ಶಿವಮೂರ್ತಯ್ಯ ಸುರೇಬಾನ ಅಪ್ರತಿಮ ಹೋರಾಟಗಾರ

KannadaprabhaNewsNetwork |  
Published : Jun 28, 2024, 12:55 AM IST
(26ಎನ್.ಆರ್.ಡಿ3 ಉಪನ್ಯಾಶ ಕಾರ್ಯಕ್ರಮದಲ್ಲಿ ಶಿಕ್ಷಕ ವಿನಾಯಕ ಶಾಲದಾರ ಮಾತನಾಡುತ್ತಿದ್ದಾರೆ.) | Kannada Prabha

ಸಾರಾಂಶ

ನರಗುಂದ ತಾಲೂಕಿನ ಭೈರನಹಟ್ಟಿ ಗ್ರಾಮದ ದೊರೆಸ್ವಾಮಿ ವಿರಕ್ತಮಠದಲ್ಲಿ ಏಕೀಕರಣ ಯೋಧರ ಯಶೋಗಾಥೆ-15 ಕಾರ್ಯಕ್ರಮದಲ್ಲಿ ಹೋರಾಟಗಾರ ಶಿವಮೂರ್ತಯ್ಯ ಸುರೇಬಾನ ಅವರ ಕುರಿತು ಶಿಕ್ಷಕ ವಿನಾಯಕ ಶಾಲದಾರ ಉಪನ್ಯಾಸ ನೀಡಿದರು.

ನರಗುಂದ: ಅಪ್ರತಿಮ ಹೋರಾಟಗಾರರು ಶಿವಮೂರ್ತಯ್ಯ ಸುರೇಬಾನ ಅವರ ಚಿಂತನೆಗಳು ಅಜರಾಮರ ಎಂದು ಶಿಕ್ಷಕ ವಿನಾಯಕ ಶಾಲದಾರ ಹೇಳಿದರು.

ಅವರು ತಾಲೂಕಿನ ಭೈರನಹಟ್ಟಿ ಗ್ರಾಮದ ದೊರೆಸ್ವಾಮಿ ವಿರಕ್ತಮಠದಲ್ಲಿ ಕನ್ನಡ ಸಾಹಿತ್ಯ ಮತ್ತು ಸಾಂಸ್ಕೃತಿಕ ವೇದಿಕೆ ಆಶ್ರಯದಲ್ಲಿ ಹಮ್ಮಿಕೊಂಡಿದ್ದ ಏಕೀಕರಣ ಯೋಧರ ಯಶೋಗಾಥೆ-15 ಕಾರ್ಯಕ್ರಮದಲ್ಲಿ ಹೋರಾಟಗಾರ ಶಿವಮೂರ್ತಯ್ಯ ಸುರೇಬಾನ ಅವರ ಕುರಿತು ಉಪನ್ಯಾಸ ನೀಡಿದರು. ತಮ್ಮ ಬದುಕಿನುದ್ದಕ್ಕೂ ಹೋರಾಟವನ್ನೇ ಉಸಿರಾಗಿಸಿಕೊಂಡಿದ್ದ ಶಿವಮೂರ್ತಯ್ಯ ಸುರೇಬಾನ ಅವರು ಕರ್ನಾಟಕ ಏಕೀಕರಣ ಹೋರಾಟದಲ್ಲಿ ಸಕ್ರಿಯವಾಗಿ ಪಾಲ್ಗೊಂಡಿದ್ದರು. ಮಹಾಜನ ವರದಿಯಂತೆ ಬೆಳಗಾವಿ ಕರ್ನಾಟಕದ ಅವಿಭಾಜ್ಯ ಅಂಗವೆಂದು ಘಲಾಚ ಪಾಹಿಜಿ ಚಳವಳಿ ವಿರುದ್ಧ ನರಗುಂದದಲ್ಲಿ ಬಂದ್ ಆಚರಿಸಿ ಬೆಳಗಾವಿ ಎಂದೆಂದೂ ಕರ್ನಾಟಕದ್ದೆ ಎಂದಿದ್ದರು ಎಂದು ಸ್ಮರಿಸಿದರು.

ಭಾರತೀಯ ಸೇನೆಯಲ್ಲಿ ಯೋಧರಾಗಿದ್ದ ಶಿವಮೂರ್ತಯ್ಯನವರು ನಿವೃತ್ತಿಯ ಆನಂತರ ಅಳವಂಡಿ ಶಿವಮೂರ್ತಿಸ್ವಾಮಿಗಳ ಅನುಯಾಯಿಗಳಾಗಿ ಅವರ ಪ್ರಭಾವದಿಂದ ಹುಬ್ಬಳ್ಳಿ ಗಲಭೆ ಮತ್ತು ತುಂಗಭದ್ರಾ ನದಿ ನೀರು ಹೋರಾಟದ ಮೂಲಕ ಕರ್ನಾಟಕ ಏಕೀಕರಣ ಚಳವಳಿಯಲ್ಲಿ ಪಾಲ್ಗೊಂಡಿದ್ದ ಅವರ ಪಾತ್ರ ಹಿರಿದಾದುದು ಎಂದು ಅವರು ಹೇಳಿದರು.

ಸಾನ್ನಿಧ್ಯ ವಹಿಸಿದ್ದ ಶಾಂತಲಿಂಗ ಶ್ರೀಗಳು ತಮ್ಮ ಆಶೀರ್ವಚನ ಮೂಲಕ ಈ ಭಾಗದಲ್ಲಿ ಹೋರಾಟಕ್ಕೆ ಇನ್ನೊಂದು ಹೆಸರೆ ಶಿವಮೂರ್ತಯ್ಯನವರು. ಸಾಮಾಜಿಕ ಜೀವಿಗಳಾಗಿದ್ದ ಅವರು ಪ್ರತಿಯೊಂದು ಹೋರಾಟದಲ್ಲೂ ಮುಂಚೂಣಿಯಲ್ಲಿರುತ್ತಿದ್ದರು. 1980ರಲ್ಲಿ ರೈತರ ವಿವಿಧ ಬೇಡಿಕೆಗಳಿಗಾಗಿ ನಡೆದ ಹೋರಾಟದಲ್ಲಿ ಸಕ್ರಿಯರಾಗಿದ್ದ ಶಿವಮೂರ್ತಯ್ಯನವರು ಎರಡನೇ ಮಹಾಯುದ್ಧದಲ್ಲಿ ಸೈನಿಕರಾಗಿ ಸೇವೆ ಸಲ್ಲಿಸಿದ್ದರು. ಅವರು ಅಪ್ರತಿಮ ದೇಶಾಭಿಮಾನಿ ಹಾಗೂ ನಾಡಿಭಿಮಾನಿಗಳಾಗಿದ್ದರು. ಶಿವಮೂರ್ತಯ್ಯನವರ ಹೋರಾಟದ ಬದುಕು ಇಂದಿನ ಯುವ ಪೀಳಿಗೆಗೆ ಮಾದರಿಯಾಗಿದೆ. ಏಕೀಕರಣ ಪ್ರಶಸ್ತಿ ಪಡೆದ ಅವರು ಬಂಡಾಯದ ನಾಡಿನ ತಾಯಿ ಕನ್ನಡಾಂಭೆಯ ಹೆಮ್ಮೆಯ ಪುತ್ರರಾಗಿದ್ದರು ಎಂದು ಹೇಳಿದರು.

ಮಹೇಶ್ವರಯ್ಯ ಸುರೇಬಾನ ಪ್ರಾಸ್ತಾವಿಕವಾಗಿ ಮಾತನಾಡಿದರು. ತಿಮ್ಮಣ್ಣ ಆನೇಗುಂದಿ, ಡಾ. ಬಿ.ಎಸ್. ಕೋನನ್ನವರ, ಮಲ್ಲಪ್ಪ ಅರೇಬೆಂಚಿ, ನಿವೃತ್ತ ಮುಖ್ಯೋಪಾಧ್ಯಾಯ ವೀರಯ್ಯ ಸಾಲಿಮಠ, ಈರಣ್ಣ ಐನಾಪುರ, ಮಹಾಂತೇಶ ಹಿರೇಮಠ ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಜೈಲಲ್ಲೂ ದರ್ಶನ್‌ಗೆ ‘ಅಭಿಮಾನಿಗಳು’ ಕಾಟ!
ನಾಳೆ ಹಲವು ಸಾಧಕರಿಗೆ ಗಾಂಧಿ ಪುರಸ್ಕಾರ ಪ್ರದಾನ