ಶಿರಡಿ ಸಾಯಿಬಾಬಾ ಮಂದಿರ ಅವ್ಯವಹಾರ ತನಿಖೆ ನಡೆಸಿ

KannadaprabhaNewsNetwork |  
Published : Jan 17, 2026, 03:00 AM IST
ಹುಬ್ಬಳ್ಳಿಯ ಶಿರಡಿ ಸಾಯಿಬಾಬಾ ಮಂದಿರದಲ್ಲಿ ಅವ್ಯವಹಾರ ನಡೆದಿದ್ದು, ಸೂಕ್ತ ತನಿಖೆ ನಡೆಸಬೇಕು ಎಂದು ಆಗ್ರಹಿಸಿ ಶ್ರೀರಾಮಸೇನೆ ಮುಖ್ಯಸ್ಥ ಪ್ರಮೋದ ಮುತಾಲಿಕ್‌ ಶುಕ್ರವಾರ ಜಿಲ್ಲಾಧಿಕಾರಿ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಿದರು. | Kannada Prabha

ಸಾರಾಂಶ

ಹುಬ್ಬಳ್ಳಿಯ ಶಿರಡಿ ಸಾಯಿಬಾಬಾ ಮಂದಿರದಲ್ಲಿ ಅವ್ಯವಹಾರ ನಡೆದಿದ್ದು, ಈ ಕುರಿತು ಈಗಾಗಲೇ ಜಿಲ್ಲಾಡಳಿತದ ಗಮನಕ್ಕೆ ತರಲಾಗಿದೆ. ಆದರೆ, ಯಾವುದೇ ಕ್ರಮವಾಗಿಲ್ಲ. ಈ ವಿಷಯವನ್ನು ಗಂಭೀರವಾಗಿ ಪರಿಗಣಿಸಿ ಕೂಡಲೇ ನ್ಯಾಯಾಧೀಶರ ನೇತೃತ್ವದಲ್ಲಿ ತನಿಖೆ ನಡೆಸಬೇಕು ಎಂದು ಶ್ರೀರಾಮಸೇನೆ ಮುಖ್ಯಸ್ಥ ಪ್ರಮೋದ ಮುತಾಲಿಕ ಜಿಲ್ಲಾಡಳಿತಕ್ಕೆ ಮನವಿ ಸಲ್ಲಿಸಿದ್ದಾರೆ.

ಧಾರವಾಡ:

ಹುಬ್ಬಳ್ಳಿಯ ಶಿರಡಿ ಸಾಯಿಬಾಬಾ ಮಂದಿರದಲ್ಲಿ ಅವ್ಯವಹಾರ ನಡೆದಿದ್ದು, ಸೂಕ್ತ ತನಿಖೆ ನಡೆಸಬೇಕು ಎಂದು ಆಗ್ರಹಿಸಿ ಶ್ರೀರಾಮಸೇನೆ ಮುಖ್ಯಸ್ಥ ಪ್ರಮೋದ ಮುತಾಲಿಕ ಶುಕ್ರವಾರ ಜಿಲ್ಲಾಡಳಿತದ ಮೂಲಕ ರಾಜ್ಯ ಸರ್ಕಾರಕ್ಕೆ ಮನವಿ ಸಲ್ಲಿಸಿದರು.

ದೇವಸ್ಥಾನದಲ್ಲಿ ಭ್ರಷ್ಟಾಚಾರ ನಡೆಯುತ್ತಿದೆ. ಈ ಕುರಿತು ಈಗಾಗಲೇ ಜಿಲ್ಲಾಡಳಿತದ ಗಮನಕ್ಕೆ ತರಲಾಗಿದೆ. ಆದರೆ, ಯಾವುದೇ ಕ್ರಮವಾಗಿಲ್ಲ. ಈ ವಿಷಯವನ್ನು ಗಂಭೀರವಾಗಿ ಪರಿಗಣಿಸಿ ಕೂಡಲೇ ನ್ಯಾಯಾಧೀಶರ ನೇತೃತ್ವದಲ್ಲಿ ತನಿಖೆ ನಡೆಸಬೇಕು. ಇಲ್ಲದಿದ್ದರೆ ಮುಂದಿನ ದಿನಗಳಲ್ಲಿ ಉಗ್ರ ಹೋರಾಟ ನಡೆಸಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದರು. ಅಪರ ಜಿಲ್ಲಾಧಿಕಾರಿ ಗೀತಾ ಸಿ.ಡಿ ಮೂಲಕ ಸರ್ಕಾರಕ್ಕೆ ಮುತಾಲಿಕ ಮನವಿ ಸಲ್ಲಿಸಿದರು. ಈ ವೇಳೆ ಸೇನೆಯ ಪದಾಧಿಕಾರಿಗಳಿದ್ದರು.

