ಶಾರ್ಟ್‌ ಸರ್ಕ್ಯೂಟ್‌: 9 ಎಕರೆ ಕಬ್ಬು ಸುಟ್ಟು ಭಸ್ಮ

KannadaprabhaNewsNetwork |  
Published : Feb 10, 2024, 01:50 AM IST
ವಿದ್ಯುತ್ ಶಾರ್ಟ್‌ ಸರ್ಕ್ಯೂಟ್‌ನಿಂದ ಸುಡುತ್ತಿರುವ ಕಟಾವಿಗೆ ಬಂದ ಕಬ್ಬು. | Kannada Prabha

ಸಾರಾಂಶ

ಅಫಜಲ್ಪುರ ತಾಲೂಕಿನ ಚವಡಾಪುರ ಗ್ರಾಮದ ರೈತರೊಬ್ಬರ ಜಮೀನಿನಲ್ಲಿ ಕಟಾವಿಗೆ ಬಂದಿದ್ದ ಕಬ್ಬು ವಿದ್ಯುತ್ ಶಾರ್ಟ್‌ ಸರ್ಕ್ಯೂಟ್‌ನಿಂದಾಗಿ ಸುಟ್ಟು ಭಸ್ಮವಾಗಿರುವ ಘಟನೆ ಶುಕ್ರವಾರ ನಡೆದಿದೆ.

ಚವಡಾಪುರ: ಅಫಜಲ್ಪುರ ತಾಲೂಕಿನ ಚವಡಾಪುರ ಗ್ರಾಮದ ರೈತರೊಬ್ಬರ ಜಮೀನಿನಲ್ಲಿ ಕಟಾವಿಗೆ ಬಂದಿದ್ದ ಕಬ್ಬು ವಿದ್ಯುತ್ ಶಾರ್ಟ್‌ ಸರ್ಕ್ಯೂಟ್‌ನಿಂದಾಗಿ ಸುಟ್ಟು ಭಸ್ಮವಾಗಿರುವ ಘಟನೆ ಶುಕ್ರವಾರ ನಡೆದಿದೆ.

ಚವಡಾಪುರ ಗ್ರಾಮದ ರೈತರಾದ ಸೈಬಣ್ಣ ಮಲ್ಲಪ್ಪ ಜಮಾದಾರ ಅವರು 5 ಎಕರೆ ಹಾಗೂ ರಾಜು ಅಂಬಣ್ಣ ಅವರ 4 ಎಕರೆ ಕಬ್ಬು ವಿದ್ಯತ್ ಶಾರ್ಟ್‌ ಸರ್ಕ್ಯೂಟ್‌ನಿಂದಾಗಿ ಸುಟ್ಟು ಹೋಗಿದೆ. ಬೆಂಕಿಗೆ ಆಹುತಿಯಾಗುತ್ತಿದ್ದುದ್ದನ್ನು ಕಂಡು ಅಗ್ನಿಶಾಮಕ ದಳದವರಿಗೆ ದೂರವಾಣಿ ಮೂಲಕ ವಿಷಯ ತಿಳಿಸಿದಾಗ ಅಗ್ನಿಶಾಮಕ ಠಾಣೆಯ ಸಿಬ್ಬಂದಿ ಸ್ಥಳಕ್ಕೆ ಬಂದು ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ. ಆದರೆ ಬೆಂಕಿ ನಂದಿಸುವಷ್ಟರಲ್ಲಿ 9 ಎಕರೆ ಕಬ್ಬು ಸುಟ್ಟು ಕರಕಲಾಗಿದ್ದು, ರೈತರ ಚಿಂತೆ ಇಮ್ಮುಡಿಗೊಳಿಸಿದೆ. ವಿದ್ಯುತ್ ಅವಗಢದಿಂದಾಗಿ ಕಟಾವಿಗೆ ಬಂದ ಕಬ್ಬು ಸುಟ್ಟಿದ್ದು ಸರ್ಕಾರ ಸೂಕ್ತ ಪರಿಹಾರ ನೀಡಬೇಕೆಂದು ರೈತರು ಮನವಿ ಮಾಡಿದ್ದಾರೆ.

