ಶಿವಮೊಗ್ಗ : ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ಹಾಗೂ ಗ್ರಾಮೀಣಾಭಿವೃದ್ಧಿ ಸಚಿವ ಶಿವರಾಜ್ ಸಿಂಗ್ ಚೌಹಾಣ್ ಅವರು ಜ.18 ರಂದು ಶಿವಮೊಗ್ಗ ಜಿಲ್ಲೆಗೆ ಆಗಮಿಸಲಿದ್ದಾರೆ ಎಂದು ಸಂಸದ ಬಿ.ವೈ.ರಾಘವೇಂದ್ರ ತಿಳಿಸಿದರು.
ಸಮಾವೇಶದಲ್ಲಿ ಅಡಕೆ ಬೆಳೆಗಾರರ ಪ್ರಮುಖ ಉದ್ದೇಶಗಳಾದ ವಿದೇಶಿ ಅಡಕೆ ಆಮದು ನಿಯಂತ್ರಣ, ಅಡಕೆಗೆ ಬರುವ ರೋಗಬಾಧೆ ಪರಿಹಾರಕ್ಕೆ ಕ್ರಮ, ವನ್ಯಜೀವಿಗಳ ಹಾವಳಿ ತಡೆಗಟ್ಟುವಂತೆ, ಅಡಕೆ ಬೆಳೆಗಾರರ ಸೊಪ್ಪಿನ ಬೆಟ್ಟದ ಸಮಸ್ಯೆ ಪರಿಹಾರ ಹಾಗೂ ರಾಷ್ಟ್ರೀಯ ಅಡಕೆ ಮಂಡಳಿ ರಚನೆಗೆ ಒತ್ತಾಯಿಸಲಾಗುವುದು ಎಂದು ತಿಳಿಸಿದರು.
ವರ್ಲ್ಡ್ ಹೆಲ್ತ್ ಆರ್ಗನೈಸೇಷನ್ ನೀಡಿದ್ದ ಅಡಕೆ ಹಾನಿಕಾರಕ ಎನ್ನುವ ವರದಿಯಲ್ಲಿ ಸಿಗರೇಟ್ ಲಾಬಿಗಳಿಂದ ಈ ವರದಿ ಹೊರಗೆ ಬಂದಿರುವ ಶಂಕೆ ಇದೆ. ಹಾಗಾಗಿ ನುರಿತ ತಜ್ಞರ ತಂಡ ರಚಿಸಿ, ಅದಕ್ಕೆ ಒಂದು ಬಜೆಟ್ ನೀಡಿ, ಸರಿಯಾದ ರೀತಿಯಲ್ಲಿ ತನಿಖೆ ನಡೆಸಲು ಸಚಿವರಲ್ಲಿ ಮನವಿ ಮಾಡಲಾಗುವುದು ಎಂದರು.ವಂಶ ಪಾರಂಪರಿಕ ಬೆಳೆಯಾದ ಅಡಕೆಯು ಎಲೆ ಚುಕ್ಕೆ ರೋಗದಿಂದ ತುಂಬಾ ದೊಡ್ಡ ರೀತಿಯಲ್ಲಿ ಸಮಸ್ಯೆಯನ್ನು ಎದುರಿಸುತ್ತಿದ್ದೇವೆ. ಈ ಒಂದು ರೋಗದಿಂದ ಮಲೆನಾಡು ಭಾಗದಲ್ಲಿ ಸುಮಾರು 226 ಕೋಟಿ ರು. ನಷ್ಟವಾಗಿದೆ. ಇದಕ್ಕೆ ಕೇಂದ್ರದಿಂದ ಪರಿಹಾರದ ರೂಪದಲ್ಲಿ ಹಣ ನೀಡಲು ಒತ್ತಾಯಿಸಲಾಗಿತ್ತು. ಕೇಂದ್ರದಿಂದ ಅನುದಾನ ನೀಡುವುದರ ಮೂಲಕ ರೈತರ ಕಣ್ಣೀರನ್ನು ಒರೆಸಬೇಕು ಎಂದರು.
ಮುಂದಿನ ದಿನಗಳಲ್ಲಿ ಭತ್ತಕ್ಕೆ ಹೆಚ್ಚಿನ ಒತ್ತು ನೀಡಬೇಕು ಎಂದ ಅವರು, ಮಲೆನಾಡು ಅಡಿಕೆ ಸಂಶೋಧನಾ ಕೇಂದ್ರಕ್ಕೆ ಕಳೆದ ಬಾರಿ ಬಸವರಾಜ ಬೊಮ್ಮಾಯಿ ಅವಧಿಯಲ್ಲಿ 10 ಕೋಟಿ ರು. ಅನುದಾನ ಮೀಸಲಿಡಲಾಗಿತ್ತು. ಅಷ್ಟರಲ್ಲಿ ಸರ್ಕಾರ ಬದಲಾಯಿತು. ಸಮಾವೇಶಕ್ಕೆ ಜಿಲ್ಲೆಯ ರೈತರು ದೊಡ್ಡ ಸಂಖ್ಯೆಯಲ್ಲಿ ಆಗಮಿಸಬೇಕು. ರೈತರ ಕೂಗನ್ನು ಮಂತ್ರಿಗಳಿಗೆ ಮುಟ್ಟಿಸುವ ಅವಕಾಶ ಇದೆ ಎಂದರು.
ಸುದ್ದಿಗೋಷ್ಠಿಯಲ್ಲಿ ಹರತಾಳು ಹಾಲಪ್ಪ, ಟಿ.ಡಿ.ಮೇಘರಾಜ, ಹಕ್ರೆ ಮಲ್ಲಿಕಾರ್ಜುನ್, ವಿನ್ಸೆಂಟ್ ರೋಡ್ರಿಗಸ್, ಕೆ.ವಿ. ಅಣ್ಣಪ್ಪ ಉಪಸ್ಥಿತರಿದ್ದರು.ರಾಜ್ಯಾಧ್ಯಕ್ಷರಾಗಿ ಬಿವೈವಿ ಉತ್ತಮ ಕಾರ್ಯನಿರ್ವಹಣೆ
ಶಿವಮೊಗ್ಗ: ರಾಜ್ಯಾಧ್ಯಕ್ಷ ಬದಲಾವಣೆ ಪಕ್ಷದ ವೇದಿಕೆಯಲ್ಲಿ ಚರ್ಚೆ ಆಗುವ ವಿಷಯ ಎಂದು ಸಂಸದ ಬಿ.ವೈ.ರಾಘವೇಂದ್ರ ಹೇಳಿದರು.ಬಿ.ವೈ.ವಿಜಯೇಂದ್ರ ಅವರು ರಾಜ್ಯಧ್ಯಕ್ಷರಾದ ಬಳಿಕ ಉತ್ತಮವಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಪಕ್ಷ ಸಂಟನೆಯನ್ನು ಯಶಸ್ವಿಯಾಗಿ ಮಾಡುತ್ತಿದ್ದಾರೆ. ಪಕ್ಷದಲ್ಲಿದ್ದ ಅನೇಕ ಗೊಂದಲಗಳು ಈಗ ಸರಿಯಾಗುತ್ತಿವೆ ಎಂದು ರಾಜ್ಯಾಧ್ಯಕ್ಷರ ಬದಲಾವಣೆ ಕುರಿತು ಪ್ರತಿಕ್ರಿಯೆ ನೀಡಿದರು.