ಶಿವಮೊಗ್ಗ: ಕೈಗಾರಿಕಾ ಸ್ಮಾರ್ಟ್‌ ಸಿಟಿ ಆಯ್ಕೆಗೆ ಒತ್ತಾಯ

KannadaprabhaNewsNetwork |  
Published : Sep 09, 2024, 01:35 AM IST
ಶಿವಮೊಗ್ಗಕ್ಕೆ ಭೇಟಿ ನೀಡಿದ ಕೇಂದ್ರ ಕೈಗಾರಿಕಾ  ಸಚಿವ ಹೆಚ್. ಡಿ.ಕುಮಾರಸ್ವಾಮಿ ಅವರಿಗೆ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ಪದಾಧಿಕಾರಿಗಳು ಮನವಿ ಸಲ್ಲಿಸಿ ರಾಷ್ಟ್ರೀಯ ಕೈಗಾರಿಕಾ ಕಾರಿಡಾರ್ ಅಭಿವೃದ್ಧಿ ಕಾರ್ಯಕ್ರಮದಡಿಯಲ್ಲಿ ಶಿವಮೊಗ್ಗ ಮಹಾನಗರವನ್ನು ಕೈಗಾರಿಕಾ ಸ್ಮಾರ್ಟ್ ಸಿಟಿಯಾಗಿ ಆಯ್ಕೆ ಮಾಡುವಂತೆ ಒತ್ತಾಯಿಸಿದರು. | Kannada Prabha

ಸಾರಾಂಶ

ಶಿವಮೊಗ್ಗಕ್ಕೆ ಭೇಟಿ ನೀಡಿದ ಸಂದರ್ಭದಲ್ಲಿ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿಗೆ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ಪದಾಧಿಕಾರಿಗಳು ಮನವಿ ಸಲ್ಲಿಸಿದರು.

ಕನ್ನಡಪ್ರಭ ವಾರ್ತೆ ಶಿವಮೊಗ್ಗ

ರಾಷ್ಟ್ರೀಯ ಕೈಗಾರಿಕಾ ಕಾರಿಡಾರ್ ಅಭಿವೃದ್ಧಿ ಕಾರ್ಯಕ್ರಮದಡಿಯಲ್ಲಿ ಶಿವಮೊಗ್ಗ ಮಹಾನಗರವನ್ನು ಕೈಗಾರಿಕಾ ಸ್ಮಾರ್ಟ್ ಸಿಟಿಯಾಗಿ ಆಯ್ಕೆ ಮಾಡುವಂತೆ ಶಿವಮೊಗ್ಗ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ಪದಾಧಿಕಾರಿಗಳು ಕೇಂದ್ರ ಕೈಗಾರಿಕಾ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರಿಗೆ ಮನವಿ ಸಲ್ಲಿಸಿದರು.

ಎಚ್‌.ಡಿ.ಕುಮಾರಸ್ವಾಮಿಯವರು ನಗರಕ್ಕೆ ಭೇಟಿ ನೀಡಿದ ಸಂದರ್ಭದಲ್ಲಿ ಮನವಿ ಸಲ್ಲಿಸಿದ ಪದಾಧಿಕಾರಿಗಳು, ಪ್ರಧಾನಿ ನರೇಂದ್ರ ಮೋದಿ ಅಧ್ಯಕ್ಷತೆಯಲ್ಲಿ ಇತ್ತೀಚೆಗೆ ನಡೆದ ಆರ್ಥಿಕ ವ್ಯವಹಾರಗಳ ಸಂಪುಟ ಸಮಿತಿ ಸಭೆಯಲ್ಲಿ ದೇಶದ 12 ಕೈಗಾರಿಕಾ ಸ್ಮಾರ್ಟ್ ಸಿಟಿ ಸ್ಥಾಪಿಸಲು ಅನುಮೋದನೆ ನೀಡಿದ್ದು, ಶಿವಮೊಗ್ಗ ನಗರವನ್ನು ಯೋಜನೆ ವ್ಯಾಪ್ತಿಯಲ್ಲಿ ಕೈಗಾರಿಕಾ ಸ್ಮಾರ್ಟ್ ಸಿಟಿ ಸ್ಥಾಪಿಸಲು ಆಯ್ಕೆ ಮಾಡಲು ಮುಂದಾಗಬೇಕು ಎಂದು ಸಂಘದ ಪದಾಧಿಕಾರಿಗಳು ಮನವಿ ಮಾಡಿದರು.

