ಶಿವಾಜಿ ಜೀವನ ಚರಿತ್ರೆ ಪುಸ್ತಕಕ್ಕೆ ಮಾತ್ರ ಸೀಮಿತವಾಗದಿರಲಿ

KannadaprabhaNewsNetwork |  
Published : Feb 20, 2024, 01:45 AM IST
ಹುಬ್ಬಳ್ಳಿಯ ತಾಲೂಕು ಆಡಳಿತಸೌಧದ ತಹಸೀಲ್ದಾರ್‌ ಕಾರ್ಯಾಲಯದ ಸಭಾ ಭವನದಲ್ಲಿ ನಡೆದ ಛತ್ರಪತಿ ಶಿವಾಜಿ ಜಯಂತಿ ಆಚರಿಸಲಾಯಿತು.  | Kannada Prabha

ಸಾರಾಂಶ

ರಾಷ್ಟ್ರದ ಸಂಸ್ಕೃತಿ ಉಳಿಸಿ ಬೆಳೆಸುವಲ್ಲಿ ಶಿವಾಜಿಯವರ ಶ್ರಮ ಅವಿಸ್ಮರಣೀಯವಾದುದಾಗಿದೆ. ಇಂತಹ ಮಹಾನ್ ವ್ಯಕ್ತಿಯು ಯಾವುದೇ ಒಂದು ಜನಾಂಗಕ್ಕೆ ಮಾತ್ರ ಸೀಮಿತಗೊಳ್ಳಬಾರದು

ಹುಬ್ಬಳ್ಳಿ: ಛತ್ರಪತಿ ಶಿವಾಜಿ ಮಹಾರಾಜರ ಜೀವನ ಚರಿತ್ರೆ ಪುಸ್ತಕಕ್ಕೆ ಮಾತ್ರ ಸೀಮಿತವಾಗಬಾರದು. ಮುಂದಿನ ಪೀಳಿಗೆಯು ಶಿವಾಜಿಯವರ ಬಗ್ಗೆ ತಿಳಿದುಕೊಳ್ಳುವಂತಾಗಬೇಕು ಎಂದು ಹುಬ್ಬಳ್ಳಿ ಶಹರ ತಹಸೀಲ್ದಾರ್‌ ಕಲಗೌಡ ಪಾಟೀಲ ಹೇಳಿದರು.

ಅವರು ಸೋಮವಾರ ಇಲ್ಲಿನ ತಾಲೂಕಾಡಳಿತಸೌಧದ ತಹಸೀಲ್ದಾರ್‌ ಕಾರ್ಯಾಲಯದ ಸಭಾ ಭವನದಲ್ಲಿ ನಡೆದ ಛತ್ರಪತಿ ಶಿವಾಜಿ ಜಯಂತಿ ಕಾರ್ಯಕ್ರಮವನ್ನು ಶಿವಾಜಿ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸುವ ಮೂಲಕ ಉದ್ಘಾಟಿಸಿ ಮಾತನಾಡಿದರು.

ಶಿವಾಜಿ ಆದರ್ಶಗಳು, ಅವರು ಮಾಡಿದ ಕಾರ್ಯಗಳು, ಅವರು ದೇಶಕ್ಕೆ ನೀಡಿದ ಕೊಡುಗೆಯ ಬಗ್ಗೆ ನಾವು ತಿಳಿದುಕೊಳ್ಳಬೇಕು. ಅವರ ಒಳ್ಳೆಯ ಸಂದೇಶಗಳನ್ನು ನಮ್ಮ ಜೀವನದಲ್ಲೂ ಅಳವಡಿಸಿಕೊಳ್ಳಬೇಕು ಎಂದರು.

ಹುಬ್ಬಳ್ಳಿ ಗ್ರಾಮೀಣ ತಹಸೀಲ್ದಾರ್‌ ಪ್ರಕಾಶ ಹೊಳೆಪ್ಪಗೋಳ ಮಾತನಾಡಿ, ರಾಷ್ಟ್ರದ ಸಂಸ್ಕೃತಿ ಉಳಿಸಿ ಬೆಳೆಸುವಲ್ಲಿ ಶಿವಾಜಿಯವರ ಶ್ರಮ ಅವಿಸ್ಮರಣೀಯವಾದುದಾಗಿದೆ. ಇಂತಹ ಮಹಾನ್ ವ್ಯಕ್ತಿಯು ಯಾವುದೇ ಒಂದು ಜನಾಂಗಕ್ಕೆ ಮಾತ್ರ ಸೀಮಿತಗೊಳ್ಳಬಾರದು ಎಂದರು.

ಇದೇ ಸಂದರ್ಭದಲ್ಲಿ ಪ್ರತಿಭಾವಂತ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು. ವಿವಿಧ ಸಮಾಜದ ಮುಖಂಡರಾದ ಸುನೀಲ ದಳವಿ, ಶಿವುಕುಮಾರ ಶಿಂಧೆ, ನಾರಾಯಣ ವೈದ್ಯ, ಗುರುನಾಥ ಉಳ್ಳಿಕಾಶಿ, ಅರುಣ ಶಿರ್ಕೆ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು, ಇತರರು ಉಪಸ್ಥಿತರಿದ್ದರು. ಮಲ್ಲಿಕಾರ್ಜುನ ನಿಟ್ಟೂರ ನಿರೂಪಿಸಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ದೇವೇಗೌಡರು ನಮ್ಮ ಪಕ್ಷದಲ್ಲಿದ್ದರು - ಹುಷಾರು ಅಶೋಕ್, ನೀನೇ ಸತ್ತು ಹೋಗ್ತೀಯ : ಸಿಎಂ
ವಸುಂಧರಾ ಭೂಪತಿ ಸೇರಿ ಐವರಿಗೆ ಸಾಹಿತ್ಯ ಅಕಾಡೆಮಿ ಗೌರವ ಪ್ರಶಸ್ತಿ