜನಕೇಂದ್ರಿತ, ಪರಿಸರ ಸಂರಕ್ಷಣೆಯಲ್ಲಿ ಯುವ ಜನತೆಯ ಪಾತ್ರ, ಫ್ಯೂಜನ್, ಪೌರಾಣಿಕ, ಭಾರತೀಯ ಯೋಧರ ಪಾತ್ರ,

ಕನ್ನಡಪ್ರಭ ವಾರ್ತೆ ಮೈಸೂರುಮಾನಸಗಂಗೋತ್ರಿಯ ಬಯಲು ರಂಗಮಂದಿರದಲ್ಲಿ ನಡೆಯುತ್ತಿರುವ ‘ಯುವಸಂಭ್ರಮ’ದಲ್ಲಿ ಸೋಮವಾರದ ನೃತ್ಯರೂಪಕಗಳು ಯುವ ಸಮೂಹದಲ್ಲಿ ದೇಶಪ್ರೇಮದ ಕಿಚ್ಚನ್ನು ಮೂಡಿಸಿದವು.ದೇಶಭಕ್ತಿ, ರಾಷ್ಟ್ರೀಯತೆ, ಮಹಿಳಾ ಸಬಲೀಕರಣ, ಜೈ ಜವಾನ್‌– ಜೈ ಕಿಸಾನ್, ಜಾನಪದ, ಆಪರೇಷನ್ ಸಿಂಧೂರ್, ಕನ್ನಡ ನಾಡು ನುಡಿ ಸೇರಿದಂತೆ ವಿವಿಧ ವಿಷಯಗಳ ಮೇಲೆ ವಿದ್ಯಾರ್ಥಿಗಳು ಪ್ರಸ್ತುಪಡಿಸಿದ ರೂಪಕಗಳು ಪ್ರೇಕ್ಷಕ ಸಮೂಹದಲ್ಲಿ ಸಂಚನ ಮೂಡಿಸಿದವು.ಮೈಸೂರು ಸಾತಗಳ್ಳಿ ವಿಶ್ವ ಭಾರತಿ ಕಾಲೇಜಿನಿಂದ ದಸರಾ ವೈಭವ, ಮೈಸೂರು ಎಚ್‌.ಡಿ. ಕೋಟೆ, ಶ್ರೀ ಆದಿಚುಂಚನಗಿರಿ ಪ್ರಥಮ ದರ್ಜೆ ಕಾಲೇಜ್ ಸಾಮಾಜಿಕ ನ್ಯಾಯ, ಮೈಸೂರು ಬಿಳಿಕೆರೆ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ರೈತರು/ ಕೃಷಿ ಚಟುವಟಿಕೆ, ಚಾಮರಾಜನಗರ ಗುಂಡ್ಲುಪೇಟೆ ಬಾಬು ಸರ್ಕಾರಿ ಪದವಿ ಪೂರ್ವ ಕಾಲೇಜು ತೆರಕಣಾಂಬಿ ಕಾಲೇಜಿನ ವಿದ್ಯಾರ್ಥಿಗಳು ಸುದ್ದಿ ಮತ್ತು ಆಹಾರ ಧಾನ್ಯಗಳು, ಬೆಂಗಳೂರು ಹನುಮಂತನಗರ ನಗರ ಶ್ರೀ ಬಾಲಾಜಿ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳು ದೇಶದ ಸ್ವಾತಂತ್ರ್ಯದಲ್ಲಿ ಗಾಂಧೀಜಿಯವರ ಪಾತ್ರ, ಎಂಬ ನೃತ್ಯ ಪ್ರದರ್ಶನ ಮಾಡಿದರು.ಇಂದು ನಡೆದ ಕಾರ್ಯಕ್ರಮದಲ್ಲಿ 58 ನೃತ್ಯ ‌ಪ್ರದರ್ಶನವನ್ನು ವಿದ್ಯಾರ್ಥಿಗಳು ಪ್ರಸ್ತುತಪಡಿಸಿದರು.ನೃತ್ಯ ಪ್ರಕಾರ, ಸಾಂಸ್ಕೃತಿಕ ಪರಂಪರೆ, ದೇಶಭಕ್ತಿ, ಅಂಬಾರಿ ಆನೆ ಕೃಷ್ಣ, ದಸರಾ ವೈಭವ, ಆರೋಗ್ಯಕ್ಕೆ ಸಂಬಂಧಿಸಿದ, ಜನಕೇಂದ್ರಿತ, ಪರಿಸರ ಸಂರಕ್ಷಣೆಯಲ್ಲಿ ಯುವ ಜನತೆಯ ಪಾತ್ರ, ಫ್ಯೂಜನ್, ಪೌರಾಣಿಕ, ಭಾರತೀಯ ಯೋಧರ ಪಾತ್ರ, ಕೊಡವ ನೃತ್ಯ, ಕರ್ನಾಟಕ ಜಾನಪದ ಹೀಗೆ ನಾನಾ ರೀತಿಯಿಂದ ಹಲವಾರು ಕಾಲೇಜು ವಿದ್ಯಾರ್ಥಿಗಳಿಂದ ನೃತ್ಯ ಪ್ರದರ್ಶನದಿಂದ ಯುವಕರನ್ನು ರಂಜಿಸಿತು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಬಿಜೆಪಿ ರಾಜ್ಯಗಳಲ್ಲಿ ಯಾಕೆ ನೌಕರಿ ಸೃಷ್ಟಿ ಆಗಿಲ್ಲ : ಸಿದ್ದರಾಮಯ್ಯ
ಹತ್ಯೆ ಕೇಸಲ್ಲಿ ಬೈರತಿಗೆ ಸದ್ಯಕ್ಕಿಲ್ಲ ಬಂಧನ ಭೀತಿ