ಏ.26ರಂದು ಶಿಬರೂರು ಬ್ರಹ್ಮಕಲಶೋತ್ಸವ; ನಟಿ ಶಿಲ್ಪಾ ಶೆಟ್ಟಿಯಿಂದ ಬೆಳ್ಳಿಕಲಶ ಸಮರ್ಪಣೆ

KannadaprabhaNewsNetwork |  
Published : Mar 27, 2024, 01:04 AM IST
ಶಿಬರೂರು ಬ್ರಹ್ಮಕಲಶೋತ್ಸವ ಮತ್ತು ನಾಗಮಂಡಲ ಪೂರ್ವಭಾವಿ ಸಭೆ | Kannada Prabha

ಸಾರಾಂಶ

ಬಾಲಿವುಡ್‌ ನಟಿ ಶಿಲ್ಪಾ ಶೆಟ್ಟಿ ಉತ್ಸವದ ಪ್ರಧಾನ ಬೆಳ್ಳಿಯ ಕಲಶವನ್ನು ಈಗಾಗಲೇ ನೀಡಿದ್ದು ಪ್ರಮುಖ ಮೂರು ದಿನಗಳಲ್ಲಿ ಇಲ್ಲಿನ ಕಾರ್ಯಕ್ರಮದಲ್ಲಿ ಅವರು ಭಾಗವಹಿಸಲಿದ್ದಾರೆ.

ಕನ್ನಡಪ್ರಭ ವಾರ್ತೆ ಮೂಲ್ಕಿ

ಶಿಬರೂರುನಲ್ಲಿ ನಡೆಯುವ ಮೂರನೇ ಬ್ರಹ್ಮ‌ಕಲಶೋತ್ಸವ ಊರ ಪರವೂರ ಗ್ರಾಮಸ್ಥರ ಸಹಕಾರದಿಂದ ಏಪ್ರಿಲ್‌ನಲ್ಲಿ ವಿಜೃಂಭಣೆಯಿಂದ ನಡೆಯಲಿದೆ ಎಂದು ಶಿಬರೂರುಗುತ್ತು ಗುತ್ತಿನಾರ್ ಉಮೇಶ್ ಎನ್. ಶೆಟ್ಟಿ ಹೇಳಿದರು.

ಶಿಬರೂರು ಶ್ರೀ ಉಳ್ಳಾಯ ಮತ್ತು ಕೊಡಮಣಿತ್ತಾಯ ದೈವಸ್ಥಾನದಲ್ಲಿ ಏಪ್ರಿಲ್ 26ರಂದು ನಡೆಯಲಿರುವ ಬ್ರಹ್ಮಕಲಶೋತ್ಸವ ಮತ್ತು ನಾಗಮಂಡಲದ ಪೂರ್ವಭಾವಿಯಾಗಿ ಶಿಬರೂರು ದೈವಸ್ಥಾನದಲ್ಲಿ ನಡೆದ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದರು.

ಜೀರ್ಣೋದ್ಧಾರ ಮತ್ತು ಬ್ರಹ್ಮಕಲಶೋತ್ಸವ ಸಮಿತಿಯ ಅಧ್ಯಕ್ಷ ಪ್ರಭಾಕರ ಎಸ್. ಶೆಟ್ಟಿ ಕೋಂಜಾಲಗುತ್ತು ಮಾತನಾಡಿ ಶಿಬರೂರು ಬ್ರಹ್ಮಕಲಶೋತ್ಸವಕ್ಕೆ ಮುಂಬೈ ಭಕ್ತರು ಕೈ ಜೋಡಿಸುತ್ತಿದ್ದು, ಉದ್ಯಮಿಗಳ ಸಹಕಾರ ಹರಿದು ಬರುತ್ತಿದೆ, ಕೊಡಮಣಿತ್ತಾಯನ ಶಕ್ತಿ ಏನೆಂಬುದು ಭಕ್ತರಿಗೆ ತಿಳಿದಿದೆ, ಕೊಡಮಣಿತ್ತಾಯನಿಗೆ ಈಗಾಗಲೇ ಚಿನ್ನದ ಪಲಕ್ಕಿ ಅರ್ಪಿಸುವ ನಿರ್ದಾರ ಮಾಡಿದ್ದು, ದಾನಿಗಳ ಸಹಕಾರದಿಂದ ಅದು ಕೂಡ ಪೂರ್ಣಗೊಳ್ಳಲಿದೆ ಎಂದರು.

