ಕರಾವಳಿ ಕೇಸರಿ ಕೋಟೆ ಛಿದ್ರ ಅಸಾಧ್ಯ: ಡಾ. ಭರತ್ ಶೆಟ್ಟಿ

KannadaprabhaNewsNetwork |  
Published : Sep 17, 2026, 02:30 AM IST
ಶಾಸಕ ಡಾ.ಭರತ್‌ ಶೆಟ್ಟಿ  | Kannada Prabha

ಸಾರಾಂಶ

ಕರಾವಳಿಯಲ್ಲಿ ಎಷ್ಟೇ ಅಭಿವೃದ್ಧಿ ಯೋಜನೆ, ಹೊಸ ಐಡಿಯಾಗಳನ್ನು ಘೋಷಿಸಿದರೂ ಇಲ್ಲಿನ ಜನರು ರಾಷ್ಟ್ರೀಯತೆಯ ಚಿಂತನೆಗೆ ಮತ ನೀಡುತ್ತಾರೆ. ಕರಾವಳಿಯಲ್ಲಿ ಬಿಜೆಪಿ ಭದ್ರಕೋಟೆಯನ್ನು ಒಡೆಯುವುದು ಯಾರಿಗಾದರೂ ಕನಸಾಗಿಯೇ ಉಳಿಯಲಿದೆ ಎಂದು ಮಂಗಳೂರು ಉತ್ತರ ಶಾಸಕ ಡಾ.ಭರತ್ ಶೆಟ್ಟಿ ಹೇಳಿದರು.

ಮಂಗಳೂರು ; ಕರಾವಳಿಯಲ್ಲಿ ಎಷ್ಟೇ ಅಭಿವೃದ್ಧಿ ಯೋಜನೆ, ಹೊಸ ಐಡಿಯಾಗಳನ್ನು ಘೋಷಿಸಿದರೂ ಇಲ್ಲಿನ ಜನರು ರಾಷ್ಟ್ರೀಯತೆಯ ಚಿಂತನೆಗೆ ಮತ ನೀಡುತ್ತಾರೆ. ಕರಾವಳಿಯಲ್ಲಿ ಬಿಜೆಪಿ ಭದ್ರಕೋಟೆಯನ್ನು ಒಡೆಯುವುದು ಯಾರಿಗಾದರೂ ಕನಸಾಗಿಯೇ ಉಳಿಯಲಿದೆ ಎಂದು ಮಂಗಳೂರು ಉತ್ತರ ಶಾಸಕ ಡಾ.ಭರತ್ ಶೆಟ್ಟಿ ಹೇಳಿದರು.

ಹಿಂದೂಗಳ ಮೇಲೆ ಅನ್ಯಾಯವಾದರೂ ಇಲ್ಲಿನ ಜನರಿಗೆ ಅದರ ಅರಿವಿದೆ. ಬಿಜೆಪಿ ತತ್ವ-ಸಿದ್ಧಾಂತವನ್ನು ಒಪ್ಪಿಕೊಂಡಿರುವ ಕಾರಣದಿಂದ ಜನರು ಪಕ್ಷವನ್ನು ಬೆಂಬಲಿಸುತ್ತಿದ್ದಾರೆ ಎಂದರು.ಇದು ಸಾಫ್ಟ್ ಹಿಂದುತ್ವವಲ್ಲ. ‘ವಂದೇ ಮಾತರಂ’ ವಿಚಾರದಲ್ಲೇ ಕಾಂಗ್ರೆಸ್‌ನ ನಿಲುವು ಏನೆಂಬುದು ಗೊತ್ತಾಗಿದೆ ಎಂದು ಟೀಕಿಸಿದರು. ಮುಸ್ಲಿಂ ಮತಗಳ ತುಷ್ಟೀಕರಣ ಹಾಗೂ ಅವರನ್ನು ಖುಷಿಪಡಿಸುವ ರಾಜಕಾರಣ ನಡೆಯುತ್ತಿದೆ ಎಂದು ಅವರು ಆರೋಪಿಸಿದರು.ಮಂಗಳೂರಿನ ಸಾಂಸ್ಕೃತಿಕ ನೆಲೆ ಮತ್ತು ಅಸ್ಮಿತೆಯನ್ನು ಉಳಿಸಿಕೊಂಡೇ ಪ್ರವಾಸೋದ್ಯಮ ಅಭಿವೃದ್ಧಿ ಮಾಡಬೇಕು. ಮಂಗಳೂರನ್ನು ಕೇರಳ ಅಥವಾ ಗೋವಾ ಮಾದರಿಯಲ್ಲಿ ಬದಲಾಯಿಸದೆ, ಮಂಗಳೂರು ಆಗಿಯೇ ಉಳಿಸಿಕೊಂಡು ಅಭಿವೃದ್ಧಿಪಡಿಸಬೇಕು ಎಂದು ಶಾಸಕ ಡಾ. ಭರತ್ ಶೆಟ್ಟಿ ಹೇಳಿದರು.

