ಶಿವಮೊಗ್ಗ: ಮನಸೂರೆಗೊಂಡ ರೋಬೊ ಜಿದ್ದಾಜಿದ್ದಿ

KannadaprabhaNewsNetwork |  
Published : Dec 07, 2024, 12:32 AM IST
ಪೊಟೋ: 06ಎಸ್‌ಎಂಜಿಕೆಪಿ01ಶಿವಮೊಗ್ಗ ನಗರದ ಜೆ.ಎನ್‌.ಎನ್‌ ಎಂಜಿನಿಯರಿಂಗ್‌ ಕಾಲೇಜಿನಲ್ಲಿ ಶುಕ್ರವಾರ ಏರ್ಪಡಿಸಿದ್ದ ರಾಷ್ಟ್ರಮಟ್ಟದ ತಾಂತ್ರಿಕ ಸ್ಪರ್ಧೆ ʼಪ್ಲಾಸ್ಮಾ-2024ʼ ಕಾರ್ಯಕ್ರಮದಲ್ಲಿ ರೊಬೊಗಳ ಪ್ರದರ್ಶನವನ್ನು ಗಣ್ಯರು ವೀಕ್ಷಿಸಿದರು. | Kannada Prabha

ಸಾರಾಂಶ

ಶಿವಮೊಗ್ಗದಲ್ಲಿ ರೋಬೊಗಳ ನಡುವೆ ಜಿದ್ದಾಜಿದ್ದಿ ಏರ್ಪಟ್ಟಿತ್ತು. ರಾಜ್ಯದ ವಿವಿಧ ಎಂಜಿನಿಯರಿಂಗ್‌ ಕಾಲೇಜಿನಿಂದ ಆಗಮಿಸಿದ್ದ ವಿದ್ಯಾರ್ಥಿಗಳ ತಂಡದ ರೊಬೊಗಳು ನಾ ಮುಂದು, ತಾ ಮುಂದು ಎಂಬಂತೆ ಸ್ಪರ್ಧೆಗೆ ಬಿದ್ದಿದ್ದವು. ನೆರೆದಿದ್ದ ವಿದ್ಯಾರ್ಥಿಗಳ ಚಿತ್ತ ಸ್ವಲ್ಪವೂ ಕದಲದಂತೆ ತನ್ನಡೆಗೆ ಹಿಡಿದಿಟ್ಟುಕೊಳ್ಳುವಲ್ಲಿ ವಿವಿಧ ವಿನ್ಯಾಸದ ರೋಬೊಗಳು ಸಫಲವಾಗಿದ್ದವು.

ಕನ್ನಡಪ್ರಭ ವಾರ್ತೆ ಶಿವಮೊಗ್ಗ

ಶಿವಮೊಗ್ಗದಲ್ಲಿ ರೋಬೊಗಳ ನಡುವೆ ಜಿದ್ದಾಜಿದ್ದಿ ಏರ್ಪಟ್ಟಿತ್ತು. ರಾಜ್ಯದ ವಿವಿಧ ಎಂಜಿನಿಯರಿಂಗ್‌ ಕಾಲೇಜಿನಿಂದ ಆಗಮಿಸಿದ್ದ ವಿದ್ಯಾರ್ಥಿಗಳ ತಂಡದ ರೊಬೊಗಳು ನಾ ಮುಂದು, ತಾ ಮುಂದು ಎಂಬಂತೆ ಸ್ಪರ್ಧೆಗೆ ಬಿದ್ದಿದ್ದವು. ನೆರೆದಿದ್ದ ವಿದ್ಯಾರ್ಥಿಗಳ ಚಿತ್ತ ಸ್ವಲ್ಪವೂ ಕದಲದಂತೆ ತನ್ನಡೆಗೆ ಹಿಡಿದಿಟ್ಟುಕೊಳ್ಳುವಲ್ಲಿ ವಿವಿಧ ವಿನ್ಯಾಸದ ರೋಬೊಗಳು ಸಫಲವಾಗಿದ್ದವು.

