ಕನ್ನಡಪ್ರಭ ವಾರ್ತೆ ಕೆಜಿಎಫ್
ಆದರೆ ೮ ಕೋಟಿ ರೂ.ಗಳ ವೆಚ್ಚದಲ್ಲಿ ನಿರ್ಮಿಸಿರುವ ಹೊಸ ಓಪಿಡಿ ಕಟ್ಟಡಕ್ಕೆ ಸ್ಥಳಾಂತರಿಸುವುದರಿಂದ ರೋಗಿಗಳಿಗೆ ಕುಳಿತುಕೊಳ್ಳಲು ಸ್ಥಳವಿಲ್ಲದೆ ತೊಂದರೆಯಾಗಿದ್ದು, ಹೊಸ ಓಪಿಡಿಯಲ್ಲಿರುವ ವೈದ್ಯರು ಹಳೇಯ ಆಸ್ಪತ್ರೆ ವಾರ್ಡ್ಗಳಿಗೆ ಹೋಗಿ ರೋಗಿಗಳಿಗೆ ಚಿಕಿತ್ಸೆ ನೀಡಲು ತೊಂದರೆಯಾಗಿರುವುದರ ಜೊತೆಗೆ ಆಸ್ಪತ್ರೆಯಲ್ಲಿ ಅಗತ್ಯವಿರುವ ದಾದಿಯರು ಮತ್ತು ವೈದ್ಯರ ಕೊರತೆಯಿಂದ ಪ್ರತಿ ದಿನ ಬರುವ ನೂರಾರು ರೋಗಿಗಳಿಗೆ ಚಿಕಿತ್ಸೆ ನೀಡಲು ಸಾಧ್ಯವಾಗದೆ ರೋಗಿಗಳನ್ನು ಕೋಲಾರಕ್ಕೆ ಕಳುಹಿಸಲಾಗುತ್ತಿದೆ.
ವಿಸ್ತಾರವಾಗಿದ್ದ ಹಳೆಯ ಕಟ್ಟಡಕಿವಿ, ಮೂಗು ಮತ್ತು ಗಂಟಲು ಬೇನೆಯಿಂದ ಬಳಲುತ್ತಿರುವ ರೋಗಿಗಳಿಗೆ, ಮೂಳೆ ಮುರಿತ ಮತ್ತು ಇನ್ನಿತರ ಕಾರಣಗಳಿಂದ ಬಳಲುತ್ತಿರುವ ರೋಗಿಗಳಿಗೆ ಇದುವರೆಗೆ ಸರ್ಕಾರಿ ಆಸ್ಪತ್ರೆಯ ಹಳೆಯ ಕಟ್ಟಡದಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು, ಹಳೇ ಕಟ್ಟಡದಲ್ಲಿದ್ದ ಓಪಿಡಿ ಬಳಿ ಚಿಕಿತ್ಸೆಗೆಂದು ಬರುವ ರೋಗಿಗಳಿಗೆ ಸಾಕಷ್ಟು ಸ್ಥಳಾವಕಾಶವಿದ್ದುದರಿಂದ ಮತ್ತು ಓಪಿಡಿ ಹೊರಗೆ ಮರಗಳು ಇರುವುದರಿಂದ ಅವುಗಳ ಕೆಳಗೆ ವೈದ್ಯರಿಗಾಗಿ ಕಾಯುತ್ತಾ ಕುಳಿತುಕೊಂಡು ತಮ್ಮ ಸರತಿ ಬಂದಾಗ ಚಿಕಿತ್ಸೆ ಪಡೆದುಕೊಂಡು ವಾಪಸ್ಸಾಗುತ್ತಿದ್ದರು.
ಓಪಿಡಿ- ವಾರ್ಡ್ ದೂರ ದೂರ
ಸಾರ್ವಜನಿಕ ಆಸ್ಪತ್ರೆ, ಮಹಿಳೆಯರು ಮತ್ತು ಮಕ್ಕಳ ಆಸ್ಪತ್ರೆ, ಸಾಂಕ್ರಾಮಿಕ ರೋಗಗಳ ಆಸ್ಪತ್ರೆ ಈ ಮೂರೂ ಆಸ್ಪತ್ರೆಗಳು ಸೇರಿ ಒಟ್ಟಾರೆ ೩೧೦ ಹಾಸಿಗೆಗಳ ದೊಡ್ಡ ಆಸ್ಪತ್ರೆಯಾಗಿದ್ದು, ಪ್ರತಿನಿತ್ಯ ಇಲ್ಲಿಗೆ ಚಿಕಿತ್ಸೆಗೆಂದು ಸುಮಾರು ೧೧೦೦ ಮಂದಿ ಹೊರ ರೋಗಿಗಳು ಬಂದು ಹೋಗುತ್ತಾರೆ. ಆದರೆ ಸಿಬ್ಬಂದಿ, ಫಿಜಿಶಿಯನ್, ಮಕ್ಕಳ ತಜ್ಞರು, ಶಸ್ತ್ರ ಚಿಕಿತ್ಸಕರು, ಸಾಮಾನ್ಯ ಕರ್ತವ್ಯಾಧಿಕಾರಿಗಳು ಮತ್ತು ಐಸಿಯು ವೈದ್ಯಾಧಿಕಾರಿಗಳು ಸೇರಿದಂತೆ ಒಟ್ಟು ಸುಮಾರು ೧೦ಕ್ಕಿಂತಲೂ ಹೆಚ್ಚು ವೈದ್ಯರ ಹುದ್ದೆಗಳು ಖಾಲಿ ಇವೆ,
ಅಲ್ಲದೆ ೧೦ ಕ್ಕಿಂತ ಹೆಚ್ಚು ಶುಶ್ರೂಣಾಧಿಕಾರಿಗಳ ಹುದ್ದೆಗಳು ಮತ್ತು ಸುಮಾರು ೯೫ಕ್ಕಿಂತ ಹೆಚ್ಚಿನ ಡಿ ಗ್ರೂಪ್ ನೌಕರರ ಹುದ್ದೆಗಳು ಖಾಲಿಯಾಗಿರುವುದರಿಂದ ಚಿಕಿತ್ಸೆಗೆ ಬರುವ ಬಹುತೇಕ ರೋಗಿಗಳನ್ನು ಕೋಲಾರ ಮತ್ತು ಬೆಂಗಳೂರಿನ ಆಸ್ಪತ್ರೆಗೆ ಹೆಚ್ಚಿನ ಚಿಕಿತ್ಸೆಗೆ ಶಿಫಾರಸ್ಸು ಮಾಡಿ ಕಳುಹಿಸಲಾಗುತ್ತಿದೆ.
- ಡಾ. ಸುರೇಶ್ ಕುಮಾರ್, ಜಿಲ್ಲಾ ಶಸ್ತ್ರ ಚಿಕಿತ್ಸಕ.