- ಮೂರು ಸದಸ್ಯರನ್ನು ಹೊಂದಿದ ಜೆಡಿಎಸ್ ಗೆ ಒಲಿದ ಭಾಗ್ಯ । ಕಣಕ್ಕಿಳಿಯದ ಕಾಂಗ್ರೆಸ್,
ಸುಜಾತಾ ಶಿವಕುಮಾರ್ ರಾಜಿನಾಮೆಯಿಂದ ತೆರವಾಗಿದ್ದ ನಗರಸಭಾಧ್ಯಕ್ಷ ಸ್ಥಾನಕ್ಕೆ ಶನಿವಾರ ನಡೆದ ಚುನಾವಣೆಯಲ್ಲಿ ಜೆಡಿಎಸ್ನ ಶೀಲಾ ದಿನೇಶ್ ಅವಿರೋಧ ಆಯ್ಕೆಯಾಗಿದ್ದಾರೆ.
ನಗರ ಸಭಾಧ್ಯಕ್ಷ ಸ್ಥಾನದ ಚುನಾವಣೆ ಹಿನ್ನೆಲೆಯಲ್ಲಿ ಬೆಳಗ್ಗೆ ಅಭ್ಯರ್ಥಿಗಳ ನಾಮಪತ್ರ ಸಲ್ಲಿಕೆಗೆ ಅವಕಾಶ ನೀಡಲಾಗಿತ್ತು. ಬಿಜೆಪಿ ಹಾಗೂ ಜೆಡಿಎಸ್ ಮೈತ್ರಿಕೂಟದ ಅಭ್ಯರ್ಥಿಯಾಗಿ ಶೀಲಾ ದಿನೇಶ್ ನಾಮಪತ್ರ ಸಲ್ಲಿಕೆ ಮಾಡಿದ್ದರು. ಕಾಂಗ್ರೆಸ್ ನಿಂದ ಯಾರು ನಾಮಪತ್ರ ಸಲ್ಲಿಕೆ ಮಾಡಲಿಲ್ಲ. ಈ ಹಿನ್ನೆಲೆಯಲ್ಲಿ ನಾಮಪತ್ರ ಪರಿಶೀಲನೆ ಮಾಡಿ ಅದು ಸಿಂಧುವಾದ ಹಿನ್ನೆಲೆಯಲ್ಲಿ ಚುನಾವಣಾಧಿಕಾರಿಯೂ ಆಗಿದ್ದ ಉಪ ವಿಭಾಗಾಧಿಕಾರಿ ಸುದರ್ಶನ್ ಅವಿರೋಧ ಆಯ್ಕೆ ಘೋಷಣೆ ಮಾಡಿದರು.ಒಟ್ಟು 35 ಸದಸ್ಯ ಬಲದ ನಗರಸಭೆಯಲ್ಲಿ ಬಿಜೆಪಿ 18 ಸದಸ್ಯರಿದ್ದಾರೆ. ಜೆಡಿಎಸ್ ನ ಇಬ್ಬರು ಹಾಗೂ ಓರ್ವ ಜೆಡಿಎಸ್ ಬೆಂಬಲಿತ ಸದಸ್ಯೆ, 12 ಕಾಂಗ್ರೆಸ್ ಸದಸ್ಯರು, ಓರ್ವ ಎಸ್ಡಿಪಿಐ, ಓರ್ವ ಪಕ್ಷೇತರ ಸದಸ್ಯರು ನಗರಸಭೆಗೆ ಆಯ್ಕೆ ಯಾಗಿದ್ದರು.
