ಶಿವಮೊಗ್ಗ: ನೃತ್ಯ ವಿದ್ಯಾರ್ಥಿಗಳಿಂದ ಪಾದಪೂಜೆ ಕಾರ್ಯ

KannadaprabhaNewsNetwork |  
Published : Jul 10, 2025, 01:46 AM IST
ಪೋಟೋ:09ಎಸ್ಎಂಜಿಕೆಪಿ08 | Kannada Prabha

ಸಾರಾಂಶ

ಇತ್ತೀಚೆಗೆ ವಿದ್ಯಾರ್ಥಿಗಳು ಹದಿಹರೆಯದ ವಯಸ್ಸು ದಾಟುತ್ತಿದ್ದಂತೆಯೇ ತಾಯಿ-ತಂದೆ, ಅಣ್ಣ ತಮ್ಮಂದಿರಿಗೆ ಪ್ರೀತಿ ವಿಶ್ವಾಸ, ಗೌರವ ತೋರುವುದು ಕಡಿಮೆಯಾಗುತ್ತಿದೆ ಎಂದು ಸ್ಟೈಲ್ ಡ್ಯಾನ್ಸ್ ಕ್ರಿವ್ ನೃತ್ಯ ಸಂಸ್ಥೆ ಸಂಸ್ಥಾಪಕ ಎನ್. ಶಶಿಕುಮಾರ್ ಹೇಳಿದರು.

ಶಿವಮೊಗ್ಗ: ಇತ್ತೀಚೆಗೆ ವಿದ್ಯಾರ್ಥಿಗಳು ಹದಿಹರೆಯದ ವಯಸ್ಸು ದಾಟುತ್ತಿದ್ದಂತೆಯೇ ತಾಯಿ-ತಂದೆ, ಅಣ್ಣ ತಮ್ಮಂದಿರಿಗೆ ಪ್ರೀತಿ ವಿಶ್ವಾಸ, ಗೌರವ ತೋರುವುದು ಕಡಿಮೆಯಾಗುತ್ತಿದೆ ಎಂದು ಸ್ಟೈಲ್ ಡ್ಯಾನ್ಸ್ ಕ್ರಿವ್ ನೃತ್ಯ ಸಂಸ್ಥೆ ಸಂಸ್ಥಾಪಕ ಎನ್. ಶಶಿಕುಮಾರ್ ಹೇಳಿದರು.

ಅವರು ಗುರುಪೂರ್ಣಿಮೆ ಅಂಗವಾಗಿ ಸ್ಟೈಲ್ ಡ್ಯಾನ್ಸ್ ಕ್ರಿವ್ ನೃತ್ಯ ಸಂಸ್ಥೆ ಆಯೋಜಿಸಿದ್ದ ಪೋಷಕರಿಗೆ ಪಾದಪೂಜೆ ಕಾರ್ಯಕ್ರಮದಲ್ಲಿ ಮಾತನಾಡಿ, ಮಕ್ಕಳಲ್ಲಿ ಸಂಸ್ಕಾರ ಕಡಿಮೆಯಾಗುತ್ತಿದೆ. ಮೌಲ್ಯ, ಸಾಮಾಜಿಕ ಪ್ರಜ್ಞೆ ಇಲ್ಲವಾಗುತ್ತಿದೆ. ಆದ್ದರಿಂದ ಸಂಸ್ಕಾರ, ಸಾಮಾಜಿಕ ಮೌಲ್ಯ ಮತ್ತು ಪ್ರಜ್ಞೆಯನ್ನು ರೂಢಿಸಿಕೊಳ್ಳಬೇಕು ಎಂದರು.

ಇದೇ ಸಂದರ್ಭದಲ್ಲಿ ನೃತ್ಯ ವಿದ್ಯಾರ್ಥಿ ಮನೋಜ್ ಮಾತನಾಡಿ, ನಾವು ಮನೆಯಲ್ಲೇ ಇದ್ದರು ಬರೀ ಓದು, ಮೊಬೈಲ್‌ಗಳಲ್ಲಿ ಕಾಲಕಳೆಯುತ್ತಿದ್ದೇವು. ನಮ್ಮ ನೃತ್ಯ ಸಂಸ್ಥೆ ಆಯೋಜಿಸಿದ್ದ ಪಾದಪೂಜೆ ಕಾರ್ಯಕ್ರಮದಲ್ಲಿ ಭಾಗವಹಿಸಿ ತಂದೆ-ತಾಯಿಯರಿಗೆ ಪಾದಪೂಜೆ ಮಾಡಿದ ನಂತರ ಅವರ ಮೇಲೆ ಗೌರವ ಇನ್ನೂ ಹೆಚ್ಚಾಗಿದೆ ಎಂದರು. ಪಾದಪೂಜೆಯ ನಂತರ ಪೋಷಕರಾದ ಯಶೋಧ ಮಾತನಾಡಿ, ಇತ್ತೀಚಿನ ಕಾಲದಲ್ಲಿ ನಮ್ಮ ಕಲೆ, ಸಂಸ್ಕೃತಿ ನಶಿಸಿ ಹೋಗುತ್ತಿದ್ದು, ಇಂತಹ ಕಾರ್ಯ ಶ್ಲಾಘನೀಯ ಎಂದರು.

ಕಾರ್ಯದಲ್ಲಿ ನೃತ್ಯ ವಿದ್ಯಾರ್ಥಿಗಳ ಪೋಷಕರು, ಸಂಸ್ಥೆಯ ಸಿಬ್ಬಂದಿವರ್ಗ ಸೇರಿದಂತೆ ಹಲವರು ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಮಾದಿಗ ಅಧಿಕಾರಿಗಳು ಜನಾಂಗ ಅಭಿವೃದ್ಧಿ ಚಿಂತಿಸುತ್ತಿಲ್ಲ: ಜಗದೀಶ್
ಸಮೃದ್ಧಿ ಶಿಕ್ಷಣ ಟ್ರಸ್ಟ್ ನಿಂದ ವೃದ್ಧರಿಗೆ ಬೆಡ್ ಶೀಟ್, ಸ್ವೇಟರ್ ವಿತರಣೆ