ಶಿವಮೊಗ್ಗ ಜಿಲ್ಲೆಯು ಪ್ರವಾಸೋದ್ಯಮ, ಆಹಾರ ಉತ್ಪನ್ನ ಕ್ಷೇತ್ರ ಹಾಗೂ ಕೈಗಾರಿಕಾ ಕ್ಷೇತ್ರದಲ್ಲಿ ಹೆಚ್ಚಿನ ಅವಕಾಶಗಳಿದ್ದು, ಈಗಾಗಲೇ ಕೈಗಾರಿಕಾ ಕ್ಷೇತ್ರದಲ್ಲಿ ಮಹತ್ತರ ಕೊಡುಗೆಗಳನ್ನು ನೀಡುತ್ತಿದೆ. ಕರ್ನಾಟಕ ರಾಜ್ಯದಿಂದ ಶಿವಮೊಗ್ಗ ಆಯ್ಕೆ ಮಾಡುವುದು ಅತ್ಯಂತ ಸೂಕ್ತವಾಗಿದೆ ಎಂದು ತಿಳಿಸಿದರು.

ಶಿವಮೊಗ್ಗ ಮಹಾನಗರಕ್ಕೆ ಹೊಂದಿಕೊಂಡಿರುವ ದೇವಕಾತಿಕೊಪ್ಪದಲ್ಲಿ ಕೈಗಾರಿಕೆಗೆ ಅವಶ್ಯವಿರುವ ಸೌಕರ್ಯ ಹಾಗೂ ಅನುಮತಿಯನ್ನು ಒದಗಿಸಬೇಕು. ಸಿದ್ಲಿಪುರ ಸೇರಿ ಕೈಗಾರಿಕೆಗೆ ಇರುವ ಅವಕಾಶ ಜಾಗಗಳಲ್ಲಿ ಹೊಸ ಹೊಸ ಕೈಗಾರಿಕೆಗಳ ಸ್ಥಾಪನೆಗೆ ಅಗತ್ಯ ಕ್ರಮ ವಹಿಸಬೇಕು ಎಂದು ಈ ಸಂದರ್ಭದಲ್ಲಿ ಮನವಿ ಮಾಡಿದರು.

ಶಿವಮೊಗ್ಗ ಜಿಲ್ಲೆಯು ಪ್ರಸ್ತುತ ವಾಯು ಸಾರಿಗೆ, ರೈಲ್ವೆ ಸಾರಿಗೆ ಹಾಗೂ ರಸ್ತೆ ಸಾರಿಗೆಯಲ್ಲಿ ಉತ್ತಮ ಸೌಲಭ್ಯ ಹೊಂದಿದ್ದು, ರಾಷ್ಟ್ರೀಯ ಹೆದ್ದಾರಿ, ರಾಜ್ಯ ಹೆದ್ದಾರಿಗಳು ಹಾದುಹೋಗಿವೆ. ಕೈಗಾರಿಕಾ ಕ್ಷೇತ್ರಕ್ಕೆ ಪೂರಕವಾದ ವಾತಾವರಣ ಶಿವಮೊಗ್ಗದಲ್ಲಿದೆ. ಇಲ್ಲಿ ಕೈಗಾರಿಕಾ ಸ್ಮಾರ್ಟ್ ಸಿಟಿ ಸ್ಥಾಪಿಸಿದಲ್ಲಿ ಹೆಚ್ಚು ಉದ್ಯೋಗಾವಕಾಶ ಲಭ್ಯವಾಗುತ್ತದೆ ಎಂದು ಸಂಘದ ಪದಾಧಿಕಾರಿಗಳು ತಿಳಿಸಿದರು.

ಈ ಸಂದರ್ಭದಲ್ಲಿ ಶಿವಮೊಗ್ಗ ಜಿಲ್ಲಾ ವಾಣಿಜ್ಯ ಸಂಘದ ಅಧ್ಯಕ್ಷ ಎನ್.ಗೋಪಿನಾಥ್, ಉಪಾಧ್ಯಕ್ಷ ಬಿ.ಗೋಪಿನಾಥ್, ಕಾರ್ಯದರ್ಶಿ ವಸಂತ ಹೋಬಳಿದಾರ್, ಸಹ ಕಾರ್ಯದರ್ಶಿ ಜಿ.ವಿಜಯಕುಮಾರ್, ಹರ್ಷ ಕಾಮತ್, ಪ್ರದೀಪ್ ವಿ. ಎಲಿ, ವಿಶ್ವೇಶ್ವರಯ್ಯ, ರಾಮಾಜೋಯೀಸ್ ಇತರರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಅನುದಾನಿತ ಪಿಯು ಕಾಲೇಜು ನಿವೃತ್ತರ ಗಳಿಕೆ ರಜೆಗೆ 30 ಕೋಟಿ ರು.
ಮೇಲ್ಮನೆಗೆ ಪತ್ರಕರ್ತರ ಕರೆತರಲು ಎಂಎಲ್‌ಸಿ ಆಫರ್‌!