ಅಗ್ನಿ ಅವಘಡ; ಅಖಂಡಹಳ್ಳಿಯಲ್ಲಿ 18 ಎಕರೆ ಕಬ್ಬು ನಾಶ

ಯಡ್ರಾಮಿ: ತಾಲೂಕಿನ ಅಖಂಡಹಳ್ಳಿ ಗ್ರಾಮದಲ್ಲಿ ಶುಕ್ರವಾರ ಮಧ್ಯಾಹ್ನ ಅಗ್ನಿ ಅವಘಡದಿಂದ18 ಎಕರೆಯಲ್ಲಿ ಬೆಳೆದ ಕಬ್ಬು ನಾಶವಾಗಿದೆ.

ಗ್ರಾಮದ ರೈತ ಮಲ್ಲಿಕಾರ್ಜುನ ಹೂಗಾರ ಅವರು ಲೀಜ್‌ಗೆ ಪಡೆದು 6 ಎಕರೆ ಹಾಗೆ 12 ಎಕರೆಯಲ್ಲಿ ಕಬ್ಬು ಬೆಳೆದಿದ್ದರು. ಹೊಲಗಳ ಮೇಲ್ಭಾಗದಲ್ಲಿ ವಿದ್ಯುತ್ ತಂತಿ ಹಾಯ್ದು ಹೋಗಿದ್ದು, ಶಾರ್ಟ್ ಸರ್ಕ್ಯೂಟ್ ಸಂಭವಿಸಿದ್ದರಿಂದ ಕಬ್ಬಿಗೆ ಬೆಂಕಿ ಹೊತ್ತಿಕೊಂಡಿದೆ ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ. ಸ್ಥಳಕ್ಕೆ ಅಗ್ನಿಶಾಮಕ ದಳದ ಸಿಬ್ಬಂದಿ ಬಂದು ಬೆಮಕಿ ನಂದಿಸಿದ್ದಾರೆ.

ಪರಿಹಾರಕ್ಕೆ ಒತ್ತಾಯ: ಕಟಾವಿನ ಹಂತದಲ್ಲಿದ್ದ ಕಬ್ಬನ್ನು ರೈತರು ಕಾರ್ಖಾನೆಗೆ ಸಾಗಿಸುವ ಸಿದ್ಧತೆಯಲ್ಲಿದ್ದರು. ಈ ವೇಳೆ ಅವಘಡ ಸಂಭವಿಸಿ ಹಾನಿಯಾದ ಹಿನ್ನೆಲೆ ಮಳ್ಳಿ ಉಗಾರ ಶುಗರ್ ಕಾರ್ಖಾನೆ ತಕ್ಷಣ ಕಬ್ಬು ಕಟಾವು ಮಾಡಬೇಕು. ಹಾನಿಯಾದ ಕಬ್ಬಿಗೆ ಸೂಕ್ತ ಪರಿಹಾರ ನೀಡಬೇಕು ಎಂದು ರೈತ ಮಲ್ಲಿಕಾರ್ಜುನ ಹೂಗಾರ ಮನವಿ ಮಾಡಿದ್ದಾರೆ.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಗೌಡ ಸಾರಸ್ವತ ಬ್ರಾಹ್ಮಣ ಸೇವಾ ಸಂಘದ ವಾಗ್ದೇವಿ ಟವರ್ಸ್‌ಗೆ ಭೂಮಿ ಪೂಜೆ
ಆತ್ಮನಿರ್ಭರ ಭಾರತಕ್ಕೆ ಸ್ವದೇಶಿ ವಸ್ತು ಬಳಕೆ ಅಗತ್ಯ: ನಾರಾಯಣಸಾ ಭಾಂಡಗೆ