ತಂದೆಯಂತೆ ಮಾರ್ಗದರ್ಶನ ನೀಡುತ್ತಿದ್ದ ಶಿವಶಂಕರಪ್ಪ: ಸಚಿವ ತಿಮ್ಮಾಪೂರ

KannadaprabhaNewsNetwork |  
Published : Dec 16, 2025, 03:00 AM IST
ಪೊಟೋ ಡಿ.15ಎಂಡಿಎಲ್ 1. ಸಚಿವ ಆರ್.ಬಿ.ತಿಮ್ಮಾಪೂರ ಅವರು ಇತ್ತೀಚೆಗೆ ಆಸ್ಪತ್ರೆಗೆ ಭೇಟಿ ನೀಡಿ ಶಾಮನೂರು ಶಿವಶಂಕರಪ್ಪನವರನ್ನು ಭೇಟಿ ಮಾಡಿ ಆರೋಗ್ಯ ವಿಚಾರಿಸಿ, ಗುಣಮುಖರಾಗಿರಿ ಎಂದು ಶುಭ ಹಾರೈಸಿದ್ದರು. | Kannada Prabha

ಸಾರಾಂಶ

ಕಾಂಗ್ರೆಸ್ ಪಕ್ಷದ ಹಿರಿಯ ಮುಖಂಡರು, ಹಿರಿಯ ಕಾಂಗ್ರೆಸ್ ಪಕ್ಷದ ಶಾಸಕರು, ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭೆಯ ರಾಷ್ಟ್ರೀಯ ಅಧ್ಯಕ್ಷರು ಹಾಗೂ ಮಾಜಿ ಸಚಿವರಾದ ಶಾಮನೂರ ಶಿವಶಂಕರಪ್ಪನವರ ನಿಧನದಿಂದ ನಾಡಿನ ಜನತೆಗೆ ತುಂಬಲಾರದ ನಷ್ಟವಾಗಿದೆ, ಭಗವಂತ ಮೃತರ ಆತ್ಮಕ್ಕೆ ಚಿರಶಾಂತಿ ನೀಡಲಿ, ದುಃಖಿತ ಕುಟುಂಬಕ್ಕೆ ಮತ್ತು ಅಪಾರ ಅಭಿಮಾನಿಗಳಿಗೆ ಈ ದುಃಖ ಭರಿಸುವ ಶಕ್ತಿ ಸಿಗಲಿ ಎಂದು ದೇವರಲ್ಲಿ ಪ್ರಾರ್ಥಿಸುವ ದಾಗಿ ಅಬಕಾರಿ ಹಾಗೂ ಬಾಗಲಕೋಟೆ ಜಿಲ್ಲಾ ಉಸ್ತುವಾರಿ ಸಚಿವ ಆರ್.ಬಿ. ತಿಮ್ಮಾಪೂರ ತಿಳಿಸಿದ್ದಾರೆ.

ಕನ್ನಡಪ್ರಭ ವಾರ್ತೆ ಮುಧೋಳ

ಕಾಂಗ್ರೆಸ್ ಪಕ್ಷದ ಹಿರಿಯ ಮುಖಂಡರು, ಹಿರಿಯ ಕಾಂಗ್ರೆಸ್ ಪಕ್ಷದ ಶಾಸಕರು, ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭೆಯ ರಾಷ್ಟ್ರೀಯ ಅಧ್ಯಕ್ಷರು ಹಾಗೂ ಮಾಜಿ ಸಚಿವರಾದ ಶಾಮನೂರ ಶಿವಶಂಕರಪ್ಪನವರ ನಿಧನದಿಂದ ನಾಡಿನ ಜನತೆಗೆ ತುಂಬಲಾರದ ನಷ್ಟವಾಗಿದೆ, ಭಗವಂತ ಮೃತರ ಆತ್ಮಕ್ಕೆ ಚಿರಶಾಂತಿ ನೀಡಲಿ, ದುಃಖಿತ ಕುಟುಂಬಕ್ಕೆ ಮತ್ತು ಅಪಾರ ಅಭಿಮಾನಿಗಳಿಗೆ ಈ ದುಃಖ ಭರಿಸುವ ಶಕ್ತಿ ಸಿಗಲಿ ಎಂದು ದೇವರಲ್ಲಿ ಪ್ರಾರ್ಥಿಸುವ ದಾಗಿ ಅಬಕಾರಿ ಹಾಗೂ ಬಾಗಲಕೋಟೆ ಜಿಲ್ಲಾ ಉಸ್ತುವಾರಿ ಸಚಿವ ಆರ್.ಬಿ. ತಿಮ್ಮಾಪೂರ ತಿಳಿಸಿದ್ದಾರೆ.

