ಸಿಜೆಐಗೆ ಶೂ ಎಸೆತ: 16ಕ್ಕೆ ಜಿಲ್ಲಾ ಕೇಂದ್ರ ಬಂದ್‌ಗೆ ಕರೆ

KannadaprabhaNewsNetwork |  
Published : Oct 09, 2025, 02:01 AM IST
ನ್ಯಾಯಾಧೀಶರಿಗೆ ಅವಮಾನ ಅ.16ರಂದು ಅಹಿಂದ ವರ್ಗದಿಂದ ವಿಜಯಪುರ ಬಂದ್ | Kannada Prabha

ಸಾರಾಂಶ

ಕನ್ನಡಪ್ರಭ ವಾರ್ತೆ ವಿಜಯಪುರ ದೇಶದ ಇತಿಹಾಸದಲ್ಲೇ ಸುಪ್ರೀಂ ಕೋರ್ಟ್‌ ಮುಖ್ಯನ್ಯಾಯಮೂರ್ತಿಗಳಿಗೆ ಬೂಟು ಎಸೆದು ಅವಮಾನ ಮಾಡಿದ್ದನ್ನು ಖಂಡಿಸಿ ಅ.16ರಂದು ವಿಜಯಪುರ ಜಿಲ್ಲಾ ಕೇಂದ್ರದಲ್ಲಿ ಬಂದ್‌ ಕರೆ ನೀಡಲಾಗಿದೆ ಎಂದು ಮಾಜಿ ಶಾಸಕ ಪ್ರೊ.ರಾಜು ಆಲಗೂರ ಹೇಳಿದರು.

ಕನ್ನಡಪ್ರಭ ವಾರ್ತೆ ವಿಜಯಪುರ

ದೇಶದ ಇತಿಹಾಸದಲ್ಲೇ ಸುಪ್ರೀಂ ಕೋರ್ಟ್‌ ಮುಖ್ಯನ್ಯಾಯಮೂರ್ತಿಗಳಿಗೆ ಬೂಟು ಎಸೆದು ಅವಮಾನ ಮಾಡಿದ್ದನ್ನು ಖಂಡಿಸಿ ಅ.16ರಂದು ವಿಜಯಪುರ ಜಿಲ್ಲಾ ಕೇಂದ್ರದಲ್ಲಿ ಬಂದ್‌ ಕರೆ ನೀಡಲಾಗಿದೆ ಎಂದು ಮಾಜಿ ಶಾಸಕ ಪ್ರೊ.ರಾಜು ಆಲಗೂರ ಹೇಳಿದರು.

ನಗರದ ಪ್ರವಾಸಿ ಮಂದಿರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಹಿಂದುಳಿದ ವರ್ಗದ ವ್ಯಕ್ತಿ ನ್ಯಾಯಮೂರ್ತಿಯಾಗಿರುವುದನ್ನು ಸಹಿಸದ ಹಿತಾಸಕ್ತಿಗಳಿಂದ ಅವಮಾನ ಆಗಿದೆ. ಅವಮಾನ ಮಾಡುವ ಮೂಲಕ ಸಂವಿಧಾನಕ್ಕೆ ಧಕ್ಕೆ ತಂದಿದ್ದಾರೆ. ಇದನ್ನು ಖಂಡಿಸಿ ಬಂದ್ ಮಾಡಿ ಪ್ರತಿಭಟಿಸಲಾಗುವುದು. ಹೋರಾಟದಲ್ಲಿ ದಲಿತಪರ, ಹಿಂದುಳಿದ ವರ್ಗದ, ಅಲ್ಪಸಂಖ್ಯಾತ ಸಂಘಟನೆಗಳು, ಪ್ರಗತಿಪರ ಚಿಂತಕರು ಭಾಗವಹಿಸಲಿದ್ದಾರೆ ಎಂದರು.

