ಶಾಂತಿಯ ಬದುಕಿಗೆ ಧರ್ಮಾಚರಣೆ ಅವಶ್ಯಕ

KannadaprabhaNewsNetwork |  
Published : Jun 10, 2025, 10:56 AM ISTUpdated : Jun 10, 2025, 10:57 AM IST
24 | Kannada Prabha

ಸಾರಾಂಶ

ಮಾನವ ಜೀವನದಲ್ಲಿ ಧರ್ಮ, ಅರ್ಥ, ಕಾಮ, ಮೋಕ್ಷಾ ಎಂಬ ಚತುರ್ವಿಧ ಪುರುಷಾರ್ಥಗಳಲ್ಲಿ ಒಂದನ್ನಾದರೂ ಸಂಪಾದಿಸಿಕೊಳ್ಳದಿದ್ದರೆ ಮಾನವ ಜೀವನ ವ್ಯರ್ಥವಾಗುತ್ತದೆ

ಕನ್ನಡಪ್ರಭ ವಾರ್ತೆ ಮೈಸೂರು

ಆರೋಗ್ಯಪೂರ್ಣ ಸಮಾಜ ನಿರ್ಮಾಣಕ್ಕೆ ಆದರ್ಶ ಮೌಲ್ಯಗಳ ಅರಿವು ಆಚರಣೆ ಮುಖ್ಯ. ಶಾಂತಿ ನೆಮ್ಮದಿಯ ಬದುಕಿಗೆ ಧರ್ಮಾಚರಣೆ ಅವಶ್ಯಕವೆಂದು ಬಾಳೆಹೊನ್ನೂರು ಶ್ರೀ ರಂಭಾಪುರಿ ಡಾ. ವೀರಸೋಮೇಶ್ವರ ಶ್ರೀಗಳು ಅಭಿಪ್ರಾಯಪಟ್ಟರು.

ಸೋಮವಾರ ಶ್ರೀರಾಂಪುರದ ಶಿವಭವನದಲ್ಲಿ ಜರುಗಿದ ಇಷ್ಟಲಿಂಗ ಮಹಾಪೂಜಾ ಹಾಗೂ ಧರ್ಮ ಜಾಗೃತಿ ಸಮಾರಂಭದ ಸಾನ್ನಿಧ್ಯ ವಹಿಸಿ ಆಶೀರ್ವಚನ ನೀಡಿದರು.

ಮಾನವ ಜೀವನದಲ್ಲಿ ಧರ್ಮ, ಅರ್ಥ, ಕಾಮ, ಮೋಕ್ಷಾ ಎಂಬ ಚತುರ್ವಿಧ ಪುರುಷಾರ್ಥಗಳಲ್ಲಿ ಒಂದನ್ನಾದರೂ ಸಂಪಾದಿಸಿಕೊಳ್ಳದಿದ್ದರೆ ಮಾನವ ಜೀವನ ವ್ಯರ್ಥವಾಗುತ್ತದೆ. ಸುಖದ ಮೂಲ ಧರ್ಮದ ಆಚರಣೆಯಲ್ಲಿದೆ. ಅರಿತು ಆಚರಿಸಿ ಬಾಳುವುದೇ ನಿಜವಾದ ಧರ್ಮ ಎಂಬುದು ಅಶ್ವತವೃಕ್ಷ ಇದ್ದಂತೆ ಆ ವೃಕ್ಷದ ನೆರಳಿನಲ್ಲಿ ಸಕಲ ಜೀವರಾಶಿಗಳು ಬಾಳಿ ಬದುಕಿಸುವ ಶಕ್ತಿ ಇದೆ. ಶ್ರೀ ಜಗದ್ಗುರು ರೇಣುಕಾಚಾರ್ಯರು ಅಹಿಂಸಾದಿ ಧ್ಯಾನ ಪರ್ಯತರವಾದ ದಶಧರ್ಮ ಸೂತ್ರಗಳನ್ನು ಬೋಧಿಸಿ ಸಕಲರನ್ನು ಉದ್ದರಿಸಿದ್ದಾರೆ ಎಂದರು.

