ಕನ್ನಡಪ್ರಭ ವಾರ್ತೆ ಶಿವಮೊಗ್ಗ
ಶನಿವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಶೃಂಗೇರಿಯಿಂದ ಕಿಷ್ಕಿಂದೆಯವರೆಗೆ ನಡೆಯುತ್ತಿರುವ ನಿರ್ಮಲ ತುಂಗಾಭದ್ರಾ ಅಭಿಯಾನದ ಭಾಗವಾದ ಬೃಹತ್ ಜಲಜಾಗೃತಿ-ಜನಜಾಗೃತಿ ಪಾದಯಾತ್ರೆ ನ.9ರಂದು ಸಂಜೆ ಶಿವಮೊಗ್ಗ ನಗರ ಪ್ರವೇಶಿಸಲಿದೆ. ಇಲ್ಲಿ ರಾಷ್ಟ್ರೀಯ ಸ್ವಾಭಿಮಾನಿ ಆಂದೋಲನ ಹಾಗೂ ಪರ್ಯಾವರಣ ಟ್ರಸ್ಟ್ ಸಹಯೋಗದೊಂದಿಗೆ ಪಾದಯಾತ್ರೆಗೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ ಎಂದು ಹೇಳಿದರು.
ಈ ಹಿಂದೆ ಗಂಗಾ ನದಿ ಶುದ್ಧೀಕರಣಕ್ಕೆ ಹೆಚ್ಚು ಒತ್ತು ನೀಡಲಾಗಿತ್ತು. ಇಲ್ಲಿ ಹಲವು ಅಧ್ಯಯನಗಳನ್ನು ನಡೆಸಿದ ಪ್ರತಿಫಲವಾಗಿ ಗಂಗಾನದಿ ಶುದ್ಧವಾಗಿ ಹರಿಯುತ್ತಿದೆ. ಅದೇ ಮಾದರಿಯಲ್ಲಿ ತುಂಗಾ-ಭದ್ರಾ ನದಿ ಶುದ್ಧೀಕರಣಕ್ಕೆ ಒತ್ತು ನೀಡಬೇಕಿದೆ ಎಂದು ಹೇಳಿದರು.ಜಿಲ್ಲೆಯಲ್ಲಿ ತುಂಗಾ-ಭದ್ರಾ ನದಿಗಳನ್ನು ಶುದ್ಧೀಕರಿಸಿ ಉಳಿಸುವ ನಿಟ್ಟಿನಲ್ಲಿ ಈಗಾಗಲೇ ಅನೇಕ ಪೂರ್ವ ಭಾವಿ ಸಭೆಗಳು ನಡೆದಿವೆ. ಈ ಸಭೆಯಲ್ಲಿ ಇಲ್ಲಿನ ಶಾಲಾ-ಕಾಲೇಜುಗಳ ಶಿಕ್ಷಕರು ಸಭೆಯಲ್ಲಿ ಪಾಲ್ಗೊಂಡಿದ್ದರು. ಎಲ್ಲರ ಅಭಿಪ್ರಾಯಗಳನ್ನೂ ಸಹ ಸಂಗ್ರಹಿಸಲಾಗಿದೆ. ಮುಂದಿನ ದಿನಗಳಲ್ಲಿ ತುಂಗಾ- ಭದ್ರಾ ನದಿಗಳ ಉಳಿಸುವುದು ಎಲ್ಲರ ಜವಾಬ್ದಾರಿ ಎಂದು ಹೇಳಿದರು.
ಪಾದಯಾತ್ರೆ ಸಾಗಿದ ಎಲ್ಲಾ ಕಡೆ ಜಾಗೃತಿ ಸಭೆಗಳನ್ನು ನಡೆಸಲಾಗಿದೆ. ತೀರ್ಥಹಳ್ಳಿಯಲ್ಲಿ ನಡೆದ ಸಭೆಯಲ್ಲಿ 4 ಸಾವಿರ ಜನರು ಪಾಲ್ಗೊಂಡಿದ್ದರು. ಇಲ್ಲಿ ವಿಶೇಷವಾದ ಅನುಭವ ಈ ಯಾತ್ರೆ ಕಟ್ಟಿಕೊಟ್ಟಿದೆ. ಆರಂಭದಲ್ಲಿ ಕೆಲವು ಗೊಂದಲಗಳಿದ್ದವು. ಆದರೆ, ಸಹಸ್ರಾರು ಸಂಖ್ಯೆಯಲ್ಲಿ ಯಾತ್ರೆಗೆ ಉತ್ತೇಜನ ನೀಡಿದ್ದಾರೆ. ಯಾತ್ರೆಯೊಂದಿಗೆ ಜನರು ಹೆಜ್ಜೆ ಹಾಕುತ್ತಿದ್ದಾರೆ. ಜಲಜಾಗೃತಿ ಮೂಡಿಸಲಾಗುತ್ತಿದೆ ಎಂದರು.
*ಇಂದು ಪ್ರಬುದ್ಧರ ಸಭೆ:
*ತುಂಗಾ ಆರತಿ:
ನಗರದ ಕುವೆಂಪು ರಂಗಮಂದಿರದಲ್ಲಿ ನ.11 ರಂದು ಬೆಳಗ್ಗೆ 8 ಗಂಟೆಗೆ ಯುವ ಜಾಗೃತಿ ಕಾರ್ಯಕ್ರಮ ಆಯೋಜಿಲಾಗಿದೆ ಎಂದು ಚನ್ನಬಸಪ್ಪ ಹೇಳಿದರು. ಜಿಲ್ಲೆಯ ಜನಪ್ರತಿನಿಧಿಗಳು, ಜಿಲ್ಲಾಧಿಕಾರಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿ- ಸಿಬ್ಬಂದಿಗಳು, ವಿವಿಧ ಸಂಘಟನೆಗಳ ಪ್ರಮುಖರು ಹಾಗೂ ಶಾಲಾ- ಕಾಲೇಜು ವಿದ್ಯಾರ್ಥಿಗಳು ಕೂಡ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದರು.