ಕನ್ನಡಪ್ರಭ ವಾರ್ತೆ ಅರಸೀಕೆರೆ
13 ಸದಸ್ಯ ಬಲದ ಅಹಲ್ಯಾಬಾಯಿ ಹೋಳ್ಕರ್ ಸಂಘಕ್ಕೆ ಗುರುವಾರ ಚುನಾವಣೆ ನಿಗದಿಯಾಗಿತ್ತು. ನಿಗದಿತ ಸಮಯದಲ್ಲಿ ಅಧ್ಯಕ್ಷ ಸ್ಥಾನಕ್ಕೆ ಶಿಲ್ಪ ಚಂದ್ರು ಹಾಗೂ ಉಪಾಧ್ಯಕ್ಷ ಸ್ಥಾನಕ್ಕೆ ಕಾವ್ಯ ಆದರ್ಶ್ ಹೊರತುಪಡಿಸಿ ಈ ಬೇರೆ ಯಾರೂ ನಾಮಪತ್ರ ಸಲ್ಲಿಸದ ಕಾರಣ ಅವಿರೋಧ ಆಯ್ಕೆಯನ್ನು ಘೋಷಿಸಲಾಯಿತು. ಈ ಸಂದರ್ಭದಲ್ಲಿ ಸಂಗೊಳ್ಳಿ ರಾಯಣ್ಣ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷ ಗಂಡಸಿ ಜಗಣ್ಣ ಮಾತನಾಡಿ, ನಿಮ್ಮ ಮೇಲೆ ಸದಸ್ಯರು ಇಟ್ಟಿರುವ ನಂಬಿಕೆಯನ್ನು ಉಳಿಸಿಕೊಂಡು ಎಲ್ಲ ಸದಸ್ಯರ ಸಹಕಾರ ಪಡೆದು ಸಂಘನ್ನು ಅತ್ಯುನ್ನತ ಸ್ಥಿತಿಗೆ ತರಬೇಕೆಂದು ಸಲಹೆ ನೀಡಿದರು.
ಈ ಸಂದರ್ಭದಲ್ಲಿ ಗಿರಿ ಗೌಡ್ರು, ಭೂದೇಶ್ವರ ಸ್ವಾಮಿ ಒಡೆಯರ್, ಕನಕ ನೌಕರ ಸಂಘದ ಮಾಜಿ ಅಧ್ಯಕ್ಷ ಕಾವಲಿರಪ್ಪ, ಜಯಣ್ಣ, ಸುಧಾ ಮಂಜುನಾಥ್, ನಿಜಗುಣ, ಇತರರು ಹಾಜರಿದ್ದರು.