ಶಿರಹಟ್ಟಿ: ಪಟ್ಟಣ ಪಂಚಾಯತ್ ಅಧ್ಯಕ್ಷ- ಉಪಾಧ್ಯಕ್ಷ ಸ್ಥಾನಗಳಿಗೆ ಮಂಗಳವಾರ ನಡೆದ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ದೇವಕ್ಕ ಯಲ್ಲವ್ವ ಗುಡಿಮನಿ ಅಧ್ಯಕ್ಷರಾಗಿ ಹಾಗೂ ನೀಲವ್ವ ಯಲ್ಲಪ್ಪಗೌಡ ಹುಬ್ಬಳ್ಳಿ ಉಪಾಧ್ಯಕ್ಷರಾಗಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ಈ ಬಾರಿ ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಸ್ಥಾನ ಸಾಮಾನ್ಯ ಮಹಿಳಾ ವರ್ಗಕ್ಕೆ ಮೀಸಲಾಗಿತ್ತು. ಕಾಂಗ್ರೆಸ್ನಿಂದ ಅಧ್ಯಕ್ಷ ಸ್ಥಾನಕ್ಕೆ ವಾರ್ಡ್ ನಂ. ೧೫ರ ದೇವಕ್ಕ ತಾಯಿ ಯಲ್ಲವ್ವ ಗುಡಿಮನಿ ಒಬ್ಬರೇ ನಾಮಪತ್ರ ಸಲ್ಲಿಸಿದ್ದರು. ಉಪಾಧ್ಯಕ್ಷ ಸ್ಥಾನಕ್ಕೆ ವಾರ್ಡ್ ನಂ. ೪ರ ನೀಲವ್ವ ಯಲ್ಲಪ್ಪಗೌಡ ಹುಬ್ಬಳ್ಳಿ ನಾಮಪತ್ರ ಸಲ್ಲಿಸಿದ್ದರು.
ಚುನಾವಣೆ ಅಧಿಕಾರಿಯಾಗಿದ್ದ ತಹಸೀಲ್ದಾರ್ ಅನಿಲ ಬಡಿಗೇರ ಶಿರಹಟ್ಟಿ ಪಟ್ಟಣ ಪಂಚಾಯಿತಿ ಬಾಕಿ ಉಳಿದ ಅವಧಿಗೆ ಅಧ್ಯಕ್ಷ-ಉಪಾಧ್ಯಕ್ಷರ ಗೆಲುವನ್ನು ಅಧಿಕೃತವಾಗಿ ಘೋಷಣೆ ಮಾಡಿದರು. ಪಪಂ ಮುಖ್ಯಾಧಿಕಾರಿ ಸಿದ್ದರಾಯ ಕಟ್ಟಿಮನಿ, ಜಮೀರ ಮನಿಯಾರ, ಸಂತೋಷ ಅಸ್ಕಿ ಇದ್ದರು.ಅಭಿವೃದ್ದಿ ವಿಷಯದಲ್ಲಿ ರಾಜಕೀಯವಿಲ್ಲ
ಅಭಿವೃದ್ದಿ ವಿಷಯದಲ್ಲಿ ನಾನು ಯಾವುದೇ ರಾಜಕೀಯ ಮಾಡುವುದಿಲ್ಲ. ಆದರೆ ಸ್ವಾರ್ಥಕ್ಕೋಸ್ಕರ ಅಭಿವೃದ್ಧಿ ಕಡೆಗಣಿಸುವುದನ್ನು ಸಹಿಸಲು ಸಾಧ್ಯವಿಲ್ಲ. ಜನರಿಗೆ ಸರ್ಕಾರದ ಸೌಲಭ್ಯಗಳನ್ನು ಅನುಭವಿಸುವ ಹಕ್ಕಿದೆ. ಜನಪ್ರತಿನಿಧಿಯಾದವರು ಅದನ್ನು ಕೊಡಿಸಬೇಕು. ಇಲ್ಲವಾದಲ್ಲಿ ಅದಕ್ಕಿಂತ ವಂಚನೆ ಮತ್ತೊಂದಿಲ್ಲ ಎಂದು ಹೇಳಿದರು.
ಅಧ್ಯಕ್ಷ-ಉಪಾಧ್ಯಕ್ಷರ ಆಯ್ಕೆ ಘೋಷಣೆಗೂ ಮೊದಲೇ ೬ ಬಿಜೆಪಿ ಸದಸ್ಯರು ಹೊರಗೆ ಹೋದರು.
ಅಧ್ಯಕ್ಷ-ಉಪಾಧ್ಯಕ್ಷ ಆಯ್ಕೆ ಘೋಷಣೆಯಾದ ಮೇಲೆ ಪಟ್ಟಣದಲ್ಲಿ ಮೆರವಣಿಗೆಗೆ ಸಜ್ಜಾಗಿದ್ದ ಜನರ ಹತೋಟಿಗಾಗಿ ಪಿಎಸ್ಐ ಶಿವಾನಂದ ಲಮಾಣಿ ನೇತೃತ್ವದಲ್ಲಿ ಬಿಗಿ ಬಂದೋಬಸ್ತ್ ಕೈಗೊಳ್ಳಲಾಗಿತ್ತು. ಕಾಂಗ್ರೆಸ್ ಕಾರ್ಯಕರ್ತರು, ಅಭಿಮಾನಿಗಳು ಪಟಾಕಿ ಸಿಡಿಸಿ, ಗುಲಾಲ್ ಎರಚಿ ಸಂಭ್ರಮದಿಂದ ಮೆರವಣಿಗೆ ಕೈಗೊಂಡರು. ಚುನಾವಣೆ ಅತ್ಯಂತ ಶಾಂತವಾಗಿ ನೆರವೇರಿತು.