ಚಾಯ್ ಪೇ ಚರ್ಚಾ ಮೂಲಕ ಶೆಟ್ಟರ್‌ ಮತಬೇಟೆ

KannadaprabhaNewsNetwork |  
Published : Apr 20, 2024, 01:00 AM IST
ಬೆಳಗಾವಿ ಬಸವ ಕಾಲೋನಿಯಲ್ಲಿ ಬಿಜೆಪಿ ಅಭ್ಯರ್ಥಿ ಜಗದೀಶ ಶೆಟ್ಟರ್‌ ಚಾಯ್‌ ಪೇ ಚರ್ಚಾ ಮೂಲಕ ಮತಯಾಚನೆ ಮಾಡಿದರು | Kannada Prabha

ಸಾರಾಂಶ

ಬೆಳಗಾವಿ ಲೋಕಸಭೆ ಬಿಜೆಪಿ ಅಭ್ಯರ್ಥಿ ಜಗದೀಶ ಶೆಟ್ಟರ್ ಶುಕ್ರವಾರ ಬೆಳ್ಳಂಬೆಳಗ್ಗೆ ಬಸವ ಕಾಲೋನಿಯಲ್ಲಿ ಚಾಯ್ ಪೇ ಚರ್ಚಾ ಕಾರ್ಯಕ್ರಮದ ಮೂಲಕ ಸಾರ್ವಜನಿಕರನ್ನು ಭೇಟಿ ಮಾಡಿ, ಮತಯಾಚನೆ ನಡೆಸಿದರು.

ಕನ್ನಡಪ್ರಭ ವಾರ್ತೆ ಬೆಳಗಾವಿಬೆಳಗಾವಿ ಲೋಕಸಭೆ ಬಿಜೆಪಿ ಅಭ್ಯರ್ಥಿ ಜಗದೀಶ ಶೆಟ್ಟರ್ ಶುಕ್ರವಾರ ಬೆಳ್ಳಂಬೆಳಗ್ಗೆ ಬಸವ ಕಾಲೋನಿಯಲ್ಲಿ ಚಾಯ್ ಪೇ ಚರ್ಚಾ ಕಾರ್ಯಕ್ರಮದ ಮೂಲಕ ಸಾರ್ವಜನಿಕರನ್ನು ಭೇಟಿ ಮಾಡಿ, ಮತಯಾಚನೆ ನಡೆಸಿದರು.

ಪ್ರಚಾರದ ವೇಳೆ ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ವಿಕಸಿತ ಭಾರತದತ್ತ ದೇಶ ದಾಪುಗಾಲು ಹಾಕುತ್ತಿದೆ. ಮೋದಿಯವರು ಪ್ರಧಾನಿಯಾದ ಮೇಲೆ ಎಲ್ಲಾ ಕ್ಷೇತ್ರದಲ್ಲಿ ಅಭಿವೃದ್ಧಿ ಹೊಂದಿದೆ. ದೇಶವನ್ನು ಇನ್ನಷ್ಟು ಅಭಿವೃದ್ಧಿ ಮಾಡಲು ಮೂರನೇ ಬಾರಿಗೆ ಮೋದಿಯವರನ್ನು ಪ್ರಧಾನಿ ಮಾಡಬೇಕು.‌ ಬಿಜೆಪಿಗೆ ಮತ ನೀಡಿ ಗೆಲ್ಲಿಸಬೇಕು ಎಂದು ಮನವಿ ಮಾಡಿದರು.

ಈ ಸಂದರ್ಭದಲ್ಲಿ ಬಸವ ಕಾಲೋನಿಯ ಪ್ರಮುಖರಾದ ಡಾ. ರವಿ ಪಾಟೀಲ್, ಕೆ.ಐ. ಗಾಣಗೇರ, ಎಸ್.ಆರ್. ಪಾಟೀಲ, ಮೋಹನ ಹೂಗಾರ, ಬಸಪ್ಪ ಚಿಕಲದಿನ್ನಿ, ಪ್ರಕಾಶ ಕೋತ, ಪ್ರಮೋದ ಕೋತ, ಬಿ.ಎಂ. ಮುಗದುಮ್, ಚೇತನ ಬಡಿಗೇರ, ಆದರ್ಶ ಪೈಲ್ವಾನ್, ಸುರೇಶ ಬಂಡೆಪ್ಪನವರ, ರಮೇಶ ಪಾಟೀಲ್ ಹಾಗೂ ಇತರರು ಉಪಸ್ಥಿತರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಮಾನಸಿಕ ಖಿನ್ನತೆ ಸ್ವಯಂ ಮೌಲ್ಯಮಾಪನಕ್ಕೆ ನಿಮ್ಹಾನ್ಸ್‌ ಆ್ಯಪ್‌
ಒಂದೇ ದಿನ ಜಡ್ಜ್‌ ಮುಂದೆ 60 ಪರೋಲ್‌ ಅರ್ಜಿ!