ಮುಂಡಗೋಡ: ಪಟ್ಟಣ ಪಂಚಾಯಿತಿ ಸ್ಥಾಯಿ ಸಮಿತಿ ಅಧ್ಯಕ್ಷರಾಗಿ ಶಿವರಾಜ ಸುಬ್ಬಾಯವರ ಮಂಗಳವಾರ ಅವಿರೋಧವಾಗಿ ಆಯ್ಕೆಯಾದರು.ಹಲವು ತಿಂಗಳುಗಳಿಂದ ನನೆಗುದಿಗೆ ಬಿದ್ದಿದ್ದ ಪಪಂ ಸ್ಥಾಯಿ ಸಮಿತಿ ಅಧ್ಯಕ್ಷ ಸ್ಥಾನಕ್ಕೆ ಮಂಗಳವಾರ ಸಭೆ ನಿಗದಿಪಡಿಸಿ ಚುನಾವಣೆ ನಡಸಲಾಯಿತು.
ಅಧಿವೇಶನದಲ್ಲಿ ಮರಳಿನ ಸಮಸ್ಯೆಗೆ ಧ್ವನಿ ಎತ್ತಬೇಕು: ಭಾಸ್ಕರ
ಕಾರವಾರ: ಜಿಲ್ಲೆಯಲ್ಲಿ ಮರಳಿನ ಸಮಸ್ಯೆ ಜನರನ್ನು ಕಾಡುತ್ತಿದೆ. ದುಪ್ಪಟ್ಟು ಹಣ ನೀಡಿ ಖರೀದಿಸುವ ಅನಿವಾರ್ಯತೆ ಎದುರಾಗಿದೆ. ಬೆಳಗಾವಿಯಲ್ಲಿ ಅಧಿವೇಶ ನಡೆಯುತ್ತಿದ್ದು, ಅಲ್ಲಿ ಜಿಲ್ಲೆಯ ಎಲ್ಲ ಶಾಸಕರು ಮರಳಿನ ಸಮಸ್ಯೆ ಬಗ್ಗೆ ಮಾತನಾಡಿ ಸರ್ಕಾರದ ಗಮನ ಸೆಳೆಯಬೇಕು ಎಂದು ಕರ್ನಾಟಕ ರಕ್ಷಣಾ ವೇದಿಕೆಯ ಜಿಲ್ಲಾಧ್ಯಕ್ಷ ಭಾಸ್ಕರ ಪಟಗಾರ ಆಗ್ರಹಿಸಿದರು.ನಗರದಲ್ಲಿ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಕೆಲವರಿಗೆ ಮರಳುಗಾರಿಕೆಗೆ ಅವಕಾಶ ಸಿಕ್ಕಿಲ್ಲ ಎನ್ನುವ ಕಾರಣಕ್ಕೆ ನ್ಯಾಯಾಲಯದ ಮೊರೆ ಹೋಗಿದ್ದಾರೆ ಎನ್ನುವ ಮಾಹಿತಿಯಿದೆ. ಈ ರೀತಿ ಮಾಡುವುದರಿಂದ ಮಧ್ಯಮ, ಬಡ ವರ್ಗದವರಿಗೆ ಸಾಕಷ್ಟು ಆರ್ಥಿಕವಾಗಿ ತೊಂದರೆಯಾಗುತ್ತಿದೆ. ಅದನ್ನು ನ್ಯಾಯಾಲಯಕ್ಕೆ ಹೋದವರು ಅರಿತುಕೊಳ್ಳಬೇಕು. ಮರಳು ಸಿಗದೇ ಪರದಾಡುವಂತಾಗಿದ್ದು, ಕಟ್ಟಡ ಕೆಲಸಗಳು ನಿಂತಿವೆ. ಜಿಲ್ಲೆಯ ಎಲ್ಲ ಶಾಸಕರು ಚಳಿಗಾಲದ ಅಧಿವೇಶನದಲ್ಲಿ ಮರಳು ಸಿಗದೇ ತೊಂದರೆಯಾದ ಬಗ್ಗೆ ಧ್ವನಿ ಎತ್ತಬೇಕು. ಮರಳಿನ ಸಮಸ್ಯೆಯನ್ನು ಬಗೆಹರಿಸಬೇಕು ಎಂದು ಒತ್ತಾಯಿಸಿದರು. ರಂಜನ್ ದೇವಾಡಿಗ, ಸಂತೋಷ ಮುರುಡೇಶ್ವರ ಇದ್ದರು.