ಕನ್ನಡಪ್ರಭ ವಾರ್ತೆ ಕಲಬುರಗಿ
ಸೋಮವಾರ ಇಲ್ಲಿನ ಡಾ.ಎಸ್.ಎಂ.ಪಂಡಿತ ರಂಗಮಂದಿರದಲ್ಲಿ ಕಲಬುರಗಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕøತಿ ಇಲಾಖೆ ಹಾಗೂ ಮಹಾನಗರ ಪಾಲಿಕೆ ಸಂಯುಕ್ತಾಶ್ರಯದಲ್ಲಿ ನಡೆದ ಜಯಂತಿ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು.
ಮರಾಠಾ ಸಮುದಾಯಯ ಬಹುದಿನದ ಬೇಡಿಕೆ 3ಬಿ ದಿಂದ 2ಎ ವರ್ಗಕ್ಕೆ ಸೇರಿಸಬೇಕೆಂಬ ಬೇಡಿಕೆ ನೆನೆಗುದ್ದಿಗೆ ಬಿದ್ದಿದ್ದು, ಮುಖ್ಯಮಂತ್ರಿಗಳು ವರದಿ ಬಹಿರಂಗ ಪಡಿಸಿ ಸಮುದಾಯಕ್ಕೆ ನ್ಯಾಯ ಒದಗಿಸಬೇಕು. ದಾವಣಗೆರೆಯ ಹೊದಗೇರಿಯಲ್ಲಿ ಛತ್ರಪತಿ ಶಿವಾಜಿ ಮಹಾರಾಜರ ತಂದೆ ಶಹಾಜಿ ಮಹಾರಾಜರ ಸಮಾಧಿಯನ್ನು ಪ್ರೇಕ್ಷಣಿಯ ಸ್ಥಳವನ್ನಾಗಿ ಅಭಿವೃದ್ಧಿಪಡಿಸಬೇಕು ಎಂದು ಜಿಲ್ಲಾಡಳಿತ ಮೂಲಕ ಸರ್ಕಾರಕ್ಕೆ ಅವರು ಒತ್ತಾಯಿಸಿದರು.ಬೀದರ ಜಿಲ್ಲೆಯ ಭಾಲ್ಕಿಯ ನ್ಯಾಯವಾದಿ ಸಂದೀಪ ಮಹಾರಾಜ ತೇಲಗಾಂವಕರ ವಿಶೇಷ ಉಪನ್ಯಾಸ ನೀಡುತ್ತಾ, ಛತ್ರಪತಿ ಶಿವಾಜಿ ಇತರೆ ರಾಜರಂತೆ ವೈಭವದ ಜೀವನ ನಡೆಸಿಲ್ಲ. ಬದಲಾಗಿ ತ್ಯಾಗ ಬಲಿದಾನದ ಪ್ರತೀಕವಾಗಿದ್ದರು. ತಾಯಿ ಜೀಜಾಬಾಯಿ ತಂದೆ ಶಹಾಜಿ ಅವರಿಂದ ಉತ್ತಮ ಸಂಸ್ಕಾರ ಪಡೆದ ಶಿವಾಜಿ ಮಹಾರಾಜರು ಮಹಿಳೆಯರನ್ನು ಸಂರಕ್ಷಕರಾಗಿ ಹೊರಹೊಮ್ಮಿದ್ದರು. ಪ್ರತಿಯೊಬ್ಬ ಹಿಂದೂವಿನ ಹೃದಯದಲ್ಲಿ ಹಿಂದೂ ಸಾಮ್ರಾಟ್ ಸ್ಥಾನ ಪಡೆದವರಾಗಿದ್ದಾರೆ ಎಂದರು.
ಭವ್ಯ ಮೆರವಣಿಗೆ:
ಕರ್ನಾಟಕ ಕ್ಷತ್ರಿಯ ಮರಾಠಾ ಪರಿಷತ್ತಿನ ಕಲಬುರಗಿ ಜಿಲ್ಲಾಧ್ಯಕ್ಷ ಆರ್.ಬಿ.ಜಗದಾಳೆ ಅವರ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಐ.ಪಿ.ಎಸ್. ಅಧಿಕಾರಿ ಸ್ನೇಹಬಿಂದುಮಣಿ, ಜಿಲ್ಲಾಧಿಕಾರಿಗಳ ಕಚೇರಿಯ ತಹಶೀಲ್ದಾರ ನಿಸಾರ ಅಹ್ಮದ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ದತ್ತಪ್ಪ ಸಾಗನೂರ, ಜಿಪಂ ಲೆಕ್ಕಾಧಿಕಾರಿ ಸಂತೋಷ, ಖಜಾಂಚಿ ರಮೇಶ ಚಿಂಚಕೋಟಿ, ಛತ್ರಪತಿ ಶಿವಾಜಿ ಮಹಾರಾಜರ ವೇಷಧರಿಸಿದ ಮಹೇಶ ಸೂರ್ಯವಂಶಿ ಸೇರಿದಂತೆ ಸಮಾಜದ ಮುಖಂಡರು, ಸಮುದಾಯ ಬಾಂಧವರು, ಮಹಿಳೆಯರು ಭಾಗವಹಿಸಿದ್ದರು.