ಪ್ರವಾಸೋದ್ಯಮ ಕ್ಷೇತ್ರದಲ್ಲಿ ಮಂಗಳೂರಿಗೆ ತನ್ನದೇ ಆದ ಗೌರವವಿದೆ. ಇಲ್ಲಿ ದೇವಸ್ಥಾನ ಪ್ರವಾಸೋದ್ಯಮ ಹಾಗೂ ಪರಿಸರ ಪ್ರವಾಸೋದ್ಯಮಕ್ಕೆ ಸಾಕಷ್ಟು ಅವಕಾಶಗಳಿವೆ. ಪ್ರವಾಸೋದ್ಯಮ ಅಭಿವೃದ್ಧಿ ಹೆಸರಿನಲ್ಲಿ ಡ್ರಗ್ಸ್, ಜೂಜು ಸೇರಿದಂತೆ ಸ್ಥಳೀಯರಿಗೆ ಮತ್ತು ವಿದ್ಯಾರ್ಥಿಗಳಿಗೆ ತೊಂದರೆ ಉಂಟುಮಾಡುವ ಚಟುವಟಿಕೆಗಳಿಗೆ ಅವಕಾಶ ನೀಡಬಾರದು ಎಂದರು.

ಕ್ಯಾಸಿನೋ ಬಂದರೆ ಡ್ರಗ್ಸ್‌ಗೂ ಅವಕಾಶ ಸಿಗುವ ಸಾಧ್ಯತೆ ಇದ್ದು, ಸ್ಥಳೀಯರು ಹಾಗೂ ವಿದ್ಯಾರ್ಥಿಗಳಿಗೆ ತೊಂದರೆಯಾಗಬಾರದು ಎಂದು ಅವರು ಹೇಳಿದರು.

ಮಂಗಳೂರಿನಲ್ಲಿ ನಡೆಯಲಿರುವ ಸಚಿವ ಸಂಪುಟ ಸಭೆಯನ್ನು ಸ್ವಾಗತಿಸುತ್ತೇವೆ. ಕರಾವಳಿಯ ಸಮಗ್ರ ಅಭಿವೃದ್ಧಿಗೆ ಸಂಬಂಧಿಸಿದ ಘೋಷಣೆಗಳು ಹೊರಬರಬೇಕು. ಆದರೆ ಅವು ಕೇವಲ ಘೋಷಣೆಯಾಗಿ ಉಳಿಯದೆ, ಅನುಷ್ಠಾನಕ್ಕೆ ಬರಬೇಕು ಎಂದು ಡಾ. ಭರತ್ ಶೆಟ್ಟಿ ಹೇಳಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಮೋಲ್ಡ್ ಕ್ಲೇ ಮೂಲಕ ೧೦೦೮ ಗಣಪತಿ ಪ್ರತಿಮೆ ರಚನೆ: ಪ್ರವೀಣ್‌ ದಾಖಲೆ
ನಿಟ್ಟೆ ಜವಳಿ ಪಾರ್ಕ್ ಕಾಮಗಾರಿ ಕೂಡಲೇ ಆರಂಭಿಸಿ: ನೇಮಿರಾಜ ರೈ