ಶಾರ್ಟ್ ಸರ್ಕ್ಯೂಟ್: ನೂರಾರು ಎಕರೆ ಕಬ್ಬು ಭಸ್ಮ

KannadaprabhaNewsNetwork |  
Published : Jan 06, 2026, 04:15 AM IST
ಕಬ್ಬು ಹಾನಿಯಾದ ಸ್ಥಳಕ್ಕೆ ಜಿಲ್ಲಾಧಿಕಾರಿ ಸಂಗಪ್ಪ, ಎಸಿ ಶ್ವೇತಾ ಬೀಡಕರ, ತಹಸೀಲ್ದಾರ್‌ ಅನೀಲ ಬಡಿಗೇರ ಭೇಟಿ ನೀಡಿ ಪರಿಶೀಲಿಸಿದರು. | Kannada Prabha

ಸಾರಾಂಶ

ಲೋಕಾಪುರ ಸಮೀಪದ ಜಂಜೂರಕೊಪ್ಪ ಗ್ರಾಮದಲ್ಲಿ ಶಾರ್ಟ್ ಸರ್ಕ್ಯೂಟ್‌ನಿಂದ ಬೆಂಕಿ ಹೊತ್ತಿಕೊಂಡು 150ಕ್ಕೂ ಅಧಿಕ ಎಕರೆ ಕಬ್ಬು ಭಸ್ಮಗೊಂಡ ಘಟನೆ ಸೋಮವಾರ ಸಂಭವಿಸಿದೆ.

ಲೋಕಾಪುರ: ಸಮೀಪದ ಜಂಜೂರಕೊಪ್ಪ ಗ್ರಾಮದಲ್ಲಿ ಶಾರ್ಟ್ ಸರ್ಕ್ಯೂಟ್‌ನಿಂದ ಬೆಂಕಿ ಹೊತ್ತಿಕೊಂಡು 150ಕ್ಕೂ ಅಧಿಕ ಎಕರೆ ಕಬ್ಬು ಭಸ್ಮಗೊಂಡ ಘಟನೆ ಸೋಮವಾರ ಸಂಭವಿಸಿದೆ. ಸಂಜೆ ಬೆಂಕಿ ಹೊತ್ತಿಕೊಂಡಿದ್ದು, ನೋಡ ನೋಡುತ್ತಿದ್ದಂತೆಯೇ ಬೆಂಕಿಯ ಕೆನ್ನಾಲಿಗೆ ಅಕ್ಕಪಕ್ಕದ ತೋಟಗಳಿಗೆ ವ್ಯಾಪಿಸಿದೆ. ರೈತರು ಬೆಂಕಿ ನಂದಿಸಲು 3 ಗಂಟೆ ಕಾಲ ಪ್ರಯತ್ನಿಸಿದರು. ಸುತ್ತಲಿನ ಸಕ್ಕರೆ ಕಾರ್ಖಾನೆಗಳ ಹಾಗೂ ಅಗ್ನಿಶಾಮಕ ಸಿಬ್ಬಂದಿ ಸಹ ಬೆಂಕಿ ನಂದಿಸಲು ಹರಸಾಹಸಪಟ್ಟರು. ಆದರೂ ಹೆಚ್ಚಿನ ಅನಾಹುತ ತಡೆಯಲು ಸಾಧ್ಯವಾಗಲಿಲ್ಲ. ಸ್ಥಳಕ್ಕೆ ಜಿಲ್ಲಾಧಿಕಾರಿ ಸಂಗಪ್ಪ, ಜಮಖಂಡಿ ಎಸಿ ಶ್ವೇತಾ ಬೀಡಿಕರ, ತಹಸೀಲ್ದಾರ್ ಅನೀಲ ಬಡಿಗೇರ ಭೇಟಿ ನೀಡಿ ಪರಿಶೀಲಿಸಿದರು.

ಬೆಂಕಿ ದುರಂತದಲ್ಲಿ ನೂರಾರು ಎಕರೆ ಕಬ್ಬು ಬೆಳೆ ಹಾನಿಯ ಘಟನೆ ಕುರಿತು ವಿಷಾದ ವ್ಯಕ್ತಪಡಿಸಿರುವ ಜಿಲ್ಲಾ ಉಸ್ತುವಾರಿ ಸಚಿವ ಆರ್.ಬಿ. ತಿಮ್ಮಾಪೂರ ಅವರು

ಹಾನಿಯಾದ ಕಬ್ಬನ್ನು ಕೂಡಲೇ ಸಕ್ಕರೆ ಕಾರ್ಖಾನೆಗೆ ಸಾಗಿಸಲು ಜಿಲ್ಲಾಧಿಕಾರಿ ಸಂಗಪ್ಪ ಅವರಿಗೆ ಸೂಚನೆ ನೀಡಿದ್ದಾರೆ. ಲೋಕಾಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಅನುವಾದಕರು ಸಾಂಸ್ಕೃತಿಕ ರಾಯಭಾರಿಗಳಿದ್ದಂತೆ:ಎಸ್.ಜಿ.ಎಸ್‌
9.5 ಲಕ್ಷ ಲಂಚ ಪಡೆದ ಕೇಂದ್ರ ವಿದ್ಯುತ್‌ಸಂಸ್ಥೆ ಜಂಟಿ ನಿರ್ದೇಶಕ ಸಿಬಿಐ ಬಲೆಗೆ