;Resize=(412,232))
ಭದ್ರಾವತಿ : ಮನೆ ಮಾಲೀಕನ ಮೃತದೇಹ ನೋಡಿ ಆತನ ಪ್ರೀತಿಯ ಶ್ವಾನ ಕೂಡ ಪ್ರಾಣ ಬಿಟ್ಟ ಘಟನೆ ಮನಕುಲಕುವ ಘಟನೆ ಶಿವಮೊಗ್ಗ ಜಿಲ್ಲೆ ಭದ್ರಾವತಿ ನಗರದಲ್ಲಿ ನಡೆದಿದ್ದು ತಡವಾಗಿ ಬೆಳಕಿಗೆ ಬಂದಿದೆ.
ನಗರದ ಜಿಂಕ್ ಲೈನ್ ನಿವಾಸಿ ಲಾರೆನ್ಸ್ (61) ಅವರು ನಾಯಿಯೊಂದನ್ನು ಪ್ರೀತಿಯಿಂದ ಸಾಕಿದ್ದರು. ಆದರೆ ಇತ್ತೀಚೆಗೆ ಲಾರೆನ್ಸ್ ಅವರು ಅನಾರೋಗ್ಯದಿಂದ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದರು. ಇವರ ಮೃತದೇಹವನ್ನು ಮನೆಗೆ ತಂದಾಗ ನೆಚ್ಚಿನ ಮಾಲೀಕನ ಶವ ಕಂಡು ಶವದ ಪಕ್ಕದಲ್ಲೇ ಮಲಗಿ ತೀವ್ರವಾಗಿ ವ್ಯಥೆ ಪಟ್ಟಿತು. ಬಳಿಕ ಶ್ವಾನವು ಅಲ್ಲಿಯೇ ಕೊನೆಯುಸಿರೆಳೆಯಿತು. ಲಾರೆನ್ಸ್ ಅಂತ್ಯಕ್ರಿಯೆ ಬಳಿಕ ಅವರೊಟ್ಟಿಗೆ ಸಾವನ್ನಪ್ಪಿದ ಶ್ವಾನದ ಮೃತದೇಹವನ್ನು ಮನೆಯ ಹಿಂಭಾಗದಲ್ಲಿಯೇ ಮಣ್ಣು ಮಾಡಲಾಗಿದೆ.
ಮನುಷ್ಯರ ಜೊತೆ ಮೂಕ ಪ್ರಾಣಿಗಳು ಸಹ ಬಿಟ್ಟಿರಲಾರದ ಸಂಬಂಧ ಹೊಂದಿರುತ್ತವೆ. ಅದರಲ್ಲೂ ಅವರೊಂದಿಗೆ ಕುಟುಂಬದ ಸದಸ್ಯರಂತೆಯೇ ಬದುಕುತ್ತಿರುತ್ತವೆ ಎಂಬುದಕ್ಕೆ ಈ ಘಟನೆ ಸಾಕ್ಷಿಯಾಗಿದೆ.