ಕನ್ನಡಪ್ರಭ ವಾರ್ತೆ ಬಸವನಬಾಗೇವಾಡಿ
ಬೆಳಗ್ಗೆ ಅಗ್ನಿಪುಟಿ ಮಾಡುವ ಕಾರ್ಯಕ್ರಮ ಜರುಗಿತು. ನಂತರ ಎತ್ತಿನ ಬಂಡಿಯಲ್ಲಿ ಶಿವಪ್ಪ ಮುತ್ಯಾರವರ ಭಾವಚಿತ್ರ ಮೆರವಣಿಗೆ ಸಕಲ ವಾದ್ಯವೈಭವದೊಂದಿಗೆ ಬಸವ ತೀರ್ಥದಲ್ಲಿ ಪಲ್ಲಕ್ಕಿ ಉತ್ಸವದೊಂದಿಗೆ ಗಂಗಾಸ್ಥಳ ಮುಗಿಸಿ ಪುರವಂತರ ಸೇವೆಯೊಂದಿಗೆ ಬಸವೇಶ್ವರ ದೇವಸ್ಥಾನಕ್ಕೆ ತೆರಳಿ ಅಲ್ಲಿಂದ ವಾದ್ಯಮೇಳದೊಂದಿಗೆ, ಸುಮಂಗಲೆಯರ ಕುಂಭ ಮೇಳದೊಂದಿಗೆ ಪಟ್ಟಣದ ಪ್ರಮುಖ ಬೀದಿಗಳಲ್ಲಿ ಸಂಚರಿಸಿ ಗುರಸಂಗಪ್ಪ ಕೋಣಿನ ಅವರ ತೋಟಕ್ಕೆ ಪಲ್ಲಕ್ಕಿ ಉತ್ಸವ ಮರಳಿತು.
ಕರ್ತೃಗದ್ದುಗೆಗೆ ಕುಂಭಾಭಿಷೇಕ, ಮಹಾಪೂಜೆ ನೆರವೇರಿದ ನಂತರ ಶಿವಯೋಗೇಶ್ವರ ದೇವಸ್ಥಾನದ ಮುಂಭಾಗ ಭಕ್ತರು ಪಲ್ಲಕ್ಕಿಯೊಂದಿಗೆ ಅಗ್ನಿ ಹಾಯ್ದರು. ಭಕ್ತರಿಗೆ ಅನ್ನಪ್ರಸಾದ ವ್ಯವಸ್ಥೆ ಮಾಡಲಾಗಿತ್ತು. ಪಟ್ಟಣ ಸೇರಿದಂತೆ ವಿವಿಧ ಗ್ರಾಮಗಳಿಂದ ಆಗಮಿಸಿದ ಭಕ್ತರು ಶಿವಯೋಗೇಶ್ವರ ದೇವಸ್ಥಾನದಲ್ಲಿ ಪೂಜೆ, ಇತರೆ ಕಾರ್ಯಕ್ರಮಗಳಲ್ಲಿ ಭಾಗವಹಿಸಿ ಮುತ್ಯಾರವರ ದರ್ಶನ ಪಡೆದು ಕೃತಾರ್ಥರಾದರು.ರಾತ್ರಿ ನಿಡೋಣಿಯ ಬೀರಲಿಂಗೇಶ್ವರ ಡೊಳ್ಳಿನ ಸಂಘ ಹಾಗೂ ನಾಗೂರಿನ ಅಮೋಘಸಿದ್ದೇಶ್ವರ ಡೊಳ್ಳಿನ ಸಂಘದಿಂದ ಡೊಳ್ಳಿನ ಪದಗಳು ಜರುಗಿದವು.