ಈ ಕುರಿತು ಕನ್ನಡಪ್ರಭ ಪತ್ರಿಕೆಯೊಂದಿಗೆ ಮಾತನಾಡಿ, ಶಾಮನೂರು ಶಿವಶಂಕರಪ್ಪನವರ ನಿಧನ ನನಗೆ ಅತೀವ ದುಃಖ ತಂದಿದೆ. ಇತ್ತೀಚೆಗೆ ನಾನು ಆಸ್ಪತ್ರೆಗೆ ಭೇಟಿ ನೀಡಿ ಅವರ ಆರೋಗ್ಯ ವಿಚಾರಿಸಿ ಶೀಘ್ರ ಗುಣಮುಖರಾಗುವಂತೆ ಹಾರೈಸಿದ್ದೆ. ನನ್ನೊಂದಿಗೆ ಬಹಳ ಆತ್ಮೀಯರಾಗಿದ್ದ ಶಿವಶಂಕರಪ್ಪರವರು ಪ್ರತಿಯೊಂದು ವಿಚಾರದಲ್ಲೂ ತಂದೆಯಂತೆ ಮಾರ್ಗದರ್ಶನ ನೀಡುತ್ತಿದ್ದರು. ಇಳಿಯ ವಯಸ್ಸಿನಲ್ಲೂ ಅವರ ಜೀವನೋತ್ಸವ ಎಲ್ಲರಿಗೂ ಮಾದರಿಯಾಗಿತ್ತು, ಅವರ ಸಾರ್ಥಕ ಬದುಕು ಎಲ್ಲರಿಗೂ ಪ್ರೇರಣೆ ಮತ್ತು ಅನುಕರಣೀಯವಾಗಿದೆ ಎಂದು ಹೇಳಿದ್ದಾರೆ.

ನಾಡು ಕಂಡ ಅತ್ಯಂತ ಮುತ್ಸದ್ಧಿರಾಜಕಾರಿಣಿ, ಕಲಿತದ್ದು ಕೇವಲ ಹತ್ತನೇ ತರಗತಿಯಾದರೂ ಹೊತ್ತದ್ದು ರಾಜ್ಯಭಾರ. ಅನೇಕ ಉದ್ಯಮಗಳ ಸೃಷ್ಟಿ ಮಾಡುವ ಮೂಲಕ ರಾಜ್ಯದ ಕಲಿತ ಯುವಕರಿಗೆ ಉದ್ಯೋಗ ನೀಡಿ ಬಾಳಿಗೆ ದಾರಿದೀಪವಾಗಿದ್ದರು. ಕಾಂಗ್ರೆಸ್ ಪಕ್ಷ ಪಕ್ಷ ಬಿರುಕು ಬಿಡದ ನಿಟ್ಟಿನಲ್ಲಿ ಸಲಹೆ ಸೂಚನೆಗಳನ್ನ ನೀಡುತ್ತ, ತಾವೂ ಪಕ್ಷಾಂತರ ಮಾಡದೇ ಎಲ್ಲ ಪಕ್ಷದವರ ಜೊತೆಯಲ್ಲಿಯೂ ಪ್ರೀತಿ ವಾತ್ಸಲ್ಯದಿಂದ ಇದ್ದು ಅಜಾತಶತ್ರು ಎನಿಸಿಕೊಂಡಿದ್ದರು. ರಾಜ್ಯಕಂಡ ಪ್ರೇಮಮಯಿ ನಂದಾದೀಪ ನಂದಿಹೋದದ್ದು ಎಲ್ಲರಿಗೂ ದುಃಖವನ್ನ ತಂದಿದೆ. ರಾಜ್ಯದ ಪಕ್ಷಾತೀತ ಹಾಗೂ ಜಾತ್ಯಾತೀತವಾಗಿ ಎಲ್ಲ ಅಭಿಮಾನಿ ಬಳಗಕ್ಕೂ ಅವರ ಕುಟುಂಬಕ್ಕೂ ದು:ಖ ಸಹಿಸುವ ಶಕ್ತಿಯನ್ನ ಕರುಣಿಸಲೆಂದು ಪ್ರಾರ್ಥಿಸುವೆ ಎಂದು ತಮ್ಮ ಶೋಕ ಸಂದೇಶದಲ್ಲಿ ತಿಳಿಸಿದ್ದಾರೆ.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಮಾನಸಿಕ ಖಿನ್ನತೆ ಸ್ವಯಂ ಮೌಲ್ಯಮಾಪನಕ್ಕೆ ನಿಮ್ಹಾನ್ಸ್‌ ಆ್ಯಪ್‌
ಒಂದೇ ದಿನ ಜಡ್ಜ್‌ ಮುಂದೆ 60 ಪರೋಲ್‌ ಅರ್ಜಿ!