ನಗರದ ಜೆ.ಎನ್‌.ಎನ್‌ ಎಂಜಿನಿಯರಿಂಗ್‌ ಕಾಲೇಜಿನ ಎಲೆಕ್ಟ್ರಾನಿಕ್ಸ್‌ ಅಂಡ್‌ ಕಮ್ಯನಿಕೇಷನ್‌ ಎಂಜಿನಿಯರಿಂಗ್‌ ವಿಭಾಗ, ಐಇಇಇ ವಿದ್ಯಾರ್ಥಿ ಘಟಕದ ಸಹಯೋಗದಲ್ಲಿ ಶುಕ್ರವಾರ ಏರ್ಪಡಿಸಿದ್ದ ರಾಷ್ಟ್ರಮಟ್ಟದ ತಾಂತ್ರಿಕ ಸ್ಪರ್ಧೆ ʼಪ್ಲಾಸ್ಮಾ-2024ʼ ಕಾರ್ಯಕ್ರಮ ರೊಬೋಗಳ ಜಿದ್ದಾಜಿದ್ದಿಗೆ ಸಾಕ್ಷಿಯಾಗಿತ್ತು.

ಕರ್ನಾಟಕದ ವಿವಿಧ ಕಾಲೇಜುಗಳಿಂದ ಆಗಮಿಸಿದ್ದ 205 ಕ್ಕು ಹೆಚ್ಚು ತಂಡಗಳು ರೋಬೊಟಿಕ್ಸ್ ಸ್ಪರ್ಧೆಗಳಾದ ಡೆಡ್ ರೊಬೊ ರೇಸ್, ರೊಬೊ ಸಾಸರ್, ಸುಮೊ ವಾರ್, ಲೈನ್ ಫಾಲೊವರ್, ಹ್ಯಾಕಥಾನ್ನಲ್ಲಿ ಉತ್ಸುಕರಾಗಿ ಪಾಲ್ಗೊಂಡವು.

ಕಾರ್ಯಕ್ರಮ ಉದ್ಘಾಟಿಸಿದ ಬೆಂಗಳೂರಿನ ಕ್ಯಾಡೆನ್ಸ್‌ ಸಿಸ್ಟಂ ಕಂಪನಿ ಡಿಸೈನ್‌ ಎಂಜಿನಿಯರ್‌ ಸಂಜಯ್.ಎ.ಸಿ ಮಾತನಾಡಿ, ಸವಾಲುಗಳನ್ನು ಎದುರಿಸಲು ಹೆಚ್ಚು ಆಸಕ್ತಿ ತೋರಿಸಿ. ವಿದ್ಯಾರ್ಥಿ ದೆಸೆಯಲ್ಲಿ ಕಲಿತ ಅದೆಷ್ಟೊ ಕೌಶಲ್ಯತೆಗಳು ನಮ್ಮ ಉದ್ಯೋಗ ಬದುಕಿನಲ್ಲಿ ಕೈ ಹಿಡಿದಿದೆ. ಇಂತಹ ಕಾರ್ಯಕ್ರಮಗಳಲ್ಲಿ ವಿದ್ಯಾರ್ಥಿಗಳು ಮುಕ್ತವಾಗಿ ತೊಡಗಿಸಿಕೊಳ್ಳುವ ಮೂಲಕ ಹೊಸತನಕ್ಕೆ, ತಾಂತ್ರಿಕತೆಯ ವಿಕಸನದತ್ತ ಹೆಜ್ಜೆ ಹಾಕಲು ಸಹಕಾರಿಯಾಗಿದೆ ಎಂದು ಹೇಳಿದರು.