ಕಾಂಗ್ರೆಸ್ ಮುಖಂಡ ಅಬ್ದುಲ್ ಹಮೀದ ಮುಶ್ರೀಫ್ ಮಾತನಾಡಿ, ನ್ಯಾಯಮೂರ್ತಿಗಳಿಗೆ ಬೂಟು ಎಸೆದಂತೆಯೇ ಪ್ರಧಾನ ಮಂತ್ರಿಗಳಿಗೂ ಬೂಟು ಎಸೆದರೆ ನೀವು ಸುಮ್ಮನೆ ಇರುತ್ತೀರಾ?. ಇವರು ದಲಿತ ನ್ಯಾಯಾಧೀಶರಿದ್ದಾರೆ ಎಂದು ದಾಳಿ ಮಾಡಿದವನ ಮೇಲೆ ಕ್ರಮ ಕೈಗೊಳ್ಳುತ್ತಿಲ್ಲವೇನು ಎಂದು ಪ್ರಶ್ನಿಸಿದರು.

ಅಹಿಂದ ಮುಖಂಡ ಸೋಮನಾಥ ಕಳ್ಳಿಮನಿ ಮಾತನಾಡಿ, ಹಿಂದೂ ರಾಷ್ಟ್ರ, ಹಿಂದೂ ಪುನರುತ್ಥಾನ ಮಾಡುತ್ತೇವೆ ಎಂದು ಹೇಳುತ್ತಾರೆ. ಆದರೆ, ಮನುವಾದಿಗಳಿಗೆ ಸಹಿಸಲು ಆಗುತ್ತಿಲ್ಲ. ಕೆಳ ಜಾತಿಯವರನ್ನು ಉನ್ನತ ಸ್ಥಾನದಲ್ಲಿ ನೋಡಲು ಮನುವಾದಿಗಳಿಗೆ,‌ ಮೇಲ್ಜಾತಿಯವರಿಗೆ ಆಗುತ್ತಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಅಹಿಂದ ಮುಖಂಡ ಎಸ್.ಎಂ.ಪಾಟೀಲ ಗಣಿಹಾರ ಮಾತನಾಡಿ, ಘಟನೆ ಹಿಂದೆ ಆರ್‌ಎರ್‌ಎಸ್ ಇದೆ. ಶೂ ಎಸೆದವನನ್ನು ಹಾಗೂ ಆರ್‌ಎಸ್‌ಎಸ್ ಮುಖ್ಯಸ್ಥರನ್ನೂ ಬಂಧಿಸಬೇಕು.‌ ಅ.16ರಂದು ಬೆಳಗ್ಗೆ 11ಗಂಟೆಗೆ ನಗರದ ಸಿದ್ಧೇಶ್ವರ ದೇವಸ್ಥಾನದಿಂದ ಪ್ರತಿಭಟನೆ ಶರುವಾಗಲಿದೆ. ಈ ಹೋರಾಟದಲ್ಲಿ ಎಲ್ಲ ಸಂಘಟನೆಗಳು ಹಾಗೂ ಪ್ರಜ್ಞಾವಂತರು ಭಾಗವಹಿಸಬೇಕು ಎಂದು ಮನವಿ ಮಾಡಿದರು.

ಮುಖಂಡರಾದ ರಮೇಶ ಆಸಂಗಿ, ಅಭಿಷೇಕ ಚಕ್ರವರ್ತಿ, ಅಡಿವೆಪ್ಪ ಸಾಲಗಲ, ಸಿದ್ದು ರಾಯಣ್ಣವರ, ಇರ್ಫಾನ ಶೇಖ, ಫಯಾಜ್ ಕಲಾದಗಿ, ವಸಂತ ಹೊನಮೊಡೆ, ನಾಗರಾಜ ಲಂಬು, ಮಲ್ಲು ಬಿದರಿ, ಪರಶುರಾಮ‌ ಲಂಬು, ಶ್ರೀನಾಥ ಪೂಜಾರಿ ಉಪಸ್ಥಿತರಿದ್ದರು.

PREV

Recommended Stories

ದಲಿತರಿಗೆ ದಿಲ್ಲಿಯಲ್ಲಿ ಸ್ಪರ್ಧಾತ್ಮಕ ಪರೀಕ್ಷಾ ಕೇಂದ್ರ : ಜಾರಕಿಹೊಳಿ
ತೀವ್ರ ಚಳಿ, ಜ್ವರ : ದೇವೇಗೌಡ ಆಸ್ಪತ್ರೆಗೆ, ಐಸಿಯುನಲ್ಲಿ ಚಿಕಿತ್ಸೆ