ಇಷ್ಟಲಿಂಗಾರ್ಚನೆಯಿಂದ ಸಂಕಷ್ಟಗಳು ದೂರವಾಗಿ ಇಷ್ಟಾರ್ಥ ಫಲಗಳು ಪ್ರಾಪ್ತವಾಗುತ್ತವೆ. ಶಿವನನ್ನು ಪೂಜಿಸಿದರೆ ಸಕಲ ದೇವಾನುದೇವತೆಗಳನ್ನು ಪೂಜಿಸಿದ ಪುಣ್ಯ ಫಲ ಪ್ರಾಪ್ತವಾಗುತ್ತದೆ. ವೈಚಾರಿಕತೆ ಹೆಸರಿನಲ್ಲಿ ಭಾರತೀಯ ಉತ್ಕೃಷ್ಟ ಸಂಸ್ಕೃತಿ ನಾಶಗೊಳ್ಳಬಾರದು. ಸತ್ಯ ಧರ್ಮದ ತಳಹದಿಯ ಮೇಲೆ ಮಾನವ ಜೀವನ ರೂಪಿತಗೊಂಡಾಗ ಬದುಕು ಸಮೃದ್ಧಗೊಳ್ಳುತ್ತದೆ. ಮೈಸೂರು ನಗರದಲ್ಲಿ ಇಷ್ಟಲಿಂಗ ಮಹಾಪೂಜೆ ಹಮ್ಮಿಕೊಂಡಿರುವುದು ಸಕಲ ಭಕ್ತರಿಗೆ ಹರುಷವನ್ನು ಉಂಟುಮಾಡಿದೆ. ಪ್ರತಿವರ್ಷ ಇಂಥ ಕಾರ್ಯಕ್ರಮಗಳು ಜರುಗಿದರೆ ಯುವ ಜನಾಂಗಕ್ಕೆ ಅರಿವು ಉಂಟಾಗಿ ಸನ್ಮಾರ್ಗದಲ್ಲಿ ನಡೆಯಲು ಸಹಕಾರವಾಗುವುದರಲ್ಲಿ ಯಾವುದೇ ಸಂದೇಹ ಇಲ್ಲ ಎಂದರು.

ವಿರೂಪಾಕ್ಷ ಮತ್ತು ವಿಜಯಮ್ಮ ಮತ್ತು ಮಕ್ಕಳು ಸಂಘಟಿಸಿದ ಈ ಕಾರ್ಯದಲ್ಲಿ ಶಿವಭವನದ ಅಧ್ಯಕ್ಷ ಮಹೇಶ್ ಮೊದಲ್ಗೊಂಡು ಆಡಳಿತ ಮಂಡಳಿಯ ಎಲ್ಲಾ ಸದಸ್ಯರು ಸಹಕರಿಸಿರುವುದು ಅವರಲ್ಲಿರುವ ಧರ್ಮ ನಿಷ್ಠೆಗೆ ಸಾಕ್ಷಿಯಾಗಿದೆ ಎಂದರು.

ಅರಮನೆ ಜಪದಕಟ್ಟೆ ಮಠದ ಡಾ ಮುಮ್ಮಡಿ ಚಂದ್ರಶೇಖರ ಶಿವಾಚಾರ್ಯ ಸ್ವಾಮೀಜಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಹಂಪಸಾಗರ ನವಲಿ ಹಿರೇಮಠದ ಶ್ರೀ ಶಿವಲಿಂಗ ರುದ್ರಮುನಿ ಶಿವಾಚಾರ್ಯ ಸ್ವಾಮೀಜಿ, ವಿರೂಪಾಕ್ಷ, ಟಿ.ಟಿ. ಮಹೇಶ್, ಪ್ರಸನ್ನ ಕುಮಾರ್, ಆದಪ್ಪ ಶೆಟ್ಟರು, ಎನ್‌.ಜಿ. ಗಿರೀಶ, ವೀರೇಶ, ಖಂಡೇಶ್, ಅಶೋಕ ಹಾಗೂ ಕುಮಾರಸ್ವಾಮಿ ಇದ್ದರು.

ಹಲವಾರು ಗಣ್ಯರಿಗೆ ದಾನಿಗಳಿಗೆ ಶ್ರೀ ರಂಭಾಪುರಿ ಜಗದ್ಗುರುಗಳು ಗುರುರಕ್ಷೆ ನೀಡಿ ಆಶೀರ್ವದಿಸಿದರು. ಧನಗೂರು ಬೃಹನ್ಮಠದ ಮುಮ್ಮಡಿ ಷಡಕ್ಷರ ಶಿವಾಚಾರ್ಯ ಸ್ವಾಮೀಜಿ ನಿರೂಪಿಸಿದರು. ದಿನೇಶ್ ಶಾಸ್ತ್ರಿಗಳು ಸರ್ವರನ್ನು ಸ್ವಾಗತಿಸಿದರು.

ಸಮಾರಂಭಕ್ಕೂ ಮುನ್ನ ಶಿವಭವನದಲ್ಲಿ ಶ್ರೀಗಳು ಇಷ್ಟಲಿಂಗ ಮಹಾಪೂಜೆ ನೆರವೇರಿಸಿದರು. ಬಳಿಕ ಭಕ್ತರಿಗೆ ಅನ್ನದಾಸೋಹಯನ್ನು ಶ್ರೀ ಜಗದ್ಗುರು ಪಂಚಾಚಾರ್ಯ ಸೇವಾ ಸಮಿತಿಯವರು ಆಯೋಜಿಸಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಪಲ್ಸ್‌ ಪೋಲಿಯೋ ಹಾಕಿಸಿ, ಅಂಗವಿಕತೆ ತಪ್ಪಿಸಿ
ಪುಷ್ಪಗಿರಿ ಜೇಸಿಗೆ 50 ವರ್ಷ: ಸಂಭ್ರಮ ಆಚರಣೆ