ನೂತನ ಅಧ್ಯಕ್ಷರನ್ನು ಅಭಿನಂದಿಸಿ ಮಾತನಾಡಿದ ವಿಧಾನ ಪರಿಷತ್ ಸದಸ್ಯ ಎಸ್.ಎಲ್. ಭೋಜೇಗೌಡ, ಶೀಲಾ ದಿನೇಶ್ ಅವರ ಅವಿರೋಧ ಆಯ್ಕೆಗೆ ಸಹಕರಿಸಿದ ಬಿಜೆಪಿ ಮುಖಂಡರು ಅದರಲ್ಲಿಯೂ ಸಿ.ಟಿ.ರವಿ ಅವರಿಗೆ ಅಭಿನಂದನೆ ಸಲ್ಲಿಸು ತ್ತೇನೆ. ಕಾಂಗ್ರೆಸ್ ಅಭ್ಯರ್ಥಿಯನ್ನು ಕಣಕ್ಕಿಳಿಸದೆ ಅವಿರೋಧ ಆಯ್ಕೆಗೆ ಸಹಕಾರ ನೀಡಿದ ಶಾಸಕ ಎಚ್.ಡಿ. ತಮ್ಮಯ್ಯ ಅವರ ಸಹಕಾರವನ್ನು ಮರೆಯುವಂತಿಲ್ಲ ಎಂದರು.
ಶಾಸಕ ಎಚ್.ಡಿ.ತಮ್ಮಯ್ಯ ಮಾತನಾಡಿ, ನಗರಸಭಾ ವ್ಯಾಪ್ತಿಯ ಅಭಿವೃದ್ಧಿ ದೃಷ್ಟಿಯಿಂದ ನೂತನ ಅಧ್ಯಕ್ಷರ ಅವಿರೋಧ ಆಯ್ಕೆ ಮಾಡಲಾಗಿದೆ. ಶೀಲಾ ದಿನೇಶ್ ಅವರು ಪಕ್ಷೇತರರಾಗಿ ಗೆದ್ದಿದ್ದರಿಂದ ನಗರಸಭೆ ಅಧ್ಯಕ್ಷ ಚುನಾವಣೆ ವೇಳೆ ಕಾಂಗ್ರೆಸ್ ಅಭ್ಯರ್ಥಿ ಕಣಕ್ಕಿಳಿಸಲಿಲ್ಲ. ನೂತನ ಅಧ್ಯಕ್ಷರು ಅವಿರೋಧವಾಗಿ ಆಯ್ಕೆಯಾಗಲು ಶ್ರಮಿಸಿದ 40 ಜನ ಸದಸ್ಯರಿಗೂ ಕೃತಜ್ಞತೆ ಸಲ್ಲಿಸುವುದಾಗಿ ತಿಳಿಸಿದರು.
ಈ ಸಂದರ್ಭದಲ್ಲಿ ನಗರಸಭೆ ಉಪಾಧ್ಯಕ್ಷೆ ಅನು ಮಧುಕರ್, ಸದಸ್ಯರಾದ ಟಿ.ರಾಜಶೇಖರ್, ಎ.ಸಿ.ಕುಮಾರ್ ಗೌಡ, ಮಧುಕುಮಾರ್ ರಾಜ್ ಅರಸ್, ಸಿ.ಎನ್.ಅಕ್ಮಲ್, ಶಾದಬ್ ಇದ್ದರು.ಪೋಟೋ ಫೈಲ್ ನೇಮ್ 5 ಕೆಸಿಕೆಎಂ 2ಚಿಕ್ಕಮಗಳೂರು ನಗರಸಭೆಯ ನೂತನ ಅಧ್ಯಕ್ಷರಾಗಿ ಅವಿರೋಧವಾಗಿ ಆಯ್ಕೆಯಾದ ಶೀಲಾ ದಿನೇಶ್ ಅವರಿಗೆ ಶಾಸಕ ಎಚ್.ಡಿ. ತಮ್ಮಯ್ಯ, ವಿಧಾನಪರಿಷತ್ ಸದಸ್ಯರಾದ ಎಸ್.ಎಲ್. ಭೋಜೇಗೌಡ, ಸಿ.ಟಿ. ರವಿ ಅವರು ಅಭಿನಂದನೆ ಸಲ್ಲಿಸಿದರು.