ಆರೋಪ ಸುಳ್ಳು?:

ಏತನ್ಮಧ್ಯೆ, ಶ್ರೀಸಾಯಿ ಮಂದಿರದ ಆಡಳಿತ ಮಂಡಳಿಯ ಮೇಲೆ ಮಾಡಿರುವ ಆರೋಪ ಸತ್ಯಕ್ಕೆ ದೂರ ಎಂದು ಮಂಡಳಿಯ ಅಧ್ಯಕ್ಷ ಮಹದೇವ ಮಾಶ್ಯಾಳ ಪತ್ರಿಕಾ ಪ್ರಕಟಣೆ ಮೂಲಕ ಸ್ಪಷ್ಟನೆ ನೀಡಿದ್ದಾರೆ. ಮುತಾಲಿಕರ ದೂರಿನ ಅನ್ವಯ ಜಿಲ್ಲಾ ಸಹಕಾರಿ ಸಂಘಗಳ ಕಚೇರಿಗೆ ಸಂಬಂಧಿಸಿದ ಎಲ್ಲ ದಾಖಲೆಗಳನ್ನು ಸಲ್ಲಿಸಲಾಗಿದೆ. ಶ್ರೀಮಂದಿರದಲ್ಲಿ ಯಾವುದೇ ಅವ್ಯವಹಾರ ಆಗಿಲ್ಲ. ಇಲ್ಲಿ ಎಲ್ಲವೂ ಪಾರದರ್ಶಕವಾಗಿದ್ದು ಯಾವುದೇ ಅಧಿಕಾರಿಗಳಾಗಲಿ, ಭಕ್ತರಾಗಲಿ ಪರಿಶೀಲಿಸಬಹುದು. 2024-2025ರ ವರೆಗೆ ಲೆಕ್ಕ ಪರಿಶೋಧಕರಿಂದ ಆಡಿಟ್ ಮಾಡಿಸಿ, ಸರ್ಕಾರಕ್ಕೆ ನೀಡಿ ನೋಂದಣಿ ನವೀಕರಣ ಮಾಡಲಾಗಿದೆ. ಶ್ರೀಮಂದಿರದ ಆಡಳಿತ ಮಂಡಳಿ ಹೆಸರನ್ನು ಹಾಳು ಮಾಡಲು ಈ ಮೊದಲಿನ ಅಧ್ಯಕ್ಷರು ಪ್ರಯತ್ನಿಸುತ್ತಿದ್ದಾರೆ. ಭಕ್ತರಿಗೆ ಯಾವುದೇ ಸಂಶಯವಿದ್ದಲ್ಲಿ ಲೆಕ್ಕ ಪತ್ರಗಳನ್ನು ಪರಿಶೀಲಿಸಿ ಸಂಶಯ ಪರಿಹರಿಸಿಕೊಳ್ಳಬಹುದು. ಉದ್ದೇಶಪೂರ್ವಕವಾಗಿ ಹಾಗೂ ವೈಯಕ್ತಿಕ ಹಿತಾಸಕ್ತಿಯನ್ನಿಟ್ಟುಕೊಂಡು ಮಂದಿರದ ಮೇಲೆ ವಿನಾಕಾರಣ ಆರೋಪ ಬೇಡ ಎಂದು ಮಾಶ್ಯಾಮ ಮನವಿ ಮಾಡಿದ್ದಾರೆ.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಮಹಾ ಜಿಪಂ ಎಲೆಕ್ಷನ್‌ಗೆ ಮೈಸೂರು ಇಂಕ್‌ ಬಳಕೆ
ಮಾಜಿ ಸಚಿವ ರಾಜಣ್ಣಗೆ ಸಿಹಿ ಸುದ್ದಿ : ಮುಖ್ಯಮಂತ್ರಿ ಸಿದ್ಧರಾಮಯ್ಯ