ಶಿರ್ವ: ಪಂಜಿಮಾರು ಹಾಲು ಉತ್ಪಾದಕರ ಸಹಕಾರಿ ಸಂಘ ಕಟ್ಟಡಕ್ಕೆ ಶಿಲಾನ್ಯಾಸ

KannadaprabhaNewsNetwork |  
Published : Jan 30, 2025, 12:34 AM IST
28ಹಾಲು | Kannada Prabha

ಸಾರಾಂಶ

ಶಿರ್ವದ ಪಂಜಿಮಾರು ಹಾಲು ಉತ್ಪಾದಕರ ಸಹಕಾರಿ ಸಂಘದ ನೂತನ ಕಟ್ಟಡ ನಿರ್ಮಾಣಕ್ಕೆ ಶಿಲಾನ್ಯಾಸಕ್ಕೆ ಕೋಡು ಮುಲ್ಕಾಡಿ ಶ್ರೀ ದುರ್ಗಾಪರಮೇಶ್ವರಿ ದೇವಳದ ಪ್ರಧಾನ ಅರ್ಚಕ ಲೋಹಿತ್ ಭಟ್ ನೇತೃತ್ವದಲ್ಲಿ ಧಾರ್ಮಿಕ ಪೂಜಾನುಷ್ಠಾನಗಳನ್ನು ನೆರವೇರಿಸಲಾಯಿತು. ಸಂಘದ ಉಪಾಧ್ಯಕ್ಷ ಪಾಲಮೆ ನಿತ್ಯಾನಂದ ನಾಯಕ್ ದಂಪತಿ ಪೂಜಾನುಷ್ಠಾನದಲ್ಲಿ ಉಪಸ್ಥಿತರಿದ್ದರು.

ಕನ್ನಡಪ್ರಭ ವಾರ್ತೆ ಕಾಪು

ಶಿರ್ವದ ಪಂಜಿಮಾರು ಹಾಲು ಉತ್ಪಾದಕರ ಸಹಕಾರಿ ಸಂಘದ ನೂತನ ಕಟ್ಟಡ ನಿರ್ಮಾಣಕ್ಕೆ ಶಿಲಾನ್ಯಾಸಕ್ಕೆ ಕೋಡು ಮುಲ್ಕಾಡಿ ಶ್ರೀ ದುರ್ಗಾಪರಮೇಶ್ವರಿ ದೇವಳದ ಪ್ರಧಾನ ಅರ್ಚಕ ಲೋಹಿತ್ ಭಟ್ ನೇತೃತ್ವದಲ್ಲಿ ಧಾರ್ಮಿಕ ಪೂಜಾನುಷ್ಠಾನಗಳನ್ನು ನೆರವೇರಿಸಲಾಯಿತು. ಸಂಘದ ಉಪಾಧ್ಯಕ್ಷ ಪಾಲಮೆ ನಿತ್ಯಾನಂದ ನಾಯಕ್ ದಂಪತಿ ಪೂಜಾನುಷ್ಠಾನದಲ್ಲಿ ಉಪಸ್ಥಿತರಿದ್ದರು.ಸಂಘದ ಅಧ್ಯಕ್ಷ ಸಂತೋಷ್ ಶೆಟ್ಟಿ, ಹಿರಿಯರಾದ ಎಂ. ನಾರಾಯಣ ಕಾಮತ್, ವಸಂತ ಪೂಜಾರಿ, ನಿಕಟಪೂರ್ವ ಅಧ್ಯಕ್ಷೆ ಹರಿಣಾಕ್ಷಿ ಎನ್. ಶೆಟ್ಟಿ, ಬಂಟಕಲ್ಲು ಶ್ರೀ ದುರ್ಗಾಪರಮೇಶ್ವರಿ ದೇವಳದ ಆಡಳಿತ ಮಂಡಳಿ ಅಧ್ಯಕ್ಷ ಉಮೇಶ್ ಪ್ರಭು ಪಾಲಮೆ, ಮುಲ್ಕಾಡಿ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಗೌರವ ಅಧ್ಯಕ್ಷ ದಿನಕರ ಶೆಟ್ಟಿ ಶುಭಹಾರೈಸಿದರು.

ಕಾರ್ಯಕ್ರಮದಲ್ಲಿ ಸುಪ್ರೀತಾ ಎಸ್. ಪೂಜಾರಿ, ಶ್ಯಾಮರಾಯ ರಾವ್, ರವಿಕಾಂತ್ ಸುವರ್ಣ ಪಡುಬೆಳ್ಳೆ, ಹಿರಿಯರಾದ ಆನಂದ ಶೆಟ್ಟಿ ಪಂಜಿಮಾರು, ಕಟ್ಟಡ ಸಮಿತಿ ಸದಸ್ಯರಾದ ಜಗದೀಶ ಶೆಟ್ಟಿ, ಲಿಲ್ಲಿ ಮೋನಿಸ್, ಕಾರ್ಯಕಾರಿ ಸಮಿತಿಯ ಸದಸ್ಯರಾದ ಗಣಪತಿ ಪ್ರಭು, ಪ್ರಸಾದ್ ಶೆಟ್ಟಿ, ವಿನಯಾ ಹೆಗ್ಡೆ, ಗ್ರಾಮಸ್ಥರು ಉಪಸ್ಥಿತರಿದ್ದರು.

ಸಂಘದ ಕಾರ್ಯನಿರ್ವಹಣಾಧಿಕಾರಿ ಸುಕೇಶ್ ಪೂಜಾರಿ ವಲದೂರು ಕಾರ್ಯಕ್ರಮ ನಿರೂಪಿಸಿ ವಂದಿಸಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ರಸಗೊಬ್ಬರ ಬಳಕೆ ಕಡಿಮೆ ಮಾಡಿ : ಸಿಎಂ ಸಲಹೆ
''ತಾಕತ್ತು ಇದ್ದರೆ ನೋಟಿನಲ್ಲಿರುವ ಗಾಂಧೀಜಿಯವರ ಭಾವಚಿತ್ರವನ್ನು ತೆಗೆಯಲಿ''