ನಿಗಮ ಮಂಡಳಿಗೆ ಶಿವಲೀಲಾ ಕುಲಕರ್ಣಿ ನೇಮಕ

KannadaprabhaNewsNetwork |  
Published : Sep 25, 2025, 01:00 AM IST
ಶಿವಲೀಲಾ ಕುಲಕರ್ಣಿ | Kannada Prabha

ಸಾರಾಂಶ

ಅಖಿಲ ಭಾರತ ಕಾಂಗ್ರೆಸ್‌ ಸಮಿತಿ ವಿವಿಧ ನಿಗಮ ಮಂಡಳಿಗಳಿಗೆ ನೇಮಕ ಮಾಡಿ ಪಟ್ಟಿಯನ್ನು ಬುಧವಾರ ಬಿಡುಗಡೆ ಮಾಡಿದ್ದು, ಶಿವಲೀಲಾ ಕುಲಕರ್ಣಿ ಹೆಸರು ಇದೆ. ರಾಜ್ಯ ಸರ್ಕಾರ ಈ ಕುರಿತಾಗಿ ಸೆ. 25ರಂದು ಆದೇಶ ಮಾಡುವ ಸಾಧ್ಯತೆಗಳಿವೆ.

ಧಾರವಾಡ:

ಜಿಪಂ ಸದಸ್ಯ ಯೋಗೀಶಗೌಡ ಗೌಡರ ಕೊಲೆ ಪ್ರಕರಣದಲ್ಲಿ ಜಾಮೀನು ರದ್ದಾದ ಹಿನ್ನೆಲೆಯಲ್ಲಿ ವಿನಯ ಕುಲಕರ್ಣಿ ರಾಜೀನಾಮೆ ನೀಡಿದ್ದ ರಾಜ್ಯ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿಗೆ ಅವರ ಪತ್ನಿ ಶಿವಲೀಲಾ ಕುಲಕರ್ಣಿ ಹೆಸರನ್ನು ಅಂತಿಮಗೊಳಲಾಗಿದೆ.

ಅಖಿಲ ಭಾರತ ಕಾಂಗ್ರೆಸ್‌ ಸಮಿತಿ ವಿವಿಧ ನಿಗಮ ಮಂಡಳಿಗಳಿಗೆ ನೇಮಕ ಮಾಡಿ ಪಟ್ಟಿಯನ್ನು ಬುಧವಾರ ಬಿಡುಗಡೆ ಮಾಡಿದ್ದು, ಶಿವಲೀಲಾ ಕುಲಕರ್ಣಿ ಹೆಸರು ಇದೆ. ರಾಜ್ಯ ಸರ್ಕಾರ ಈ ಕುರಿತಾಗಿ ಸೆ. 25ರಂದು ಆದೇಶ ಮಾಡುವ ಸಾಧ್ಯತೆಗಳಿವೆ.

ವಿನಯ ಕುಲಕರ್ಣಿ ಅವರು ಕೊಲೆ ಪ್ರಕರಣದಲ್ಲಿ ಕ್ಷೇತ್ರಕ್ಕೆ ಬರುವಂತಿಲ್ಲ. ಜೊತೆಗೆ ಇತ್ತೀಚೆಗೆ ಅವರ ಜಾಮೀನು ಸಹ ರದ್ದಾಗಿದ್ದರಿಂದ ನಿಗಮ ಮಂಡಳಿಗೂ ರಾಜೀನಾಮೆ ನೀಡಿದ್ದರು. ಇದಕ್ಕಿಂತ ಪ್ರಮುಖವಾಗಿ ಕ್ಷೇತ್ರದಲ್ಲಿ ಆಡಳಿತ ನಿರ್ವಹಣೆ ಕಷ್ಟವಾಗಿತ್ತು. ಕೆಲವು ಸಂದರ್ಭಗಳಲ್ಲಿ ಅಭಿವೃದ್ಧಿ ಕಾಮಗಾರಿಗಳಿಗೆ ಶಿವಲೀಲಾ ಕುಲಕರ್ಣಿ ಅವರು ಚಾಲನೆ ನೀಡಿದ್ದನ್ನು ಬಿಜೆಪಿ ವಿವಾದ ಸಹ ಮಾಡಿತ್ತು. ಸಂವಿಧಾನಾತ್ಮಕ ಯಾವುದೇ ಹುದ್ದೆ ಇಲ್ಲದೇ ಅವರು ಭೂಮಿ ಪೂಜೆ ಅಂತಹ ಕಾರ್ಯಗಳನ್ನೇಕೆ ಮಾಡಬೇಕೆಂದು ಪ್ರಶ್ನಿಸಲಾಗಿತ್ತು. ಇದೀಗ ನಿಗಮ ಮಂಡಳಿಗೆ ನೇಮಕವಾಗುವುದರಿಂದ ಕ್ಷೇತ್ರದಲ್ಲಿ ಸಂಚರಿಸಿ ವಿವಿಧ ಕಾಮಗಾರಿಗಳಲ್ಲಿ ಭಾಗವಹಿಸಿ ಆಡಳಿತ ಸಹ ಗಮನಿಸಲು ಅವಕಾಶ ದೊರೆತಂತಾಗಲಿದೆ.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಸಹಕಾರದಿಂದ ಸಮೃದ್ಧಿ - ಸಹಕಾರ ಭಾರತಿಯಿಂದ ಸಹಕಾರ ಕ್ಷೇತ್ರದ ಬಲವರ್ಧನೆ
ದ್ವೇಷಭಾಷಣ ಬಿಲ್‌ಗೆ ಸಹಿ ಬೇಡ : ಗೌರ್ನರ್‌ಗೆ ಬಿಜೆಪಿ