ರಾಷ್ಟ್ರೀಯ ಶಿಕ್ಷಣ ಸಮಿತಿ ಕಾರ್ಯದರ್ಶಿ ಎಸ್.ಎನ್. ನಾಗರಾಜ ಮಾತನಾಡಿ, ಇಂದಿನ ಯುವ ಸಮೂಹ ಕೈಗಾರಿಕರಣದ ನಾಲ್ಕನೇ ತಲೆಮಾರಿನಲ್ಲಿದೆ. ಅಂತಹ ಆಧುನಿಕ ತಲೆಮಾರಿಗೆ ಪ್ಲಾಸ್ಮಾದ ಸಿದ್ಧಾಂತಗಳು ಹೆಚ್ಚು ಹತ್ತಿರವಾಗಿದೆ. ತಾಂತ್ರಿಕತೆಯ ಅಗ್ರಗಣ್ಯ ಸ್ಥಾನ ಪಡೆಯುತ್ತಿರುವ ರೊಬೊಗಳು, ಮನುಷ್ಯನ ಶಸ್ತ್ರ ಚಿಕಿತ್ಸೆ ಮಾಡುವಲ್ಲಿ ಯಶಸ್ವಿಯಾಗಿದೆ. ಜೊತೆಯಲ್ಲಿ ಶೀಘ್ರ ಗುಣಮುಖ ಹೊಂದುವ ಅವಕಾಶಗಳ ಮೂಲಕ, ರೊಬೊಗಳು ಆರೋಗ್ಯ ಕ್ಷೇತ್ರದಲ್ಲಿ ಮತ್ತಷ್ಟು ಚಾಪನ್ನು ಮೂಡಿಸಿದೆ ಎಂದು ಹೇಳಿದರು.

ಇಂದಿನ ಯುವ ಸಮೂಹದ ಅತಿ ದೊಡ್ಡ ಸವಾಲು ಎಂದರೆ, ಅದು ನಿರಂತರ ಕಲಿಕೆ. ಹೊಸ ತಂತ್ರಜ್ಞಾನಕ್ಕೆ ಕೌಶಲ್ಯತೆಗೆ ಉನ್ನತಿಕರಣ ಆಗಲೇ ಬೇಕಾದ ಅನಿವಾರ್ಯತೆ ನಿಮ್ಮ ಮೇಲಿದೆ. ಇಂತಹ ಕಾರ್ಯಕ್ರಮಗಳಲ್ಲಿ ಭಾಗವಹಿಸುವ ಮೂಲಕ ನಾವು ಕಲಿಕೆಯಲ್ಲಿ ಎಲ್ಲಿದ್ದೆವೆ ಎಂಬ ಆತ್ಮವಿಮರ್ಶೆ ಮಾಡಿಕೊಳ್ಳಿ ಎಂದು ವಿದ್ಯಾರ್ಥಿಗಳಿಗೆ ಕಿವಿ ಮಾತು ಹೇಳಿದರು.

ಕಾರ್ಯಕ್ರಮದಲ್ಲಿ ಎನ್‌ಇಎಸ್‌ ಸಂಸ್ಥೆಯ ಖಜಾಂಚಿಗಳಾದ ಡಿ.ಜಿ. ರಮೇಶ್‌, ಶೈಕ್ಷಣಿಕ ಡೀನ್‌ ಡಾ.ಪಿ. ಮಂಜುನಾಥ, ಸಂಶೋಧನಾ ಡೀನ್‌ ಡಾ. ಎಸ್‌.ವಿ. ಸತ್ಯನಾರಾಯಣ, ಸಂಯೋಜಕರಾದ ಅನಿಲ್‌ ಕುಮಾರ್.ಜೆ, ಪ್ರದೀಪ್. ಎಸ್.ಸಿ, ಪ್ರಶಾಂತ್. ಜಿ.ಎಸ್‌, ವಿದ್ಯಾರ್ಥಿ ಸಂಯೋಜಕರಾದ ರಾಹುಲ್‌, ರೋಹಿತ್‌, ಚಿರಾಗ್‌, ಸುಶಾಂತ್‌ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಅನುದಾನಿತ ಪಿಯು ಕಾಲೇಜು ನಿವೃತ್ತರ ಗಳಿಕೆ ರಜೆಗೆ 30 ಕೋಟಿ ರು.
ಮೇಲ್ಮನೆಗೆ ಪತ್ರಕರ್ತರ ಕರೆತರಲು ಎಂಎಲ್‌ಸಿ ಆಫರ್‌!