ಸಮಿತಿಯ ಕಾರ್ಯಾಧ್ಯಕ್ಷ ಪ್ರದ್ಯುಮ್ನ ರಾವ್ ಕೈಯೂರುಗುತ್ತು ಮಾತನಾಡಿ, ಬಾಲಿವುಡ್‌ ನಟಿ ಶಿಲ್ಪಾ ಶೆಟ್ಟಿ ಉತ್ಸವದ ಪ್ರಧಾನ ಬೆಳ್ಳಿಯ ಕಲಶವನ್ನು ಈಗಾಗಲೇ ನೀಡಿದ್ದು ಪ್ರಮುಖ ಮೂರು ದಿನಗಳಲ್ಲಿ ಇಲ್ಲಿನ ಕಾರ್ಯಕ್ರಮದಲ್ಲಿ ಅವರು ಭಾಗವಹಿಸಲಿದ್ದಾರೆ. ಕೊಡಮಣಿತ್ತಾಯನ ಮೇಲಿನ ಭಕ್ತಿಯಿಂದ ಚಿನ್ನದ‌ ಪಲ್ಲಕಿಗಾಗಿ ಭಕ್ತರು ತಮ್ಮ ಒಡವೆಯನ್ನೇ ದಾನ ರೂಪವಾಗಿ ನೀಡುತ್ತಿದ್ದಾರೆ ಎಂದರು. ಈ ಸಂದರ್ಭ ತುಕರಾಮ ಶೆಟ್ಟಿ ಪರ್ಲಬೈಲ್ ಗುತ್ತು, ಶಿವಾನಂದ ಶೆಟ್ಟಿ ಪಡುಮನೆ, ಸೂರಿಂಜೆ ಪಂಚಾಯತ್ ಅಧ್ಯಕ್ಷೆ ಗೀತಾ ಶೆಟ್ಟಿ, ಮಧುಕರ ಅಮೀನ್ ಶಿಬರೂರು, ಪುರಂದರ ಎಂ ಶೆಟ್ಟಿ , ಸುಬ್ರಮಣ್ಯ ರಾವ್ ಕೋರ್ಯಾರು, ಕಾಂತಪ್ಪ ಸಾಲಿಯಾನ್, ದಿವಾಕರ ಸಾಮಾನಿ ಮತ್ತಿತರರು ಇದ್ದರು. ಸ್ವಾಗತ ಸಮಿತಿಯ ಜಿತೇಂದ್ರ ಶೆಟ್ಟಿ ಕೋರ್ಯಾರುಗುತ್ತು, ಸ್ವಯಂಸೇವಕ ಸಮಿತಿಯ ಗಿರೀಶ್ ಶೆಟ್ಟಿ ಪಡುಮನೆ, ಪ್ರಚಾರ ಮತ್ತು ಆಮಂತ್ರಣ ಸಮಿತಿಯ ವಿನೀತ್ ಶೆಟ್ಟಿ, ಮಾಧ್ಯಮ ಸಮಿತಿಯ ಬಾಳ ಜಗನ್ನಾಥ ಶೆಟ್ಟಿ, ಮಾತೃ ಸಮಿತಿಯ ಆಶಾ ಶೆಟ್ಟಿ, ಸಾಂಸ್ಕೃತಿಕ ಸಮಿತಿಯ ವಿಜೇಶ್ ಶೆಟ್ಟಿ, ಅನ್ನಸಂತರ್ಪಣೆ ಸಮಿತಿಯ ಜಗದೀಶ್ ಶೆಟ್ಟಿ, ಉಗ್ರಾಣ ಸಮಿತಿ ದಯಾನಂದ ದೇವಾಡಿಗ, ಹೊರೆಕಾಣಿಕೆ ಸಮಿತಿಯ ಬಾಲಕೃಷ್ಣ ಕುಲಾಲ್, ಆರೋಗ್ಯ ಮತ್ತು ನೈರ್ಮಲ್ಯ ಸಮಿತಿಯ ಸುಜಾತ ಶೆಟ್ಟಿ, ಪ್ರಸಾದ ವಿತರಣಾ ಸಮಿತಿಯ ಸುಧಾಕರ ಶೆಟ್ಟಿ ಶಿಬರೂರುಗುತ್ತು, ವಾಹನ‌ ಪಾರ್ಕಿಗ್ ಸಮಿತಿಯ ದಿನಕರ ಕೈಯೂರು, ಅಲಂಕಾರ ಸಮಿತಿಯ ಭುವನೇಶ್ ಆಚಾರ್ಯ, ವಸತಿ ಸಮಿತಿ ಸಂದೀಪ್ ಶೆಟ್ಟಿ, ಮಾತೃ ಸಮಿತಿಯ ಶಾಮಲ ಪಿ ಶೆಟ್ಟಿ ಕೊಂಜಾಲಗುತ್ತು, ಅರ್ಥಿಕ ಸಮಿತಿ ಪ್ರವೀಣ್ ಶೆಟ್ಟಿ, ಮತ್ತಿತರರ ಸಮಿತಿಯ ಪ್ರಮುಖರು ಸಮಿತಿಯು ಇದುವರೆಗೆ ನಡೆಸಿದ ಕೆಲಸದ ಬಗ್ಗೆ ಮಾಹಿತಿ ನೀಡಿದರು. ಮಧುಕರ ಅಮೀನ್ ವಂದಿಸಿದರು. ಸುಬ್ರಮಣ್ಯ ರಾವ್ ಕೋರ್ಯಾರು ಕಾರ್ಯಕ್ರಮ ನಿರೂಪಿಸಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಮಾನಸಿಕ ಖಿನ್ನತೆ ಸ್ವಯಂ ಮೌಲ್ಯಮಾಪನಕ್ಕೆ ನಿಮ್ಹಾನ್ಸ್‌ ಆ್ಯಪ್‌
ಒಂದೇ ದಿನ ಜಡ್ಜ್‌ ಮುಂದೆ 60 ಪರೋಲ್‌ ಅರ್ಜಿ!